ಬ್ರೇಕಿಂಗ್ ನ್ಯೂಸ್
13-05-22 08:16 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಮನುಷ್ಯನಿಗೆ ರಕ್ತದ ಒತ್ತಡ ಅಂದರೆ ಬಿಪಿ ಲೆವೆಲ್ ಯಾವಾಗಲೂ ನಾರ್ಮಲ್ ಆಗಿರಬೇಕು. ಒಂದು ವೇಳೆ, ಈ ನಮ್ಮ ರಕ್ತದೊತ್ತಡದಲ್ಲಿ ವ್ಯತ್ಯಾಸವಾದರೆ ಅದರ ನೇರ ಪರಿಣಾಮ ಹೃದಯದ ಮೇಲೆ ಉಂಟಾಗುತ್ತದೆ! ಹಾಗಾಗಿ ಈ ಕಾಯಿಲೆಯ ಬಗ್ಗೆ, ನಾವು ಜಾಗರೂಕತೆ ವಹಿಸಿದಷ್ಟು, ಆರೋಗ್ಯಕ್ಕೆ ಒಳ್ಳೆಯದು.. ಇನ್ನು ಈ ಕಾಯಿಲೆಗೆ ಕಾರಣಗಳನ್ನು ನೋಡುವುದಾದರೆ, ಒತ್ತಡ ಜೀವನಶೈಲಿ, ವಿಪರೀತ ಟೆನ್ಷನ್ ಮಾಡಿಕೊಳ್ಳುವುದು, ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದು, ದೈನಂದಿನ ದೈಹಿಕ ಚಟುವಟಿಕೆ ಇಲ್ಲದೆ ಇರುವುದು, ಇವೆಲ್ಲವೂ ಈ ಕಾಯಿಲೆ ನಮ್ಮನ್ನು ಆವರಿ ಸಲು ಕಾರಣವಾಗಿ ಬಿಡುತ್ತದೆ!
ಹೀಗಾಗಿ ಸರಿಯಾದ ಜೀವನಶೈಲಿ ಹಾಗೂ ವೈದ್ಯರು ಸೂಚಿಸಿರುವ ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ, ಕೆಲವೊಂದು ಆಹಾರಗಳನ್ನು ಕೂಡ ನಿಯಮಿತವಾಗಿ ಸೇವನೆ ಮಾಡುವುದರಿಂದ ಕೂಡ ಈ ಕಾಯಿಲೆಯನ್ನು ಕಟ್ಟಿಹಾಕಬಹುದು, ಅಲ್ಲದೇ ನೆಮ್ಮದಿಯ ಜೀವನವನ್ನು ಕೂಡ ಸಾಗಿಸಬಹುದು...
ಸೀಬೆ ಹಣ್ಣಿನ ಜ್ಯೂಸ್

ಹಾಲಿನಲ್ಲಿ ನೆನೆಸಿಟ್ಟ ಖರ್ಜೂರ
![]()
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆ ಕಾಯಿಲೆಯಿಂದ ಬಳಲುತ್ತಿರುವವರು, ಸರಿಸುಮಾರು ನಾಲ್ಕೈದು ಖರ್ಜೂರಗಳನ್ನು ದಿನಾ ರಾತ್ರಿ ಮಲಗುವ ಮುನ್ನ, ಒಂದು ಬೌಲ್ ಹಾಲಿನಲ್ಲಿ ಹಾಕಿ ನೆನೆಸಿಡಬೇಕು.. ಮರುದಿನ ಬೆಳಗಿನ ಸಮಯದಲ್ಲಿ ಅಂದರೆ, ಬ್ರೇಕ್ ಫಾಸ್ಟ್ ಮಾಡುವ ಅರ್ಧ ಗಂಟೆ ಮುಂಚೆ ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಕ್ರಮೇಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ದಾಳಿಂಬೆ ಹಣ್ಣಿನ ಜ್ಯೂಸ್
ಮೆಗ್ನಿಶಿಯಂ ಹಾಗೂ ಕ್ಯಾಲ್ಸಿಯಂ ಅಂಶ ಹೆಚ್ಚಿರುವ ಆಹಾರಗಳನ್ನು ಸೇವಿಸಿ..
![]()
ದಿನಕ್ಕೊಂದು ಬಾಳೆಹಣ್ಣು ತಿನ್ನಿ...

ಮಿತವಾಗಿ ಮೊಸರು ಸೇವನೆ..

ಹಾಲಿನ ಉಪ ಉತ್ಪನ್ನವಾದ ಮೊಸರಿನಲ್ಲಿ ಅಧಿಕ ಪ್ರಮಾಣದಲ್ಲಿ ಕ್ಯಾಲ್ಸಿಯಂ, ಮೆಗ್ನಿಶಿಯಂ ಮತ್ತು ಪೊಟಾಶಿ ಯಂ ಅಂಶ ಹೆಚ್ಚಾಗಿ ಇರುವುದರಿಂದ ಅಧಿಕ ರಕ್ತದೊತ್ತದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬಹಳ ಒಳ್ಳೆಯದು ಎಂದು ಸಾಬೀತಾಗಿದೆ. ಹೀಗಾಗಿ ಈಗಾಗಲೇ ಈ ಸಮಸ್ಯೆಯಿಂದ ಬಳಲುತ್ತಿರುವವರು ಆದಷ್ಟು ತಮ್ಮ ಆಹಾರ ಪದ್ಧತಿ ಯಲ್ಲಿ ಮಿತವಾಗಿ ಮೊಸರು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಒಳ್ಳೆಯದು.
ಟೊಮೆಟೊ ಜ್ಯೂಸ್
![]()
ಈಗ ಟೊಮೆಟೊ ಹಣ್ಣಿನ ಬೆಲೆ ಕೇಳಿದರೆಯೇ, ಬಿಪಿ ಹೈ ಆಗಬಹುದು!! ಅದು ಏನೇ ಇರಲಿ ಆದರೆ ಟೊಮೆಟೊ ಹಣ್ಣಿನ ಜ್ಯೂಸ್ ಮಾತ್ರ ಅಧಿಕ ರಕ್ತದ ಒತ್ತಡದ ಸಮಸ್ಯೆ ಇರುವವರಿಗೆ ಬಹಳ ಒಳ್ಳೆಯದು...ಇದಕ್ಕೆ ಮುಖ್ಯ ಕಾರಣ ಇದರಲ್ಲಿ ಕಂಡು ಬರುವ ಕ್ಯಾರೋಟಿನ್ ಅಂಶ, ವಿಟಮಿನ್ ಎ ಮತ್ತು ಕ್ಯಾಲ್ಸಿಯಂ ಅಂಶ ರಕ್ತದ ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುವುದು ಮಾತ್ರವಲ್ಲದೆ, ರಕ್ತ ಸಂಚಾರದಲ್ಲಿ ಕಂಡುಬರುವ ಕೊಲೆಸ್ಟ್ರಾಲ್ ಅಂಶ ಅಚ್ಚು ಕಟ್ಟಾಗಿ ನಿರ್ವಹಣೆಯಾಗುತ್ತದೆ, ಇದರಿಂದಾಗಿ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
Foods That Can Lower Your Blood Pressure Naturally.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm