ಬ್ರೇಕಿಂಗ್ ನ್ಯೂಸ್
22-03-22 08:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ತಂಪು ತಂಪಾದ ಪಾನೀಯಗಳ ಮೇಲೆ ಮನಸ್ಸು ಹಾತೊರೆಯುತ್ತದೆ. ಅವು ದೇಹವನ್ನು ತಂಪಾಗಿಸುತ್ತವೆ ಎಂಬ ತಪ್ಪು ಪರಿಕಲ್ಪನೆ ನಮ್ಮಲ್ಲಿವೆ. ಆದರೆ ಕೃತಕ ಪಾನೀಯಗಳು ದೇಹವನ್ನು ತಂಪಾಗಿಸುವ ಬದಲಾಗಿ ಅನೇಕ ಆರೋಗ್ಯ ತೊಡಕುಗಳನ್ನು ಸೃಷ್ಟಿಸುತ್ತವೆ.
ಪ್ರತಿನಿತ್ಯ ನಾವು ಬೆಳಗೆದ್ದು ತಪ್ಪದೇ ಕುಡಿಯುವ ಕಾಫಿ, ಚಹಾವನ್ನು ಬೇಸಿಗೆಯ ಕಾಲದಲ್ಲಿ ಕುಡಿಯಬಹುದೇ ಎಂಬ ಸಂಶಯ ಸಹಜವಾಗಿ ಮೂಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಕಾಫಿಯ ಹೊರತಾಗಿ ಚಹಾವನ್ನು ಸೇವನೆ ಮಾಡುವುದು ಉತ್ತಮ ಎನ್ನುತ್ತಾರೆ. ಅಷ್ಟಕ್ಕೂ ಬೇಸಿಗೆ ಕಾಲದಲ್ಲಿ ಚಹಾ ಕುಡಿಯುವುದರಿಂದ ಪಡೆಯಬಹುದಾದ ಲಾಭಗಳು ಯಾವುವು ಎಂಬುದನ್ನು ಸಂಕ್ಷಿಪ್ತವಾಗಿ ಇಲ್ಲಿ ತಿಳಿಯಿರಿ.
ಚಹಾ ಕುಡಿಯುವುದರಿಂದ ಆಗುವ ಲಾಭಗಳು

ಚಹಾ ಏಕೆ ಕುಡಿಯಬೇಕು?

ಚಹಾವನ್ನು ಪ್ರತಿನಿತ್ಯ ನಿಯಮಿತವಾಗಿ ಕುಡಿಯುವುದರಿಂದ ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಇದು ಕೇವಲ ನಿಮ್ಮನ್ನು ಉಲ್ಲಾಸಮಯವಾಗಿಸುವುದಿಲ್ಲ, ಬದಲಾಗಿ ಉರಿಯೂತದ ವಿರುದ್ಧ ಹೋರಾಡುತ್ತದೆ. ಇನ್ನು ಖಿನ್ನತೆಯನ್ನು ದೂರವಾಗಿಸುತ್ತದೆ.
ಅಪಾಯಕಾರಿ ಕ್ಯಾನ್ಸರ್ ಮತ್ತು ಹೃದ್ರೋಗದಂತಹ ಕಾಯಿಲೆಗಳಿಂದ ದೂರವಿಡುತ್ತದೆ ಎಂದು ಹಲವಾರು ಅಧ್ಯಯನಗಳು ತೋರಿಸಿವೆ. ಈ ಬೇಸಿಗೆಯ ಕಾಲದಲ್ಲಿ ಕಾಫಿಯ ಬದಲಾಗಿ ಚಹಾವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂದು ಅಧ್ಯಯನಗಳು ಕೂಡ ಹೇಳುತ್ತವೆ.
ಬೇಸಿಗೆಯಲ್ಲಿ ಚಹಾ

ಕಾಫಿಯಂತೆ ಚಹಾ ಕೂಡ ಬಿಸಿ ಪಾನೀಯವಾಗಿದೆ. ಬೇಸಿಗೆಯಲ್ಲಿ ಬಿಸಿ ಬಿಸಿ ಚಹಾ ಕುಡಿಯುವುದರಿಂದ ಬೆವರುವಿಕೆಯ ಹೆಚ್ಚುತ್ತದೆ. ಅಂದರೆ ದೇಹದಲ್ಲಿನ ಶಾಖವನ್ನು ಉತ್ಪಾದನೆ ಮಾಡುತ್ತದೆ. ಹೆಚ್ಚಿದ ಬೆವರು ಉತ್ಪಾದನೆಯ ಪರಿಣಾಮವಾಗಿ ಬೆವರು ಆವಿಯಾಗಿ, ದೇಹವನ್ನು ತಂಪಾಗುವಂತೆ ಮಾಡುತ್ತದೆ.
ಸಾಕಷ್ಟು ಮಂದಿ ಸುಡುವ ಶಾಖದಿಂದ ತಪ್ಪಿಸಿಕೊಳ್ಳಲು ತಂಪು ಪಾನೀಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಸಂಶೋಧನೆಗಳು ಮಾತ್ರ ಬೇಸಿಗೆಯಲ್ಲಿ ಬಿಸಿ ಚಹಾವನ್ನು ಕುಡಿಯುವುದು ದೇಹವನ್ನು ಹೆಚ್ಚು ತಂಪಾಗಿಸುವ ಪರಿಣಾಮವನ್ನು ಬೀರುತ್ತದೆ ಎಂದು ಹೇಳುತ್ತದೆ.ಚಹಾವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಮನಸ್ಥಿತಿ, ಖಿನ್ನತೆಯಂತಹ ಲಕ್ಷಣಗಳನ್ನು ನಿವಾರಿಸಲು ಚಹಾ ಸೂಕ್ತವಾದ ಪಾನೀಯವಾಗಿದೆ. ಇಷ್ಟೇ ಅಲ್ಲ, ಚಹಾ ಕಣ್ಣಿನ ಆರೋಗ್ಯವನ್ನು
ಸುಡುವ ಬಿಸಿಲಿಗೆ ಪಾನೀಯ
![]()
ಈ ಬೇಸಿಗೆಯ ಸಮಯದಲ್ಲಿ ಜನರು ನಿರ್ಜಲೀಕರಣ ಮತ್ತು ಶಾಖದ ಹೊಡೆತವನ್ನು ತಡೆಯಲು ಸಾಕಷ್ಟು ದ್ರವ ರೂಪದ ಆಹಾರ ಅಥವಾ ಕುಡಿಯುವುದು ಬಹಳ ಮುಖ್ಯ. ಬಿಸಿ ವಾತಾವರಣದ ಅವಧಿಯಲ್ಲಿ ಸಾಕಷ್ಟು ನೀರು, ತಾಜಾ ಹಣ್ಣಿನ ಜ್ಯೂಸ್ಗಳನ್ನು ಸೇವನೆ ಮಾಡಲಾಗುತ್ತದೆ. ಅದೇ ಸಾಲಿನಲ್ಲಿ ಚಹಾ ಕೂಡ ಕಡಿಮೆ ಕೊಬ್ಬನ್ನು ಹೊಂದಿರುವುದರಿಂದ ಅತ್ಯುತ್ತಮವಾದ ಪಾನೀಯವಾಗಿದೆ.
Drinking Tea During Summer Is Good Or Bad.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm