ಬ್ರೇಕಿಂಗ್ ನ್ಯೂಸ್
04-10-21 03:47 pm Source: News 18 Kannada ಡಾಕ್ಟರ್ಸ್ ನೋಟ್
ಹೆಚ್ಚಿನ ಜನರು ಬೇಳೆಕಾಳುಗಳನ್ನು ಬೇಯಿಸುವ ಮೊದಲು ತೊಳೆಯುತ್ತಾರೆ. ಆದರೆ ಕೆಲವೇ ಕೆಲವು ಬೆರಳೆಣಿಕೆ ಮಂದಿಯಷ್ಟೇ ಜನರು ಬೇಯಿಸುವ ಮೊದಲು ಅವುಗಳನ್ನು ನೆನೆಸುತ್ತಾರೆ. ದ್ವಿದಳ ಧಾನ್ಯಗಳಾದ ರಾಜ್ಮಾ ಮತ್ತು ಚೋಲೆಗಳನ್ನು ರಾತ್ರಿಯಿಡೀ ನೆನೆಸಬೇಕು. ಇತರ ಬೇಳೆಗಳನ್ನು ಬೇಗನೆ ಬೇಯುವುದರಿಂದ ಹೆಚ್ಚಿನ ಜನರು ನೆನೆಸುವುದನ್ನು ಬಿಟ್ಟುಬಿಡುತ್ತಾರೆ. ಆದರೆ ನೆನೆಸುವುದರಿಂದ ಸಾಕಷ್ಟು ಅನುಕೂಲಗಳಿವೆ ಮತ್ತು ಅಡುಗೆ ಮಾಡುವ ಮೊದಲು ಬೇಳೆಕಾಳುಗಳನ್ನು ಯಾಕೆ ನೆನೆಸಬೇಕು ಎಂದು ನಿಮಗೆ ತಿಳಿದಿದೆಯೇ..?
ತನ್ನ ಇತ್ತೀಚಿನ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, ಆಯುರ್ವೇದ ತಜ್ಞ ಡಾ. ದೀಕ್ಷಾ ಭಾವ್ಸರ್ ಅವರು ಎಂದಿಗೂ ಧಾನ್ಯ ಬೇಳೆಕಾಳುಗಳನ್ನು ನೆನೆಸುವುದನ್ನು ಮರೆಯುವುದಿಲ್ಲ. ಜೊತೆಗೆ ದ್ವಿದಳ ಧಾನ್ಯಗಳನ್ನು ನೆನೆಸುವುದರಿಂದ ಆಗುವ ಅನುಕೂಲ ಏನು ಎಂಬುದನ್ನು ವಿವರಿಸುತ್ತಾರೆ. ಏಕೆಂದರೆ ಅದು ಆರೋಗ್ಯಕ್ಕೆ ಉತ್ತಮ ಎನ್ನುತ್ತಾರೆ.
ಡಾ. ದೀಕ್ಷಾ ಪ್ರಕಾರ, ಕೆಲವು ಬೇಳೆಕಾಳುಗಳು, ಧಾನ್ಯಗಳು ಫೈಟಿಕ್ ಆ್ಯಸಿಡ್ ಅನ್ನು ಒಳಗೊಂಡಿರುತ್ತವೆ, ಇದು ಖನಿಜಗಳು ಮತ್ತು ಪೋಷಕಾಂಶಗಳನ್ನು ಹೀರಿಕೊಳ್ಳುವ ದೇಹದ ಸಾಮರ್ಥ್ಯ ತಡೆಯುತ್ತದೆ. ಫೈಟಿಕ್ ಆ್ಯಸಿಡ್ ಮತ್ತು ಇತರ ವಿರೋಧಿ ಪೋಷಕಾಂಶಗಳನ್ನು ವಿಭಜಿಸುವ ಮತ್ತು ಜೀರ್ಣವೂ ಸುಲಭವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಬೇಳೆಕಾಳು, ಧಾನ್ಯಗಳನ್ನು ನೆನೆಸುವುದರಿಂದ ದೇಹದ ಖನಿಜಾಂಶ ಹೀರಿಕೊಳ್ಳುವಿಕೆಯ ಪ್ರಮಾಣ ಹೆಚ್ಚಾಗುತ್ತದೆ. ಸ್ವಲ್ಪ ಹೊತ್ತು ನೆನೆಸಿದಾಗ, ಫೈಟೇಸ್ ಎಂಬ ಕಿಣ್ವವು ಪ್ರಚೋದಿಸಲ್ಪಡುತ್ತದೆ. ಫೈಟೇಸ್ ಫೈಟಿಕ್ ಆಮ್ಲದ ವಿಭಜನೆಗೆ ಸಹಾಯ ಮಾಡುತ್ತದೆ ಹಾಗೂ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಸತು ಅದರಲ್ಲಿಯೇ ಉಳಿದುಕೊಳ್ಳಲು ಸಹಕರಿಸುತ್ತದೆ. ಇದು ಹೀರಿಕೊಳ್ಳುವ ಪ್ರಕ್ರಿಯೆಯನ್ನು ಹೆಚ್ಚು ಸರಳಗೊಳಿಸುತ್ತದೆ.
ನೆನೆಸುವುದು ಅಮೈಲೇಸ್ ಅನ್ನು ಉತ್ತೇಜಿಸುತ್ತದೆ, ಇದು ಬೇಳೆಕಾಳುಗಳಲ್ಲಿನ ಸಂಕೀರ್ಣವಾದ ಪಿಷ್ಟವನ್ನು ವಿಭಜಿಸುತ್ತದೆ, ಅವುಗಳನ್ನು ಜೀರ್ಣಿಸಿಕೊಳ್ಳುವುದಕ್ಕೆ ಸುಲಭವಾಗಿಸುತ್ತದೆ.
ಡಾ. ದೀಕ್ಷಾ ಪ್ರಕಾರ, ನೆನೆಸುವ ಪ್ರಕ್ರಿಯೆಯು ಕಾಳುಗಳಿಂದ ಗ್ಯಾಸ್ ಉತ್ಪಾದಿಸುವ ರಾಸಾಯನಿಕಗಳನ್ನು ಸಹ ತೆಗೆದುಹಾಕುತ್ತದೆ. ಹೆಚ್ಚಿನ ದ್ವಿದಳ ಧಾನ್ಯಗಳಲ್ಲಿ ಸಂಕೀರ್ಣ ಒಲಿಗೊಸ್ಯಾಕರೈಡ್ಗಳು ಸೇರಿವೆ, ಇದು ಒಂದು ರೀತಿಯ ಸಂಕೀರ್ಣ ಸಕ್ಕರೆಯಾಗಿದ್ದು, ಹೊಟ್ಟೆ ಉಬ್ಬುವುದು ಮತ್ತು ಗ್ಯಾಸ್ಗೆ ಕಾರಣವಾಗುತ್ತದೆ. ನೆನೆಸಿದ ನಂತರ ಈ ಸಂಕೀರ್ಣ ಸಕ್ಕರೆಯ ಮಟ್ಟವು ಗಣನೀಯವಾಗಿ ಕಡಿಮೆಯಾಗುತ್ತದೆ, ಈ ರೀತಿ ಮಾಡುವುದರಿಂದ ಗ್ಯಾಸ್ ಸಮಸ್ಯೆಗಳಿಂದ ದುರವಿರಬಹುದು. ಅಲ್ಲದೇ ಅಡುಗೆ ಸಮಯ ಕಡಿಮೆಯಾಗುತ್ತದೆ ಎಂದು ಅವರು ಹೇಳಿದರು.
ವಿವಿಧ ದ್ವಿದಳ ಧಾನ್ಯಗಳನ್ನು ಎಷ್ಟು ಸಮಯ ನೆನೆಸಬೇಕು?
ಯಾವುದೇ ಧಾನ್ಯಗಳನ್ನು ರಾತ್ರಿಯಿಡೀ ನೆನೆಸುವುದು ಉತ್ತಮ ಅಭ್ಯಾಸವಾಗಿದೆ.
ಇದು ಟ್ಯಾನಿನ್ ಅಥವಾ ಫೈಟಿಕ್ ಆ್ಯಸಿಡ್ ಅನ್ನು ಒಳಗೊಂಡಿರುವುದರಿಂದ ನಾವು ಇದನ್ನು ಬಳಸಬಾರದು. ಆದ್ದರಿಂದ ಇದನ್ನು ಗಿಡಗಳಿಗೆ ಬಳಸಬಹುದು. ಆ ರೀತಿಯಲ್ಲಿ, ಮನೆ ಗಿಡಗಳು ಕೆಲವು ಪೋಷಕಾಂಶಗಳನ್ನು ಸಹ ಪಡೆಯುತ್ತವೆ.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm