ಬ್ರೇಕಿಂಗ್ ನ್ಯೂಸ್
11-09-21 03:17 pm Shreeraksha, Boldsky ಡಾಕ್ಟರ್ಸ್ ನೋಟ್
ಮಾಂಸಹಾರಿಗಳ ಫೇವರೆಟ್ ಐಟಮ್ ಅಂದ್ರೆ ಚಿಕನ್. ವೀಕೆಂಡ್ ಬಂದ್ರೆ ಸಾಕು, ಅಮ್ಮನ ಕೈಯಿಂದ ವೆರೈಟಿ ವೆರೈಟಿ ಡಿಶ್ ಮಾಡಿಸಿಕೊಂಡು ತಿನ್ನುವ ಖುಷಿನೇ ಬೇರೆ. ಇಂತಹ ಚಿಕನ್ ನ ಮಾರ್ಕೆಟ್ ನಿಂದ ತಂದಮೇಲೆ ತೊಳೆಯುತ್ತೇವೆ. ಆದರೆ ಬೇಯಿಸುವ ಮುನ್ನ ಕೋಳಿಮಾಂಸ ತೊಳೆಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ, ಹೀಗಂತ ಹೇಳುತ್ತಿರುವ ಸಿಡಿಸಿ ಅಂದ್ರೆ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ. ಹಾಗಾದ್ರೆ ಏನಿದು ವಿಚಾರ, ಯಾಕೆ ತೊಳೆಯಬಾರದು, ತೊಳೆದರೆ ಏನಾಗುವುದು ಎಲ್ಲವನ್ನು ಇಲ್ಲಿ ನೋಡೋಣ.
ಬೇಯಿಸುವ ಮುನ್ನ ಕೋಳಿ ಮಾಂಸವನ್ನು ತೊಳೆಯಬಾರದು ಏಕೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ:

ಚಿಕನ್ ನಲ್ಲಿರುವ ಪೋಷಕಾಂಶಗಳು:
ಚಿಕನ್ ನಲ್ಲಿ ಪೋಷಕಾಂಶಕ್ಕೇನೂ ಕೊರತೆಯಿಲ್ಲ. ಇದರಲ್ಲಿ ಪ್ರೋಟೀನ್ ಅಗಾಧ ಪ್ರಮಾಣದಲ್ಲಿದ್ದು, ನಮ್ಮ ದೇಹದ ಸ್ನಾಯು-ಮೂಳೆಗಳು ಗಟ್ಟಿಗೊಳಿಸುತ್ತವೆ. ಕೊಬ್ಬಿನಾಂಶನೂ ಬಹಳ ಕಡಿಮೆ. ಸಾಮಾನ್ಯವಾಗಿ ಮಾಂಸಹಾರದಿಂದಲೇ ತೂಕ ಏರುತ್ತದೆ ಎಂದು ನಾವೆಲ್ಲ ಅಂದುಕೊಂಡಿದ್ದೇವೆ, ಆದರೆ ಕೋಳಿ ಮಾಂಸದಿಂದ ಸ್ನಾಯುಗಳು ಬೆಳೆಯುತ್ತವೆ, ಹೊರತು ಕೊಬ್ಬಿನ ಸಂಗ್ರಹವಾಗುವುದು ಕಡಿಮೆ. ಇನ್ನೂ ಮಕ್ಕಳ ಬೆಳವಣಿಗೆಗೂ ಚಿಕನ್ ಸೂಕ್ತ ಏಕೆಂದರೆ ಇದರಲ್ಲಿ ಅಮೈನೋ ಆಸಿಡ್ ಅಧಿಕವಾಗಿದ್ದು, ಹಸಿವನ್ನ ಹೆಚ್ಚಿಸುತ್ತದೆ. ಇದರ ಜೊತೆಗೆ ರೋಗ ನಿರೋಧಕ ಶಕ್ತಿಗೆ, ಕೂದಲಿಗೆ, ಹೆಣ್ಮಕ್ಕಳ ತಿಂಗಳ ಸಮಸ್ಯೆ ಸೇರಿದಂತೆ ಹತ್ತು-ಹಲವಾರು ಪ್ರಯೋಜನಗಳನ್ನ ಈ ಒಂದು ಆಹಾರ ಪದಾರ್ಥದಿಂದ ಪಡೆಯಬಹುದು. ಚಿಕನ್ ಬೇಯಿಸುವ ಮುನ್ನ ತೊಳೆಯುವುದು ಸಾಮಾನ್ಯ. ಆದರೆ ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕಾರಕ ಎಂದು ಅಮೆರಿಕಾದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಹೇಳುತ್ತಿದೆ. ಹಸಿಕೋಳಿ ಮಾಂಸ ತೊಳೆಯುವುದರಿಂದ ರೋಗಾಣುಗಳು ಹರಡಬಹುದು ಎಂಬುದು ಇದರ ಹೇಳಿಕೆಯಾಗಿದೆ.

ಬೇಯಿಸುವ ಮುನ್ನ ಕೋಳಿಮಾಂಸ ತೊಳೆಯಬಾರದು ಏಕೆ?:
ಸಿಡಿಸಿ ಪ್ರಕಾರ, ಹಸಿಕೋಳಿಯನ್ನ ತೊಳೆಯುವುದರಿಂದ ಕೋಳಿಯಲ್ಲಿರುವ ರೋಗಾಣುಗಳು ಇತರ ಆಹಾರ ಅಥವಾ ಅಡುಗೆಮನೆಯಲ್ಲಿರುವ ಪಾತ್ರೆಗಳಿಗೆ ವರ್ಗಾವಣೆಯಾಗುತ್ತವೆ. ಅಂದರೆ, ಮಾಂಸದಲ್ಲಿರೋ ಸೂಕ್ಷ್ಮಜೀವಿಗಳು ಅಡುಗೆ ಮನೆ ಸೇರುವ ಸಾಧ್ಯತೆ ಹೆಚ್ಚು. ಇದೇ ಕಾರಣಕ್ಕಾಗಿಯೇ ತೊಳೆಯಬಾರದು ಎಂದು ಎಚ್ಚರಿಕೆ ನೀಡಿದೆ.

ತೊಳೆದರೆ ಏನಾಗಬಹುದು?:
ಕೋಳಿ ಮಾಂಸವನ್ನ ಸಿಂಕ್ ನಲ್ಲಿ ತೊಳೆಯುವುದರಿಂದ ಫುಡ್ ಪಾಯಿಸನ್ ಆಗಬಹುದು. ಅದೇಗೆ ಅಂದ್ರೆ, ಚಿಕನ್ ನಲ್ಲಿ ಸಾಮಾನ್ಯವಾಗಿ ಸಾಲ್ಮೊನೆಲ್ಲಾ, ಕ್ಲೋಸ್ಟ್ರಿಡಿಯಮ್ ಪರ್ಫ್ರೀಂಜನ್ಸ್ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಎಂಬ ಬ್ಯಾಕ್ಟೀರಿಯಾಗಳು ಹುಟ್ಟಿಕೊಳ್ಳುತ್ತವೆ. ನಾವು ಮಾರ್ಕೆಟ್ ನಿಂದ ತಂದ ಚಿಕನ್ ನಲ್ಲಿ ಈ ಬ್ಯಾಕ್ಟೀರಿಯಾಗಳಲ್ಲಿ ಒಂದು ಇದ್ರೂ, ಅದನ್ನ ತೊಳೆದಾಗ, ಈ ಬ್ಯಾಕ್ಟಿರಿಯಾ ಅಡುಗೆಮನೆಯಲ್ಲಿರುವ ಪಾತ್ರೆ ಅಥವಾ ಇತರ ಆಹಾರಕ್ಕೆ ಸೇರಿಬಿಡುತ್ತವೆ. ಇದನ್ನರಿಯದ ನಾವು, ಅದನ್ನೇ ತಿಂದು ಅಥವಾ ಅದೇ ಪಾತ್ರೆ ಬಳಸಿದರೆ, ಅದು ಆಹಾರದ ವಿಷಕ್ಕೆ ಕಾರಣವಾಗುವುದು.

ಕೋಳಿಮಾಂಸ ತೊಳೆಯುವ ಬದಲು ಏನು ಮಾಡಬೇಕು?:
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm