ಬ್ರೇಕಿಂಗ್ ನ್ಯೂಸ್
10-12-21 11:10 am Source: Boldsky Kannada ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಜನರನ್ನು ಕಾಡುತ್ತಿರುವ ಸಮಸ್ಯೆಯೆಂದರೆ ಮಧುಮೇಹ. ವಿಶ್ವದಲ್ಲಿ ಮಧುಮೇಹಿಗಳ ಸಂಖ್ಯೆಯಲ್ಲಿ ಭಾರತ ಮುಂಚೂಣಿಯಲ್ಲಿದೆ. 4-5 ದಶಕಗಳ ಹಿಂದೆ ಭಾರತದಲ್ಲಿ ತುಂಬಾ ಅಪರೂಪವಾಗಿದ್ದ ಮಧುಮೇಹ, ಇದೀಗ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ಮನೆಯಲ್ಲಿ ಮಧುಮೇಹಿಗಳಿದ್ದಾರೆ. ಬದಲಾಗಿದ ಜೀವನಶೈಲಿ ಹಾಗೂ ಆಹಾರಶೈಲಿ ಮಧುಮೇಹಕ್ಕೆ ಪ್ರಮುಖ ಕಾರಣವಾಗಿದೆ.
ಮಧುಮೇಹ ಒಮ್ಮೆ ಬಂದರೆ ಅದನ್ನು ನಿಯಂತ್ರಿಸಬಹುದೇ ಹೊರತು ಅದರಿಂದ ಸಂಪೂರ್ಣ ಗುಣಮುಖರಾಗಲು ಸಾಧ್ಯವಿಲ್ಲ. ಮಧುಮೇಹವನ್ನು ನಿಯಂತ್ರಣದಲ್ಲಿಡಲು ನಮ್ಮ ಪರಿಸರದಲ್ಲಿರುವ ಅನೇಕ ಸಸ್ಯಗಳು ಸಹಕಾರಿ. ಉದಾಹರಣೆಗೆ ಅಮೃತ ಬಳ್ಳಿ, ಕಹಿಬೇವು , ಸೀಬೆಕಾಯಿ ಎಲೆ ಮುಂತಾದೆವುಗಳು.
ಈ ಲೇಖನದಲ್ಲಿ ಸೀಬೆಕಾಯಿ ಎಲೆ ಮಧುಮೇಹ ಹಾಗೂ ಕೊಲೆಸ್ಟ್ರಾಲ್ ನಿಯಂತ್ರಿಸುವಲ್ಲಿ ಹೇಗೆ ಸಹಕಾರಿ, ಇದನ್ನು ಹೇಗೆ ಬಳಸಬೇಕು, ಏನಾದರೂ ಅಡ್ಡಪರಿಣಾಮವಿದೆಯೇ ಎಂಬುವುದನ್ನು ವಿವರವಾಗಿ ಹೇಳಲಾಗಿದೆ ನೋಡಿ:
ಸೀಬೆಕಾಯಿ ಎಲೆ ಮಧುಮೇಹ ನಿಯಂತ್ರಣಕ್ಕೆ ಪರಿಣಾಮಕಾರಿಯೇ?
ಸೀಬೆಕಾಯಿ ಎಲೆಯನ್ನು ಹಲವು ಆರೋಗ್ಯ ಸಮಸ್ಯೆಗಳಿಗೆ ಮನೆಮದ್ದಾಗಿ ಹಿಂದಿನಿಂದಲೂ ಬಳಸುತ್ತಾ ಬಂದಿದ್ದಾರೆ. ಜ್ವರ, ಬೇಧಿ, ಉರಿಯೂತ ಇಂಥ ಸಮಸ್ಯೆಗಳಿಗೆ ಇದನ್ನು ಮನೆಮದ್ದಾಗಿ ಬಳಸಲಾಗುವುದು. ಸೀಬೆಕಾಯಿ ಎಲೆಯನ್ನು ಮಧುಮೇಹ ಹಾಗೂ ಕೊಲೆಸ್ಟ್ರಾಲ್ ನಿಯಂತ್ರಣಕ್ಕೂ ಬಳಸಬಹುದು. ಮಧುಮೇಹ ನಿಯಂತ್ರಣಕ್ಕೆ ಸೀಬೆಕಾಯಿ ಎಲೆ ಪರಿಣಾಮಕಾರಿ ಎಂಬುವುದು ಅಧ್ಯಯನಗಳಿಂದಲೂ ಸಾಬೀತಾಗಿದೆ. Nutrition and Metabolism ಎಂಬ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನ ವರದಿಯು ಸೀಬೆಕಾಯಿ ಎಲೆ ಊಟದ ಬಳಿಕ ದೇಹದ ರಕ್ತದಲ್ಲಿ ಸಕ್ಕರೆಯಂಶ ತಡೆಗಟ್ಟಲು ಸಹಕಾರಿ ಎಂದು ಹೇಳಿದೆ.
ಮಧುಮೇಹಿಗಳಲ್ಲಿ ಈ ಸಮಸ್ಯೆಗಳನ್ನು ತಡೆಗಟ್ಟುತ್ತೆ
ಊಟವಾದ ಬಳಿಕ ಸೀಬೆಕಾಯಿ ಎಲೆ ಹಾಕಿ ಕುದಿಸಿದ ನೀರನ್ನು ಕುಡಿದರೆ ಮಧುಮೇಹಿಗಳಲ್ಲಿ ಕಂಡು ಬರುವ ಹೈಪರ್ಗ್ಲೈಸೀಮಿಯಾ, ಹೈಪರ್ಇನ್ಸುಲಿನೆಮಿಯಾ, ಇನ್ಸುಲಿನ್ ಪ್ರತಿರೋಧ ಹಾಗೂ ಹೈಪರ್ಲಿಪಿಡೆಮಿಯಾ ಲಕ್ಷಣಗಳನ್ನು ತಡೆಗಟ್ಟಲು ಸಹಕಾರಿ. ಇದು ಮಧುಮೇಹವನ್ನು ನಿಯಂತ್ರಿಸುವುದು ಮಾತ್ರವಲ್ಲ ಕೆಟ್ಟ ಕೊಲೆಸ್ಟ್ರಾಲ್ ಕೂಡ ಕಡಿಮೆಯಾಗುವುದು.
ಸೀಬೆಕಾಯಿ ಎಲೆಯ ನೀರು ಕುಡಿಯುವುದರಿಂದ ಏನಾದರೂ ಅಡ್ಡಪರಿಣಾಮವಿದೆಯೇ?
ಸೀಬೆಕಾಯಿ ಎಲೆಯಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂಬುವುದು ಅಧ್ಯಯನಗಳಿಂದಲೂ ಸಾಬೀತಾಗಿದೆ. ಸೀಬೆಕಾಯಿ ಎಲೆಯಲ್ಲಿ ಯಾವುದೇ ವಿಷಾಂಶಗಳಿಲ್ಲ ಎಂಬುವುದು ಸಾಬೀತಾಗಿದೆ.
ಸೀಬೆಕಾಯಿ ಎಲೆಯನ್ನು ಬಳಸುವುದು ಹೇಗೆ?
* ಸ್ವಲ್ಪ ಎಲೆಗಳನ್ನು ಕಿತ್ತು ತಂದು ತೊಳೆದು ಸ್ವಚ್ಛ ಮಾಡಿ.
* ನಂತರ 2 ಕಪ್ ನೀರು ಹಾಕಿ ಕುದಿಸಿ.
* ನಂತರ ಸೋಸಿ ಊಟವಾದ ಬಳಿಕ ಕುಡಿಯಿರಿ.
ನೆನಪಿಡಿ: ಈ ಮನೆಮದ್ದು ಕೆಲ ಮಧುಮೇಹಿಗಳಲ್ಲಿ ಯಾವುದೇ ಪರಿಣಾಮ ಬೀರದೇ ಇರಬಹುದು. ನಿಮ್ಮ ಸಕ್ಕರೆಯಂಶ ಎಷ್ಟಿದೆ ಎಂದು ನಿಯಮಿತವಾಗಿ ಪರೀಕ್ಷಿಸಿ ವೈದ್ಯರ ಸಲಹೆ ಸೂಚನೆ ಪಡೆಯಿರಿ.
ಸೀಬೆಕಾಯಿ ಎಲೆ ಯಾವುದಕ್ಕೆ ಒಳ್ಳೆಯದು?
ಸೀಬೆಕಾಯಿ ಎಲೆ ಬೇಧಿ, ಹೊಟ್ಟೆ ನೋವು, ಮಧುಮೇಹ, ಗಾಯ ಒಣಗಲು, ಕೊಲೆಸ್ಟ್ರಾಲ್ ನಿಯಂತ್ರಿಸಲು ಅತ್ಯುತ್ತಮವಾದ ಮನೆಮದ್ದಾಗಿದೆ.
ಸೀಬೆಕಾಯಿ ಎಲೆಯ ಟೀಯ ಪ್ರಯೋಜನವೇನು?
ಸೀಬೆಕಾಯಿ ಎಲೆ ಹಾಕಿದ ಟೀ ಕುಡಿಯುವುದರಿಂದ ಬೇಧಿ ನಿಲ್ಲುತ್ತೆ. ಕೆಮ್ಮು, ಕಫ ಕಡಿಮೆಯಾಗುವುದು, ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ, ಮಧುಮೇಹ ನಿಯಂತ್ರಣದಲ್ಲಿರುತ್ತದೆ ಅಲ್ಲದೆ ಕ್ಯಾನ್ಸರ್ ಕಣಗಳು ಉಂಟಾಗುವುದನ್ನು ತಡೆಯುವುದು.
Guava leaf remedy to control diabetes and blood cholesterol level. Guava leaf has been used in ancient medicine to treat fever and reduce inflammation, but it is also effective in managing diabetes and controlling blood cholesterol level. A study published in the journal Nutrition and Metabolism, says that guava leaf extract can reduce postprandial or post-meal blood glucose levels.
05-05-24 10:54 pm
HK News Desk
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
Blue corner notice, Prajwal Revanna: ಪ್ರಜ್ವಲ್...
05-05-24 08:46 pm
Prajwal Revannas, Sexual Assault Video, Harsh...
05-05-24 04:17 pm
Annamalai, Prajwal Revanna: ಎಸ್ಐಟಿ ಮೊದಲು ಈ ವಿ...
04-05-24 10:13 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 08:53 pm
Mangalore Correspondent
Moodabidri Alvas college, Suicide: ಮೂಡುಬಿದ್ರೆ...
05-05-24 06:43 pm
Mangalore accident, Thokottu: ನಿಯಂತ್ರಣ ತಪ್ಪಿದ...
05-05-24 01:26 pm
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm