ಬ್ರೇಕಿಂಗ್ ನ್ಯೂಸ್
05-04-22 08:56 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳಿಂದ ಅನ್ನವನ್ನು ಆಹಾರದ ಪ್ರಧಾನ ಅಂಶವಾಗಿ ಸೇವನೆ ಮಾಡಲಾಗುತ್ತಿದೆ. ನಿಮಗೆ ತಿಳಿದಿರಲಿ, ಇಂದು ಅಕ್ಕಿಯು 100 ಕ್ಕೂ ಹೆಚ್ಚು ಸಂಸ್ಕೃತಿಗಳಲ್ಲಿ ಪ್ರಧಾನವಾಗಿದ್ದು, 40,000 ಕ್ಕಿಂತ ಹೆಚ್ಚು ಪ್ರಭೇದಗಳನ್ನು ಬೆಳೆಯಲಾಗುತ್ತದೆ.
ಅಕ್ಕಿಗಳಲ್ಲಿ ಬ್ರೌನ್ ರೈಸ್ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಹೇಳಲಾಗುತ್ತದೆ. ಏಕೆಂದರೆ ಬ್ರೌನ್ ರೈಸ್ ಅಥವಾ ಕಂದು ಅಕ್ಕಿ ಎಂದೇ ಕರೆಯಲಾಗುವ ಈ ಅಕ್ಕಿಯು ಸಂಪೂರ್ಣವಾಗಿ ಧಾನ್ಯವಾಗಿದ್ದು, ಹೆಚ್ಚು ಪೋಷಕಾಂಶಗಳಿಂದ ಶ್ರೀಮಂತವಾಗಿದೆ ಎಂದು ಅಧ್ಯಯನಗಳು ತಿಳಿಸುತ್ತವೆ.
ಕಂದು ಅಕ್ಕಿಯು ಹೃದಯದ ಆರೋಗ್ಯವನ್ನು ಕಾಪಾಡಲು, ಪಾರ್ಶ್ವವಾಯು, ಮಧುಮೇಹದ ಅಪಾಯವನ್ನು ತಗ್ಗಿಸುತ್ತದೆ. ಬಿಳಿ ಅಕ್ಕಿಗಿಂತ ಕಂದು ಅಕ್ಕಿ ನಿಮ್ಮ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ಪಾರು ಮಾಡುತ್ತದೆ ಎಂದು ಸಂಶೋಧನೆಗಳೇ ಸಾಬೀತು ಪಡಿಸಿವೆ.ಹಾಗಾದರೆ ಕಂದು ಅಕ್ಕಿ ಆರೋಗ್ಯಕ್ಕೆ ಹೇಗೆಲ್ಲಾ ಪ್ರಯೋಜನಕಾರಿ ಎಂಬುದನ್ನು ಇಲ್ಲಿ ತಿಳಿಯಿರಿ.
ಬಿಳಿ ಅಕ್ಕಿಗಿಂತ ಕಂದು ಅಕ್ಕಿ ಹೇಗೆ ಉತ್ತಮ?

ಸಾಮಾನ್ಯವಾಗಿ ನಾವೆಲ್ಲರೂ ಬಿಳಿ ಅಕ್ಕಿಯನ್ನು ಪ್ರತಿನಿತ್ಯ ಸೇವನೆ ಮಾಡುತ್ತೇವೆ. ಕೆಲವು ಸಂಶೋಧನೆಗಳ ಪ್ರಕಾರ, ಬಿಳಿ ಅಕ್ಕಿಗೆ ಹೋಲಿಸಿದರೆ ಕಂದು ಅಕ್ಕಿ ಆರೋಗ್ಯಕರವಾದ ಪೋಷಕಾಂಶಗಳಿಂದ ಸಮೃದ್ಧವಾಗಿದೆ.
USDA ಫುಡ್ಡೇಟಾ ಸೆಂಟ್ರಲ್ ಪ್ರಕಾರ, ಕಂದು ಅಕ್ಕಿಯು ಮ್ಯಾಂಗನೀಸ್, ಕಬ್ಬಿಣ, ಸತು, ರಂಜಕ, ಕ್ಯಾಲ್ಸಿಯಂ, ಸೆಲೆನಿಯಮ್, ಮೆಗ್ನೀಶಿಯಮ್ ಮತ್ತು ಪೊಟ್ಯಾಸಿಯಮ್ನಂತಹ ಅನೇಕ ಖನಿಜಗಳನ್ನು ಹೊಂದಿದೆ.
ಬಿಳಿ ಅಕ್ಕಿಗೆ ಹೋಲಿಸಿದರೆ ಕಂದು ಅಕ್ಕಿ ರುಚಿಯಾಗಿಲ್ಲದಿರಬಹುದು ಆದರೆ ವಿವಿಧ ಕಾಯಿಲೆಗಳಿಂದ ರಕ್ಷಣೆ ಪಡೆಯಲು ಕಂದು ಅಕ್ಕಿ ಬೆಸ್ಟ್.
ಮಧುಮೇಹಕ್ಕೆ ಬಹಳ ಒಳ್ಳೆಯದು

ಕಂದು ಅಕ್ಕಿಯು ಫೈಟಿಕ್ ಆಸಿಡ್, ಫೈಬರ್ ಮತ್ತು ಪಾಲಿಫಿನಾಲ್ಗಳಿಂದ ತುಂಬಿದೆ. ಈ ಅಕ್ಕಿಯು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು, ಇನ್ಸುಲಿನ್ ಉಲ್ಬಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ, ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸ್ಥಿರಗೊಳಿಸಲು ಉತ್ತೇಜಿಸುತ್ತದೆ.
ಇದು ಸಂಕೀರ್ಣ ಕಾಬೋಹೈಡ್ರೇಟ್ ಆಗಿದ್ದು, ಬಿಳಿ ಅಕ್ಕಿಗೆ ಹೋಲಿಸಿದರೆ ಸಕ್ಕರೆಯನ್ನು ನಿಧಾನಗತಿಯಲ್ಲಿ ಬಿಡುಗಡೆ ಮಾಡುತ್ತದೆ. ಹಾಗಾಗಿ ಮಧುಮೇಹ ಹೊಂದಿರುವವರು ನಿಸ್ಸಂದೇಹವಾಗಿ ಕಂದು ಅಕ್ಕಿಯನ್ನು ಸೇವನೆ ಮಾಡಬಹುದು.
ಜೀರ್ಣಕ್ರಿಯೆ ಮತ್ತು ತೂಕ ನಷ್ಟಕ್ಕೆ ಉತ್ತಮ

ಬ್ರೌನ್ ರೈಸ್ ನಿಮ್ಮ ಜೀರ್ಣಕ್ರಿಯೆಗೆ ಅಡ್ಡಿಪಡಿಸುವುದಿಲ್ಲ. ಇದರಲ್ಲಿರುವ ಫೈಬರ್ ಕರುಳಿನ ಚಲನವಲನವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಪದೇ ಪದೇ ಹಸಿವಾಗುವುದನ್ನು ನಿಯಂತ್ರಿಸುತ್ತದೆ. ಇದರಿಂದ ನೀವು ಯಾವಾಗಲೂ ಪೂರ್ಣವಾಗಿರುತ್ತೀರಿ.
ಇದರಿಂದ ನೀವು ಹೆಚ್ಚೆಚ್ಚು ಕ್ಯಾಲೋರಿಗಳಿರುವ ಆಹಾರದಿಂದ ದೂರ ಉಳಿಯುತ್ತೀರಿ. ಹಾಗಾಗಿ ನಿಮ್ಮ ತೂಕ ನಷ್ಟಕ್ಕೆ ಬ್ರೌನ್ ರೈಸ್ ಸೇವನೆ ಮಾಡುವುದು ಬಹಳ ಒಳ್ಳೆಯದು. ಬಹುತೇಕ ಮಂದಿ ತೂಕ ನಿರ್ವಹಣೆಗೆ ಅನ್ನವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಾರೆ. ಬಿಳಿ ಅಕ್ಕಿಯ ಬದಲಾಗಿ ಬ್ರೌನ್ ರೈಸ್ ಆಯ್ಕೆ ಮಾಡಿಕೊಳ್ಳಿ.
ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ

ಬಿಳಿ ಅಕ್ಕಿಗೆ ಹೋಲಿಸಿದರೆ ಬ್ರೌನ್ ರೈಸ್ ಹೆಚ್ಚು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಸಾಮಾನ್ಯವಾಗಿ ಉತ್ಕರ್ಷಣ ನಿರೋಧಕಗಳು ಒತ್ತಡವನ್ನು ಕಡಿಮೆ ಮಾಡಲು, ದೇಹದಲ್ಲಿರುವ ವಿಷವನ್ನು ತೊಡೆದು ಹಾಕಲು ಉತ್ತೇಜಿಸುತ್ತದೆ. ಒಟ್ಟಾರೆ ಉತ್ಕರ್ಷಣ ನಿರೋಧಕವಿರುವ ಆಹಾರವು ಆರೋಗ್ಯ ಪರಿಸ್ಥಿತಿಗಳನ್ನು ಸುಧಾರಿಸುತ್ತದೆ.
ಕೊಲೆಸ್ಟ್ರಾಲ್
![]()
ಕೊಲೆಸ್ಟ್ರಾಲ್ ಹೊಂದಿರುವವರು ಬ್ರೌನ್ ರೈಸ್ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಿಕೊಳ್ಳಬಹುದು.
ಅಧ್ಯಯನದ ಪ್ರಕಾರ, ಕಂದು ಮತ್ತು ಕಪ್ಪು ಅಕ್ಕಿಯಂತಹ ಧಾನ್ಯಗಳು ಬಾಡಿ ಮಾಸ್ ಇಂಡೆಕ್ಸ್ ಮತ್ತು ಕೊಬ್ಬಿನ ಇಳಿಕೆಗೆ ಸಂಬಂಧಿಸುವುದರಿಂದ ದೇಹದ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು ಬೀರಬಹುದು ಎಂದು ಬಹಿರಂಗ ಪಡಿಸಿದೆ.
ನಿಮಗೆ ತಿಳಿದಿರಲಿ, ಅಧಿಕ ಕೊಲೆಸ್ಟ್ರಾಲ್ ಆಹಾರಗಳು ನ್ಯೂರೋ ಡಿಜೆನೆರಟಿವ್ ಡಿಸಾರ್ಡರ್ಗಳ ಅಪಾಯವನ್ನು ಹೆಚ್ಚಿಸುತ್ತವೆ. ಅಲ್ಲದೆ ಅರಿವಿನ ಕಾರ್ಯಕ್ಷಮತೆಯನ್ನು ದುರ್ಬಲಗೊಳಿಸುತ್ತದೆ.
ಬ್ರೌನ್ ರೈಸ್ನ ಮತ್ತಷ್ಟು ಆರೋಗ್ಯ ಪ್ರಯೋಜನಗಳು

Which Rice Is Better For You White Rice Or Brown Rice.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm