ಬ್ರೇಕಿಂಗ್ ನ್ಯೂಸ್
06-05-22 07:45 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಹೊಂದಿರುವವರಿಗೆ ಪದೇ ಪದೇ ಹಸಿವಾಗುತ್ತಿರುತ್ತದೆ. ಆದ ಕಾರಣ ಅಡುಗೆ ಮನೆಯಲ್ಲಿ ಏನಾದರೂ ತಿನ್ನಲು ಮನಸ್ಸು ಹಾತೊರೆಯಬಹುದು. ವೈದ್ಯರು ಕೂಡ ಮಧುಮೇಹ ಹೊಂದಿರುವವರು ನಿಯಮಿತವಾಗಿ ದಿನಕ್ಕೆ 4 ಬಾರಿ ತಿನ್ನಬೇಕು ಎಂದು ಸಲಹೆ ನೀಡುತ್ತಾರೆ.
ಮಧುಮೇಹ ಬಂದಾಕ್ಷಣ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಶುರು ಮಾಡುತ್ತಾರೆ. ಈ ಸಮಯದಲ್ಲಿ ಸಂಪೂರ್ಣವಾಗಿ ಸಿಹಿ ತಿಂಡಿ, ಅನ್ನ, ಕೂಲ್ ಕೂಲ್ ಡ್ರಿಂಕ್ಸ್ಗಳಿಂದ ದೂರವಿರುತ್ತಾರೆ. ಒಟ್ಟಾರೆ ಆರೋಗ್ಯಕರವಾದ ಆಹಾರವನ್ನು ಸೇವಿಸಲು ಇಷ್ಟ ಪಡುತ್ತಾರೆ. ಬೆಳಗಿನ ಮತ್ತು ಮಧ್ಯಾಹ್ನದ ಊಟದ ನಂತರ ಸಂಜೆಯ ಸಮಯದಲ್ಲಿ ಹಸಿವಾಗುವುದು ಸಹಜ. ಆದರೆ ಏನು ತಿನ್ನಬೇಕು? ಎಂದು ಗೊಂದಲ ನಿಮ್ಮಲ್ಲಿದೆಯೇ? ಸಂಜೆಯ ಸಮಯದಲ್ಲಿ ಯಾವ ರೀತಿಯ ಸ್ನಾಕ್ಸ್ ತಿನ್ನಬೇಕು ಎಂದು ಗೊಂದಲದಲ್ಲಿರುವವರಿಗೆ ಲೇಖನವು ಮಾಹಿತಿ ನೀಡುತ್ತದೆ ನೋಡಿ.
ಹುರಿದ ಕಚ್ಚಾ ಬೀಜಗಳು ಮತ್ತು ಒಣ ಹಣ್ಣುಗಳು
ಹುರಿದ ಕಚ್ಚಾ ಬೀಜಗಳನ್ನು ಆರೋಗ್ಯಕರವಾದ ಆಹಾರಗಳಲ್ಲಿ ಒಂದಾಗಿದೆ. ಈ ಬೀಜಗಳಲ್ಲಿ ಕೆಲವು ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುತ್ತವೆ. ಇಂತಹ ಆಹಾರಗಳು ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುವುದಿಲ್ಲ.
ಉದಾಹರಣೆಗೆ ಪಿಸ್ತಾ, ಬಾದಾಮಿ, ವಾಲ್ನಟ್ಸ್ ಮತ್ತು ಗೋಡಂಬಿಯಂತಹ ಒಣ ಹಣ್ಣುಗಳನ್ನು ಸಣ್ಣ ಉರಿಯಲ್ಲಿ ಹುರಿದು ಅದಕ್ಕೆ ಉಪ್ಪು ಮತ್ತು ಕಾರವನ್ನು ಸೇರಿಸಿ ಸಂಜೆಯ ಸಮಯದಲ್ಲಿ ಸೇವನೆ ಮಾಡಬಹುದು. ಇವು ಪೋಷಕಾಂಶಗಳಿಂದ ತುಂಬಿದ್ದು, ದೇಹಕ್ಕೆ ಬೇಕಾದ ಶಕ್ತಿಯನ್ನು ಒದಗಿಸುವುದರ ಮೂಲಕ ಹೆಚ್ಚು ಕಾಲ ತುಂಬಿರುವಂತೆ ಮಾಡುತ್ತದೆ. ಬೆರಳಣಿಕೆಯಷ್ಟು ಕುಂಬಳಕಾಯಿ ಬೀಜಗಳು ಅಥವಾ ಸೂರ್ಯಕಾಂತಿ ಬೀಜಗಳನ್ನು ಕೂಡ ನೀವು ಆಯ್ಕೆ ಮಾಡಿಕೊಳ್ಳಬಹುದು.
ಮಧುಮೇಹ ಹೊಂದಿರುವವರು ಉಪವಾಸ ಮಾಡಬಾರದು ಏಕೆ?
![]()
ಮಧುಮೇಹ ಹೊಂದಿರುವವರು ದೀರ್ಘಾವಧಿಯ ಉಪವಾಸವು ಕೆಲವು ಸಂದರ್ಭಗಳಲ್ಲಿ ಯಕೃತ್ತಿನ ಗ್ಲೂಕೋಸ್ ಅನ್ನು ಅಧಿಕವಾಗಿ ಉತ್ಪಾದಿಸುವಂತೆ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸಬಹುದು. ಹಾಗಾಗಿ ಸಂಜೆಯ ವೇಳೆ ಆರೋಗ್ಯಕರವಾದ ಲಘು ಆಹಾರವನ್ನು ಸೇವನೆ ಮಾಡಿ. ಯಾವುದೇ ಕಾರಣಕ್ಕೂ ಉಪವಾಸವನ್ನು ಮಾಡಬೇಡಿ.
ಆಲಿವ್

ಮಧುಮೇಹ ಹೊಂದಿರುವವರು ತಮ್ಮ ಆಹಾರದಲ್ಲಿ ಆಲಿವ್ ಅಥವಾ ಆಲಿವ್ ಎಣ್ಣೆಯನ್ನು ಬಳಸಿ ಸೇವನೆ ಮಾಡಬಹುದು. ಇದು ಪೋಷಕಾಂಶದಿಂದ ತುಂಬಿರುವ ಪದಾರ್ಥವಾಗಿದೆ.
ಕಡಿಮೆ ಕಾರ್ಬೋಹೈಡ್ರೇಟ್ಗಳು ಮತ್ತು ಹೆಚ್ಚಿನ ಕೊಬ್ಬಿನಂಶ ಹೊಂದಿರುವ ಆಲಿವ್ಗಳು, ಮಧುಮೇಹ ಟೈಪ್ 2 ಹೊಂದಿರುವವರಿಗೆ ಬಹಳ ಒಳ್ಳೆಯದು ಎಂದು ಸಂಶೋಧನೆಗಳೇ ಸಾಬೀತು ಪಡಿಸಿವೆ.
ವಾಸ್ತವವಾಗಿ, ಆಲಿವ್ ಎಣ್ಣೆಯು ತಾಮ್ರ, ಕಬ್ಬಿಣ, ಫೈಬರ್ ಮತ್ತು ವಿಟಮಿನ್ ಇ ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇಷ್ಟೇ ಅಲ್ಲ, ಉತ್ಕರ್ಷಣ ನಿರೋಧಕಗಳನ್ನು ಸಹ ಹೊಂದಿದೆ.
ಹಣ್ಣು ಮತ್ತು ತರಕಾರಿಗಳು

ಹಣ್ಣುಗಳ ರಸವನ್ನು ಸಕ್ಕರೆಯೊಂದಿಗೆ ಮಿಶ್ರಣ ಮಾಡಿ ಸೇವಿಸುವುದರ ಬದಲಾಗಿ ತಾಜಾ ಹಣ್ಣುಗಳನ್ನು ಸೇವನೆ ಮಾಡುವುದು ಬಹಳ ಒಳ್ಳೆಯದು. ಹಣ್ಣಿನ ರಸದಲ್ಲಿ ಉಪ್ಪು ಮತ್ತು ಪೆಪ್ಪರ್ ಪುಡಿಯನ್ನು ಬೆರಸಿ ಸಂಜೆಯ ಸಮಯದಲ್ಲಿ ನೀವು ಸೇವನೆ ಮಾಡಬಹುದು.
ಎಣ್ಣೆಯಲ್ಲಿ ಕರಿದ ಆಹಾರಗಳಿಂದ ಆದಷ್ಟು ದೂರವಿರಿ. ಹಸಿ ತರಕಾರಿಗಳನ್ನು ಸಲಾಡ್ನಂತೆ ಸೇವನೆ ಮಾಡಿ. ಪ್ರೋಟೀನ್ನಿಂದ ತುಂಬಿರುವ ತರಕಾರಿಗಳೊಂದಿಗೆ ಸಂಪೂರ್ಣ ಮೊಟ್ಟೆಯನ್ನು ತಿನ್ನಿರಿ. ಪ್ರೋಟೀನ್ ಸೇವನೆಯು ಹಸಿವಿನ ಕಡುಬಯಕೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ.
ಮೊಸರು
ಸಂಜೆಯ ಸಮಯದಲ್ಲಿ ತಾಜಾ ಮೊಸರಿನೊಂದಿಗೆ ಕಡಿಮೆ ಸಕ್ಕರೆಯುಳ್ಳ ಹಣ್ಣುಗಳನ್ನು ಸೇರಿಸಿ ಸೇವಿಸಿ. ಮೊಸರು ಮಧುಮೇಹ ಹೊಂದಿರುವವರಿಗೆ ನಿಸ್ಸಂದೇಹವಾಗಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಪ್ರೋಟೀನ್ನ ಅತ್ಯುತ್ತಮವಾದ ಮೂಲವಾಗಿದೆ.
ಮೊಸರು ಒತ್ತಡ, ನಿದ್ದಾಹೀನತೆಗೆ ಚಿಕಿತ್ಸೆ ನೀಡುತ್ತದೆ. ಹಾಗಾಗಿ ದೇಹದ ಆರೋಗ್ಯದ ಜೊತೆ ಜೊತೆಗೆ ಹಸಿವಿನ ಕಡುಬಯಕೆಯನ್ನು ನೀಗಿಸಲು ಇವು ಅತ್ಯುತ್ತಮವಾದ ಸಂಜೆಯ ಆಹಾರವಾಗಿದೆ.
Healthy Evening Snacks For Diabetics In Kannada.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm