ಬ್ರೇಕಿಂಗ್ ನ್ಯೂಸ್
27-09-21 03:38 pm Reena TK, Boldsky ಡಾಕ್ಟರ್ಸ್ ನೋಟ್
ಅತೀ ಹೆಚ್ಚು ಮಧುಮೇಹಿಗಳನ್ನು ಹೊಂದಿರುವವರಲ್ಲಿ ಭಾರತ ನಂ. 1 ಸ್ಥಾನದಲ್ಲಿದೆ. ವರ್ಷದಿಂದ ವರ್ಷಕ್ಕೆ ಮಧುಮೇಹಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಅನಾರೋಗ್ಯಕರ ಜೀವನಶೈಲಿ ಹಾಗೂ ವ್ಯಾಯಾಮ ಇಲ್ಲದೇ ಇರುವುದು ಮಧುಮೇಹ ಸಂಖ್ಯೆ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ.
ಮಧುಮೇಹ ಸಮಸ್ಯೆ ವಂಶಪಾರಂಪರ್ಯವಾಗಿಯೂ ಬರುವುದು, ಆದರೆ ಪೋಷಕರಿಗೆ ಮಧುಮೇಹವಿದ್ದರೂ ಮಕ್ಕಳು ಆರೋಗ್ಯಕರ ಜೀವನಶೈಲಿ ಪಾಲಿಸಿದರೆ ಮಧುಮೇಹ ತಡೆಗಟ್ಟಬಹುದು.
ಮಧುಮೇಹ ಬಂದರೆ ಅದನ್ನು ನಿಯಂತ್ರಣದಲ್ಲಿಡಬಹುದೇ ಹೊರತು ಸಂಪೂರ್ಣವಾಗಿ ಗುಣ ಪಡಿಸಲು ಸಾಧ್ಯವಿಲ್ಲ. ಹಾಗಾಗಿ ಮಧುಮೇಹ ಬಂದ ಮೇಲೆ ಆಹಾರಕ್ರಮದ ಕಡೆಗೆ ತುಂಬಾನೇ ಗಮನಹರಿಸಬೇಕು. ಏಕೆಂದರೆ ತಾವು ತಿಂದ ಆಹಾರದಿಂದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾದರೆ ಆರೋಗ್ಯಕ್ಕೆ ಕಷ್ಟ. ಆದ್ದರಿಂದ ಹಣ್ಣುಗಳನ್ನು ಕೂಡ ತಿನ್ನಲು ಭಯ ಪಡುತ್ತಾರೆ. ಹಣ್ಣುಗಳಲ್ಲಿ ಸಿಹಿಯಂಶ ಹೆಚ್ಚಾಗಿ ಇರುವುದರಿಂದ ಹಣ್ಣುಗಳನ್ನು ತಿಂದಾಗ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುವುದು. ಆದರೆ ಈ ಹಣ್ಣುಗಳನ್ನು ಮಧುಮೇಹಿಗಳು ಯಾವುದೇ ಭಯವಿಲ್ಲದೆ ತಿನ್ನಬಹುದು. ಈ ಹಣ್ಣುಗಳನ್ನು ತಿನ್ನುವುದರಿಂದ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ ಹಾಗೂ ಈ ಹಣ್ಣುಗಳಲ್ಲಿರುವ ಪೋಷಕಾಂಶಗಳೂ ದೊರೆಯುವಂತಾಗುವುದು. ಬನ್ನಿ, ಯಾವೆಲ್ಲಾ ಹಣ್ಣುಗಳು ಮಧುಮೇಹಿಗಳಿಗೆ ಒಳ್ಳೆಯದು ಎಂದು ನೋಡೋಣ:

ಸೇಬು
ಸೇಬನ್ನು ಮಿತಿಯಲ್ಲಿ ತಿನ್ನಬಹುದು. ಇದರಲ್ಲಿರುವ ಪೋಷಕಾಂಶಗಳು ಮಧುಮೇಹಿಗಳಿಗೆ ತುಂಬಾನೇ ಒಳ್ಳೆಯದು. ಅದರಲ್ಲೂ ಮರ ಸೇಬು ತುಂಬಾನೇ ಒಳ್ಳೆಯದು. ದಿನದಲ್ಲಿ ಒಂದು ಸೇಬನ್ನು ಯಾವುದೇ ಭಯವಿಲ್ಲದೆ ತಿನ್ನಬಹುದು.

ಬೆಣ್ಣೆ ಹಣ್ಣು
ಬೆಣ್ಣೆ ಹಣ್ಣು ಪೋಷಕಾಂಶಗಳ ಆಗರ. ಇದರಲ್ಲಿ 20ಕ್ಕೂ ಹೆಚ್ಚು ಖನಿಜಾಂಶಗಳಿವೆ. ಅಲ್ಲದೆ ಇದರಲ್ಲಿ ನಾರಿನಂಶ ಕೂಡ ಅಧಿಕವಿದೆ. ಬೆಣ್ಣೆ ಹಣ್ಣು ತಿಂದರೆ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ. ದಿನದಲ್ಲಿ ಅರ್ಧ ಬೆಣ್ಣೆ ಹಣ್ಣು ತಿಂದರೆ ತುಂಬಾ ಒಳ್ಳೆಯದು. ಇನ್ನು ಮೈ ಬೊಜ್ಜು ಕರಗಿಸಲು ಇದನ್ನು ಒಂದು ಹೊತ್ತಿನ ಆಹಾರವಾಗಿ ಸೇವಿಸಬಹುದು.

ಬೆರ್ರಿ ಹಣ್ಣುಗಳು
ಬ್ಲ್ಯಾಕ್ ಬೆರ್ರಿ, ಬ್ಲೂ ಬೆರ್ರಿ, ಸ್ಟ್ರಾಬೆರ್ರಿ ಈ ರೀತಿಯ ಬೆರ್ರಿ ಹಣ್ಣುಗಳಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ಗಳು, ನಾರಿನಂಶ ಇವೆಲ್ಲಾ ಇದ್ದು ದಿನಾ ಸ್ವಲ್ಪ ಬೆರ್ರಿ ಹಣ್ಣುಗಳನ್ನು ತಿನ್ನಬಹುದು. ಬೆರ್ರಿ ಹಣ್ಣುಗಳನ್ನು ತಿನ್ನುವುದರಿಂದ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ.

ಪಪ್ಪಾಯಿ
ಪಪ್ಪಾಯಿ ಮಧುಮೇಹಿಗಳಿಗೆ ಸೂಕ್ತವಾದ ಆಹಾರವಾಗಿದೆ. ದಿನಾ ಸ್ವಲ್ಪ ಪಪ್ಪಾಯಿ ತಿನ್ನುವುದರಿಂದ ಜೀವ ಕಣಗಳಿಗೆ ಹಾನಿಯುಂಟಾಗುವುದನ್ನು ತಡೆಗಟ್ಟಬಹುದು.

ಸ್ಟಾರ್ ಫ್ರೂಟ್
ಹುಳಿ, ಸಿಹಿ ಮಿಶ್ರಿತ ಈ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ನಾರಿನಂಶ ಹೇರಳವಾಗಿದೆ. ಇದು ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಂತೆ ತಡೆಗಟ್ಟುವುದರ ಜೊತೆಗೆ ಉರಿಯೂತದ ಸಮಸ್ಯೆ ಕೂಡ ಉಂಟಾಗುವುದಿಲ್ಲ.

ಕಿವಿ ಹಣ್ಣು
ಕಿವಿ ಹಣ್ಣಿನಲ್ಲಿ ವಿಟಮಿನ್ ಇ, ಕೆ ಹಾಗೂ ಪೊಟಾಷ್ಯಿಯಂ ಇದ್ದು ಇದರಲ್ಲಿ ಸಕ್ಕರೆಯಂಶ ಕೂಡ ಕಡಿಮೆ ಇದೆ. ಇದು ಡಯಾಬಿಟಿಕ್ ಫ್ರೆಂಡ್ಲಿ ಹಣ್ಣಾಗಿದೆ.

ಕರ್ಬೂಜ, ಕಲ್ಲಂಗಡಿ ಹಣ್ಣು
ಈ ಹಣ್ಣುಗಳಲ್ಲಿ ನಾರಿನಂಶ, ಪೊಟಾಷ್ಯಿಯಂ, ಮೆಗ್ನಿಷ್ಯಿಯಂ, ವಿಟಮಿನ್ ಬಿ, ಸಿ ಇದ್ದು ಇದನ್ನು ಮಿತಿಯಲ್ಲಿ ತಿಂದರೆ ಯಾವುದೇ ತೊಂದರೆಯಿಲ್ಲ. ಆದರೆ ಈ ಹಣ್ಣುಗಳನ್ನು ಸಕ್ಕರೆ ಹಾಕಿ ಜ್ಯೂಸ್ ಮಾಡಿ ಕುಡಿಯಬೇಡಿ.

ಡ್ರ್ಯಾಗನ್ ಫ್ರೂಟ್
ಡ್ರ್ಯಾಗನ್ ಹಣ್ಣುಗಳಲ್ಲಿ ನಾರಿನಂಶ, ವಿಟಮಿನ್ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್ಗಳಿದ್ದು ಮಧುಮೇಹಿಗಳು ತಮ್ಮ ಆಹಾರಕ್ರಮದಲ್ಲಿ ಸೇರಿಸಬಹುದಾದ ಹಣ್ಣಾಗಿದೆ.

ಪಿಯರ್ ಹಣ್ಣು
ಪಿಯರ್ ಹಣ್ಣು ಜೀರ್ಣಕ್ರಿಯೆಗೆ ತುಂಬಾನೇ ಸಹಕಾರಿ. ಇದನ್ನು ತಿನ್ನುವುದರಿಂದ ಮಧುಮೇಹದಂಥ ಅಪಾಯ ತಡೆಗಟ್ಟಬಹುದು ಎಂದು ಅಧ್ಯಯನಗಳು ಕೂಡ ಹೇಳಿವೆ.
ಕಿತ್ತಳೆ ಹಣ್ಣು
ಈ ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಈ ಹಣ್ಣುಗಳನ್ನು ನಿಮ್ಮ ಆಹಾರಕ್ರಮದಲ್ಲಿ ಸೇರಿಸಬಹುದಾಗಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm