ಬ್ರೇಕಿಂಗ್ ನ್ಯೂಸ್
04-05-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ರಸಭರಿತ ಮಾವಿನ ಹಣ್ಣು ಬಾಯಲ್ಲಿ ನೀರೂರಿಸುತ್ತದೆ. ಅತ್ಯಂತ ರುಚಿಕರವಾದ ಹಣ್ಣುಗಳಲ್ಲಿ ಮಾವಿನ ಕಾಯಿ ಕೂಡ ಒಂದು. ಅನೇಕ ಸಿಹಿ ಮ್ತು ಖಾರವಾದ ಖಾದ್ಯಗಳಲ್ಲಿ ಮಾವಿನ ಕಾಯಿಯನ್ನು ಬಳಸಲಾಗುತ್ತದೆ.
ಬಿಸಿ ಬಿಸಿ ಅನ್ನ, ಸಾರಿನ ಪಕ್ಕದಲ್ಲಿ ನಾಲಿಗೆ ಚಪ್ಪರಿಸಲು ಒಂದು ತುಂಡು ಉಪ್ಪಿನಕಾಯಿ ಇದ್ದರೆ ಊಟ ಸಂಪೂರ್ಣವಾಗುತ್ತದೆ. ಮಾವಿನ ಹಣ್ಣಿನ ಶೇಕ್, ಜ್ಯೂಸ್, ಐಸ್ ಕ್ರೀಮ್, ಮಾವಿನಕಾಯಿ ಚಿತ್ರಾನ್ನಕ್ಕೆಲ್ಲಾ ಮಾವನ್ನು ಬಳಸಲಾಗುತ್ತದೆ.
ಮಾವಿನ ಹಣ್ಣಿನಲ್ಲಿ ಅಗಾಧವಾದ ಪೋಷಕಾಂಶಗಳಿಂದ ತುಂಬಿದೆ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಫೋಲೇಟ್, ವಿಟಮಿನ್ ಕೆ, ವಿಟಮಿನ್ ಇ, ಬಿ ಸೇರಿದಂತೆ ಇನ್ನು ಅನೇಕ ಪೌಷ್ಟಿಕ ಸತ್ವಗಳನ್ನು ತನ್ನಲ್ಲಿ ಅಡಗಿಸಿಕೊಂಡಿದೆ. ಮಾವಿನ ಹಣ್ಣನ್ನು ನಿಯಮಿತವಾಗಿ ಪ್ರತಿನಿತ್ಯ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳ ಜೊತೆ ಜೊತೆಗೆ ಕೂದಲು ಮತ್ತು ಚರ್ಮದ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು.
ಮಾವಿನ ಹಣ್ಣನ್ನು ಮಾರುಕಟ್ಟೆಯಿಂದ ತಂದ ತಕ್ಷಣ ನೀರಿನಲ್ಲಿ ನೆನೆಸಬೇಕು. ಹೀಗೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ಲೇಖನದ ಮೂಲಕ ತಿಳಿಯಿರಿ.
ಫೈಟಿಕ್ ಆಮ್ಲ

ಮಾವಿನ ಹಣ್ಣುಗಳನ್ನು ನೀವು ಮಾರುಕಟ್ಟೆಯಿಂದ ತಂದ ನಂತರ ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸುವುದರಿಂದ ಫೈಟಿಕ್ ಆಮ್ಲವನ್ನು ತೊಡೆದುಹಾಕಬಹುದು. ಫೈಟಿಕ್ ಆಸಿಡ್ ಅಥವಾ ಆಮ್ಲ ನೈಸರ್ಗಿಕ ಅಣುವನ್ನು ಹೊಂದಿರುತ್ತದೆ. ಇನ್ನು ಇದನ್ನು ಪೋಷಕಾಂಶಗಳ ವಿರೋಧಿ ಎಂದು ಪರಿಗಣಿಸಲಾಗುತ್ತದೆ.
ಈ ಫೈಟಿಕ್ ಆಮ್ಲವು ಪೌಷ್ಟಿಕ ಸತ್ವವುಳ್ಳ ಕಬ್ಬಿಣ, ಸತು ಮತ್ತು ಕ್ಯಾಲ್ಸಿಯಂನಂತಹ ಖನಿಜಗಳನ್ನು ಹೀರಿಕೊಳ್ಳುವಿಕೆಯನ್ನು ತಡೆಯುತ್ತದೆ. ಇದರಿಂದ ಮಾವಿನ ಹಣ್ಣಿನಿಂದ ದೊರೆಯುವ ಯಾವುದೇ ಪೋಷಕಾಂಶಗಳು ನಮ್ಮ ದೇಹವು ಪಡೆಯುವುದಿಲ್ಲ. ಹಾಗಾಗಿ ಮಾವಿನ ಹಣ್ಣುಗಳನ್ನು ನೀರಿನಲ್ಲಿ ನೆನೆಸುವುದು ಬಹಳ ಮುಖ್ಯ.
ಅನೇಕ ರೋಗಗಳಿಗೆ ರಾಮಬಾಣ

ಪ್ರತಿನಿತ್ಯ ಒಂದಲ್ಲ ಒಂದು ರೋಗಗಳು ದೇಹಕ್ಕೆ ಆಕ್ರಮಣ ಮಾಡುತ್ತಿರುತ್ತವೆ. ಅವುಗಳಲ್ಲಿ ಈ ತಲೆನೋವು, ಮಲಬದ್ಧತೆ ಮತ್ತು ಇತರ ಕರುಳಿನ ಸಮಸ್ಯೆಗಳಂತಹ ಸಮಸ್ಯೆಗಳನ್ನು ತಡೆಗಟ್ಟುವಲ್ಲಿ ಮಾವಿನ ಕಾಯಿಯು ಉತ್ತೇಜಿಸುತ್ತದೆ. ಮಾವು ತ್ವರಿತವಾಗಿ ಹಣ್ಣಾಗಲು ಕೀಟನಾಶಕಗಳನ್ನು ಬಳಸಲಾಗುತ್ತದೆ. ಇದೊಂದು ವಿಷಕಾರಿಯಾಗಿದ್ದು, ಉಸಿರಾಟದಲ್ಲಿ ಕಿರಿಕಿರಿ, ಅಲರ್ಜಿ, ಕಣ್ಣು ಮತ್ತು ಚರ್ಮದ ಕಿರಿಕಿರಿಯನ್ನು ಉಂಟು ಮಾಡುತ್ತದೆ.
ಅಷ್ಟೇ ಅಲ್ಲ, ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗಬಹುದು. ಹಾಗಾಗಿ ಮಾವಿನ ಹಣ್ಣನ್ನು ನೀರಿನಲ್ಲಿ ಸ್ವಲ್ಪ ಕಾಲ ನೀರಿನಲ್ಲಿ ನೆನೆಸಿ ಸೇವನೆ ಮಾಡುವುದು ಒಳ್ಳೆಯದು.
ಶಾಖವನ್ನು ತಣ್ಣಗಾಗಿಸುತ್ತದೆ

ಮಾವು ದೇಹದ ಶಾಖವನ್ನು ಹೆಚ್ಚು ಮಾಡುವ ಹಣ್ಣಾಗಿದೆ. ಬೇಸಿಗೆಯಲ್ಲಿ ದೇಹದ ಶಾಖವನ್ನು ಹೆಚ್ಚಿಸುವ ಆಹಾರಗಳನ್ನು ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ತೊಂದರೆಗಳನ್ನು ಅನುಭವಿಸಬೇಕಾಗಬಹುದು.
ಅತಿ ಹೆಚ್ಚಿನ ಶಾಖವಿರುವ ಆಹಾರವು ಮೊಡವೆ, ಜೀರ್ಣಕಾರಿ ಅಸಮತೋಲನವನ್ನು ಉಂಟು ಮಾಡಬಹುದು. ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಸುವುದರಿಂದ ಥರ್ಮೋಜೆನಿಕ್ ಗುಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ತೂಕ ನಿರ್ವಹಣೆ

ಮಾವಿನ ಹಣ್ಣು ಆರೋಗ್ಯಕರವಾದ ಹಣ್ಣಾಗಿದ್ದು, ತೂಕವನ್ನು ಗಮನಾರ್ಹವಾಗಿ ಕಳೆದುಕೊಳ್ಳಲು ಬಯಸುವವರು ಮಾವಿನ ಹಣ್ಣನ್ನು ಸೇವನೆ ಮಾಡಬಹುದು. ಮಾವಿನ ಹಣ್ಣಿನಲ್ಲಿ ಸಾಕಷ್ಟು ಫೈಟೊಕೆಮಿಕಲ್ಗಳಿವೆ.
‘ಮಾವಿನ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳು ಕೊಬ್ಬಿನ ಕೋಶಗಳನ್ನು ಮತ್ತು ಕೊಬ್ಬಿಗೆ ಸಂಬಂಧಿಸಿದ ಜೀನ್ಸ್ಗಳನ್ನು ನಿಗ್ರಹಿಸಬಹುದು ಎಂದು ಸಂಶೋಧನೆಗಳ ಮೂಲಕ ಸೂಚಿಸುತ್ತದೆ’.
ಮಾವನ್ನು ನೆನೆಸಿ ಸೇವನೆ ಮಾಡುವುದರಿಂದ ತೂಕವನ್ನು ಮಾತ್ರ ಕಡಿತಗೊಳಿಸುವುದಿಲ್ಲ ಬದಲಾಗಿ, ಫೈಟೊಕೆಮಿಕಲ್ಸ್ ಉರಿಯೂತ ಮತ್ತು ಆಕ್ಸಿಡೇಟಿವ್ ನಂತಹ ಸಮಸ್ಯೆಗಳಿಂದ ಕಾಪಾಡುತ್ತದೆ.
ಮಾವಿನ ಹಣ್ಣನ್ನು ನೀರಿನಲ್ಲಿ ಎಷ್ಟು ಹೊತ್ತು ಬಿಡಬೇಕು?

ಇಷ್ಟೇಲ್ಲಾ ಆರೋಗ್ಯ ಪ್ರಯೋಜನಗಳನ್ನು ತಿಳಿದ ನಂತರ ಕಟ್ಟ ಕಡೆಯದಾಗಿ ಮೂಡುವ ಪ್ರಶ್ನೆ ಮಾವಿನ ಹಣ್ಣನ್ನು ನೀರಿನಲ್ಲಿ ಎಷ್ಟು ಹೊತ್ತು ನೆನೆಸಬೇಕು ಎಂಬುದು. ಇದಕ್ಕೆ ಉತ್ತರ 15 ನಿಮಿಷದಿಂದ 2 ಗಂಟೆಯ ಕಾಲ ನೆನೆಸಲು ಶಿಫಾರಸ್ಸು ಮಾಡಲಾಗಿದೆ. ಅಲ್ಲದೆ, ಮಾವಿನ ಹಣ್ಣನ್ನು ಹೀಗೆ ನೆನೆಸುವುದರಿಂದ ಹಣ್ಣಿಗೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ.
Health Benefits Of Soaked Mangoes In Kannada.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm