ಬ್ರೇಕಿಂಗ್ ನ್ಯೂಸ್
28-04-22 09:13 pm Source: Vijayakarnataka ಡಾಕ್ಟರ್ಸ್ ನೋಟ್
ಒಂದು ಬಾಳೆ ಗಿಡ ಮನೆಯಲ್ಲಿದ್ದರೆ ಆರೋಗ್ಯ ಉತ್ತಮಗೊಳಿಸುವ ಹತ್ತಾರು ಉಪಯೋಗಗಳನ್ನು ಪಡೆದುಕೊಳ್ಳಬಹುದು. ಬಾಳೆಹಣ್ಣು, ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಮಾತ್ರವಲ್ಲ ಬಾಳೆ ದಂಟು ಅಥವಾ ಬಾಳೆ ದಿಂಡಿನಿಂದಲೂ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದಾಗಿದೆ. ಬೇಸಿಗೆಯಲ್ಲಿ ದೇಹದ ಉಷ್ಣತೆ ಹೆಚ್ಚಾಗುವುದರಿಂದ ಬಾಳೆಯ ಉತ್ಪನ್ನಗಳು ಹೆಚ್ಚು ಉಪಯುಕ್ತವಾಗಿದೆ. ಕೆಲವೊಮ್ಮೆ ಮಳೆ, ಗಾಳಿಗೆ ಬಾಳೆ ಮರ ಮುರಿದು ಬೀಳುತ್ತದೆ. ಅಂತಹ ಸಂದರ್ಭದಲ್ಲಿ ಅದನ್ನು ವ್ಯರ್ಥ ಮಾಡಬೇಡಿ. ಏಕೆಂದರೆ ಬಾಳೆಯ ಪ್ರತಿಯೊಂದು ಭಾಗವೂ ಉಪಯುಕ್ತವಾಗಿದೆ.
ಬಾಳೆದಿಂಡು ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಇದನ್ನು ಪಲ್ಯ, ಕೋಸಂಬರಿ, ಚಟ್ನಿಯ ರೂಪದಲ್ಲಿ ಸೇವಿಸಬಹುದಾಗಿದೆ. ವರ್ಷದಲ್ಲಿ ಎರಡು ಬಾರಿಯಾದರೂ ಬಾಳೆದಿಂಡಿನ ಉಪಯೋಗ ಇರಲೇಬೆಕು ಎನ್ನುತ್ತಾರೆ ಹಿರಿಯರು. ಹಾಗಾದರೆ ಬಾಳೆದಿಂಡಿನಿಂದ ಯಾವೆಲ್ಲಾ ಆರೋಗ್ಯ ಪ್ರಯೋಜನಗಳಿದೆ ಎನ್ನುವುದನ್ನು ತಿಳಿದುಕೊಳ್ಳಿ. ನಿಮ್ಮ ಮನೆಯಲ್ಲಿರುವ ಬಾಳೆಮರ ಎಷ್ಟು ಉಪಯುಕ್ತ ಎನ್ನುವುದು ತಿಳಿಯುತ್ತದೆ.
ಹೇರಳವಾದ ನಾರಿನಾಂಶ ಜೀರ್ಣಕ್ರಿಯೆಗೆ ಉತ್ತಮ
![]()
ದೇಹದಲ್ಲಿ ಜೀರ್ಣಕ್ರಿಯೆ ಉತ್ತಮವಾಗಬೇಕೆಂದರೆ ನಾರಿನ ಅಂಶವಿರುವ ಆಹಾರಗಳು ಹೆಚ್ಚು ಸಹಾಯ ಮಾಡುತ್ತವೆ. ಅವುಗಳಲ್ಲಿ ಬಾಳೆದಿಂಡು ಕೂಡ ಒಂದು. ಬಾಳೆ ದಿಂಡಿನ ಉಪಯೋಗದಿಂದ ದೇಹಕ್ಕೆ ಸಾಕಷ್ಟು ಪ್ರಮಾಣದ ನಾರಿನಾಂಶ ಸಿಗುತ್ತದೆ. ಇದು ಹೊಟ್ಟೆಯುಬ್ಬರದಂತಹ ಸಮಸ್ಯೆ ನಿವಾರಿಸುತ್ತದೆ.
ಬಾಳೆದಿಂಡಿನಲ್ಲಿರುವ ನಾರಿನಾಂಶ ಹೊಟ್ಟೆಯಲ್ಲಿರುವ ಅನುಪಯುಕ್ತ ವಸ್ತುಗಳನ್ನು, ಕಲ್ಮಷಗಳನ್ನು ಹೊರಹಾಕಲು ನೆರವಾಗುತ್ತದೆ. ಕೆಲವೊಮ್ಮೆ ಜಂಕ್ ಫುಡ್ಗಳನ್ನು ಸೇವಿಸಿದಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಅಂತಹ ಸಂದರ್ಭದಲ್ಲಿ ಬಾಳೆದಿಂಡಿನ ಉಪಯೋಗ ಮಾಡಿ. ಜೀರ್ಣವಾಗದ ಪದಾರ್ಥಗಳನ್ನು ದೇಹದಿಂದ ಇದು ಹೊರಹೋಗುವಂತೆ ಮಾಡುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
![]()
ಸಾಂಕ್ರಾಮಿಕ ರೋಗಗಳ ಭೀತಿ, ಮಳೆಗಾಲ ಹತ್ತಿರದಲ್ಲಿರುವ ಕಾರಣ ಶೀತ, ಜ್ವರದ ಭಯ ಇದ್ದೇ ಇರುತ್ತದೆ. ಇದರಿಂದ ಪಾರಾಗಲು ದೇಹವನ್ನು ಸದೃಢಗೊಳಿಸಿಕೊಳ್ಳಬೇಕು. ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ ರೋಗಗಳ ಭಯದಿಂದ ಮುಕ್ತವಾಗಿರಬಹುದು.
ಇದಕ್ಕೆ ಬಾಳೆದಿಂಡು ಸಹಾಯ ಮಾಡುತ್ತದೆ. ಮಕ್ಕಳಿಗೂ ಕೂಡ ಇದು ಉತ್ತಮವಾಗಿದೆ. ಬಾಳೆದಿಂಡಿನ ರಸವನ್ನು ಕುಡಿಯಬಹುದು. ಹಾಗೆ ಕುಡಿದರೆ ರುಚಿಸುವುದಿಲ್ಲ ಹೀಗಾಗಿ ಇದಕ್ಕೆ ಸ್ವಲ್ಪ ಉಪ್ಪು ಸೇರಿಸಿ ಕುಡಿಯಬಹುದು. ದಿನದಲ್ಲಿ ಒಂದು ಬಾರಿ 10 ದಿನಗಳ ಕಾಲ ಕುಡಿದರೆ ಇದು ದೇಹದಲ್ಲಿ ಪ್ರತಿರೋಧಕ ಶಕ್ತಿಯನ್ನು ಬಲಗೊಳಿಸುತ್ತದೆ.
ಕಿಡ್ನಿ ಸ್ಟೋನ್ಗೆ ಉತ್ತಮ ಮನೆಮದ್ದು

ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ ಲವಣದ ಅಂಶ ಹೆಚ್ಚಾಗುತ್ತದೆ. ಇದರಿಂದ ಕಿಡ್ನಿಯಲ್ಲಿ ಈ ಲವಣಗಳು ಶೇಖರಣೆಗೊಂಡು ಕಲ್ಲಿನ ರೂಪ ತಾಳುತ್ತವೆ. ಇದನ್ನೇ ಕಿಡ್ನಿ ಸ್ಟೋನ್ ಎನ್ನುತ್ತೇವೆ. ಸಹಿಸಲಾರದಷ್ಟು ನೋವನ್ನು ನೀಡುವ ಈ ಕಿಡ್ನಿ ಸ್ಟೋನ್ಗಳು ಕರಗಲು ಹೆಚ್ಚಿನ ನೀರಿನ ಅಂಶ ಅಗತ್ಯವಾಗಿರುತ್ತದೆ. ಬಾಳೆದಿಂಡು ಯಥೇಚ್ಛವಾದ ನೀರಿನ ಅಂಶ ಮತ್ತು ಫೈಬರ್ ಅಂಶಗಳನ್ನು ಹೊಂದಿರುವ ಕಾರಣ ಮೂತ್ರಪಿಂಡದ ಕಲ್ಲುಗಳ ನಿವಾರಣೆಗೆ ಉತ್ತಮ ಮದ್ದಾಗಿದೆ.
ಬಾಳೆದಿಂಡುಗಳನ್ನು ತಂದು ಅದರ ರಸ ತೆಗೆದು ಸ್ವಲ್ಪ ಸಕ್ಕರೆ ಅಥವಾ ಉಪ್ಪನ್ನು ಹಾಕಿಕೊಂಡು ದಿನಕ್ಕೆ ಎರಡರಿಂದ ಮೂರು ಬಾರಿ ಸೇವಿಸಿದರೆ ಮೂತ್ರಪಿಂಡದ ಕಲ್ಲಿನ ನೋವು ನಿಯಂತ್ರಣಕ್ಕೆ ಬರುತ್ತದೆ. ಅದೇ ರೀತಿ ಇದೇ ಕ್ರಮವನ್ನು ಮುಂದುವರೆಸಿ ಎರಡು ದಿನಕ್ಕೆ ಒಂದು ಬಾರಿಯಂತೆ ಸೇವಿಸಿದರೆ ಕ್ರಮೇಣ ಕಲ್ಲು ಕೂಡ ಕರಗಿಹೋಗುವಂತೆ ಈ ಬಾಳೆದಿಂಡು ಮಾಡುತ್ತದೆ.
ಹೊಟ್ಟೆಯ ಸೋಂಕಿಗೆ ಪರಿಹಾರ
![]()
ಕೆಲವರಿಗೆ ಆಗಾಗ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಇದರಿಂದ ಹೊಟ್ಟೆಗೆ ಕೊಳಕು ಪದಾರ್ಥಗಳು ಹೋಗಿ ಸೇರಿಕೊಳ್ಳುತ್ತದೆ. ಇದು ಹೊಟ್ಟೆಯ ಸೋಂಕಿಗೆ ಕಾರಣವಾಗುತ್ತದೆ. ಅಲ್ಲದೆ ಕೆಲವೊಮ್ಮೆ ಊಟದ ಸಮಯದಲ್ಲಿ ಕೂದಲು ಹೊಟ್ಟೆ ಸೇರಿದ್ದರೆ ವಾಂತಿ, ನಂಜು ಅಥವಾ ಸೋಂಕಿನ ಅಪಾಯ ಎದುರಾಗುತ್ತದೆ. ಇದನ್ನು ಹೋಗಲಾಡಿಸಲು ಬಾಳೆದಿಂಡು ಸಹಾಯ ಮಾಡುತ್ತದೆ.
ಬಾಳೆದಿಂಡಿನ ರಸವನ್ನು ತೆಗೆದು ಕುಡಿಯಬಹುದು. ಅಥವಾ ಬಾಳೆದಿಂಡನ್ನು ತಂದು ಸಣ್ಣಗೆ ಕತ್ತರಿಸಿ ಹುರಿದು ಅದಕ್ಕೆ ಒಂದು ಒಗ್ಗರಣೆ ಹಾಕಿ ನಂತರ ಮೊಸರು ಸೇರಿಸಿ ಊಟದ ಜೊತೆ ಸೇವಿಸಬಹುದು. ಇದರಿಂದ ಹೊಟ್ಟೆಯ ಸೋಂಕು, ಮಲಬದ್ಧತೆ ಕೂಡ ನಿವಾರಣೆಯಾಗುತ್ತದೆ.
ದೇಹದ ತೂಕ ಇಳಿಕೆಗೂ ಸಹಕಾರಿ
![]()
ಬಾಳೆದಿಂಡಿನಲ್ಲಿ ವಿಟಮಿನ್ಗಳು ಅಡಕವಾಗಿದೆ. ಅದೇ ರೀತಿ ಕಡಿಮೆ ಕ್ಯಾಲೋರಿಯನ್ನು ಇದು ಹೊಂದಿರುತ್ತದೆ. ಹೀಗಾಗಿ ಬಾಳೆದಿಂಡಿನ ಸೇವನೆಯಿಂದ ದೇಹದ ತೂಕ ಇಳಿಸಿಕೊಳ್ಳಬಹುದು.
ಪ್ರತಿದಿನ ಡಯೆಟ್ನಲ್ಲಿ ಬಾಳೆದಿಂಡಿನ ಸಲಾಡ್ ಮಾಡಿಕೊಂಡು ಸೇವಿಸಿ. ಅಥವಾ ಪದಾರ್ಥ ಮಾಡಿಕೊಂಡು ಊಟದ ಜೊತೆಗೆ ಸೇವಿಸಿ. ಕೆಲವೇ ದಿನಗಳಲ್ಲಿ ಹೊಟ್ಟೆಯ ಭಾಗದಲ್ಲಿನ ಅನಗತ್ಯ ಬೊಜ್ಜನ್ನು ಕರಗಿಸಲು ಇದು ನೆರವಾಗುತ್ತದೆ. ಆದ್ದರಿಂದ ಒಂದು ಬಾಳೆ ಗಿಡದ ದಿಂಡು ಇದ್ದರೆ ಹಲವಾರು ಲಾಭಗಳನ್ನು ಪಡೆಯಬಹುದಾಗಿದೆ.
Health Benefits Of Banana Stem.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am