ಬ್ರೇಕಿಂಗ್ ನ್ಯೂಸ್
04-04-22 08:16 pm Source: Vijayakarnataka ಡಾಕ್ಟರ್ಸ್ ನೋಟ್
ಇದು ಹೇಳಿ ಕೇಳಿ ಬೇಸಿಗೆ ಸೀಸನ್. ಈಗ ಎಲ್ಲಿ ನೋಡಿದರೂ ಕಲ್ಲಂಗಡಿ ಹಣ್ಣಿನ ಕಲರವ! ಅವುಗಳ ಮಾರಾಟ, ಕೊಂಡುಕೊಳ್ಳುವುದು ಎಲ್ಲವೂ ಭರ್ಜರಿಯಾಗಿ ನಡೆಯುತ್ತಿದೆ. ಬಿಸಿಲಿನ ಬೇಗೆಗೆ ಶರಣಾಗಿ ನಾವು ಕೂಡ ಮನೆಗೆ ಬೇರೆಯವರಂತೆ ಕಲ್ಲಂಗಡಿ ಹಣ್ಣನ್ನು ಏಕೆ ತೆಗೆದು ಕೊಂಡು ಹೋಗಬಾರದು ಎಂದು ಆಲೋಚನೆ ಮಾಡುತ್ತೇವೆ.
ಆದರೆ ಮನೆಗೆ ಬಂದ ನಂತರ ಕಲ್ಲಂಗಡಿ ಹಣ್ಣಿನಿಂದ ಬೀಜಗಳನ್ನು ಬೇರ್ಪಡಿಸಿ ಹೊರಗಡೆ ಬಿಸಾಡಿ ಹಣ್ಣು ತಿನ್ನುತ್ತೇವೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳ ಮಹತ್ವ ನಮಗೆ ಗೊತ್ತೇ ಇಲ್ಲ. ಬನ್ನಿ ಇಲ್ಲಿ ಅವುಗಳ ವಿವಿಧ ಆರೋಗ್ಯ ಪ್ರಯೋಜನಗಳ ಬಗ್ಗೆ ಮಾಹಿತಿ ಕಲೆ ಹಾಕೋಣ...
ಹೃದಯಕ್ಕೆ ತುಂಬಾ ಒಳ್ಳೆಯದಂತೆ!
![]()
ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿ ಮೆಗ್ನೀಷಿಯಂ ಅಂಶಕ್ಕೆ ಯಾವುದೇ ಕೊರತೆಯಿಲ್ಲ. ಇದು ಹೃದಯದ ಕಾರ್ಯ ಚಟುವಟಿಕೆಯನ್ನು ಉತ್ತಮ ಪಡಿಸುವುದು ಮಾತ್ರವಲ್ಲದೆ ರಕ್ತದ ಒತ್ತಡವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತದೆ.
ಪ್ರಮುಖವಾಗಿ ಕಂಡು ಬರುವ ಆಂಟಿ ಆಕ್ಸಿಡೆಂಟ್ ಅಂಶಗಳು ಮತ್ತು ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳು ಹೃದಯದ ಆರೋಗ್ಯ ವನ್ನು ನೋಡಿಕೊಂಡರೆ, ರಕ್ತದ ಒತ್ತಡ ಕೂಡ ಪರೋಕ್ಷವಾಗಿ ಮತ್ತು ಅಚ್ಚುಕಟ್ಟಾಗಿ ನಿರ್ವಹಣೆಯಾಗುತ್ತದೆ. ಕೊಲೆಸ್ಟ್ರಾಲ್ ಅಂಶ ಹೆಚ್ಚಾಗಿರುವ ದೇಹದಲ್ಲಿ ಎಲೆಕ್ಟ್ರೋಲೈಟ್ ಅಂಶಗಳ ಬ್ಯಾಲೆನ್ಸ್ ತಪ್ಪಿದ ಜನರಿಗೆ ಕಲ್ಲಂಗಡಿ ಹಣ್ಣಿನ ಬೀಜಗಳು ಒಂದು ರೀತಿಯ ವರದಾನವಿದ್ದಂತೆ!
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಬೆಸ್ಟ್!

ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಜನರಿಗೆ ಒಂದು ತರಹದ ಶಾಪವೇ ಸರಿ. ಏಕೆಂದರೆ ಅದು ಒಮ್ಮೆ ಬಂದುಬಿಟ್ಟರೆ ಇಡೀ ಜೀವನ ಪರ್ಯಂತ ಅದರ ಜೊತೆ ನರಳಬೇಕಾಗುತ್ತದೆ.
ಆದರೆ ದೇಹದಲ್ಲಿ ಗ್ಲೈಕೋಜನ್ ಅಂಶವನ್ನು ಕಡಿಮೆ ಮಾಡಿಕೊಳ್ಳುತ್ತಾ ಹೋದರೆ, ಕ್ರಮೇಣವಾಗಿ ಮಧುಮೇಹ ಸಮಸ್ಯೆಯಿಂದ ತಾತ್ಕಾಲಿಕವಾಗಿ ಮುಕ್ತಿ ಪಡೆದುಕೊಳ್ಳಬಹುದು. ಇರಾನ್ ದೇಶದ ಅಧ್ಯಯನವೊಂದು ಹೇಳುವ ಹಾಗೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿ ಒಮೆಗಾ ಫ್ಯಾಟಿ ಆಮ್ಲಗಳು ಸಾಕಷ್ಟು ಕಂಡುಬರುತ್ತವೆ. ಇವುಗಳು ಜಿಂಕ್ ಅಂಶಗಳ ಸಹಿತ ಗ್ಲೈಸೆಮಿಕ್ ನಿಯಂತ್ರಣ ಮಾಡುತ್ತವೆ. ಇದರಿಂದ ಕ್ರಮೇಣವಾಗಿ ನಿಮ್ಮ ರಕ್ತದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ.
ಮೆದುಳಿನ ಆರೋಗ್ಯ ಅಭಿವೃದ್ಧಿಯಾಗುತ್ತದೆ

ಜೀರ್ಣಾಂಗ ವ್ಯವಸ್ಥೆ ವೃದ್ಧಿಸುತ್ತದೆ

ವಯಸ್ಸಾಗುವಿಕೆ ಸಮಸ್ಯೆಗೆ ಉತ್ತಮ ಪರಿಹಾರ
![]()
ಅಧ್ಯಯನಗಳು ಹೇಳುವಂತೆ ಮೆಗ್ನೀಷಿಯಂ ಅಂಶ ನಿಮ್ಮ ವಯಸ್ಸಾಗುವಿಕೆ ಪ್ರಕ್ರಿಯೆಗೆ ಕಡಿವಾಣ ಹಾಕುತ್ತದೆ. ಕಲ್ಲಂಗಡಿ ಬೀಜಗಳಲ್ಲಿ ಕಂಡು ಬರುವ ಗುಣಲಕ್ಷಣಗಳು ಕ್ರಮೇಣವಾಗಿ ನಿಮ್ಮ ಮುಖದ ಮೇಲೆ ಸುಕ್ಕುಗಳು ಕಂಡುಬರುವುದು, ಚರ್ಮದ ಮೇಲೆ ಗೆರೆಗಳು ಕಾಣಿಸುವುದು ಇತ್ಯಾದಿ ತೊಂದರೆಗಳನ್ನು ಪರಿಹಾರ ಮಾಡುತ್ತವೆ.
Know The Magical Health Benefits Of Watermelon Seeds, It Will Surprise You.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm