ಬ್ರೇಕಿಂಗ್ ನ್ಯೂಸ್
21-05-22 07:55 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಮನುಷ್ಯನ ದೇಹದ ಪ್ರತಿಯೊಂದು ಅಂಗವೂ ಪ್ರಮುಖ ವಾಗಿದೆ. ಇದು ಒಂದು ರೀತಿಯ ಯಂತ್ರಗಳು ಇದ್ದ ಹಾಗೆ, ಇವು ತಮ್ಮ ಪಾಡಿಗೆ ಕೆಲಸಕಾರ್ಯ ಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾ ಹೋಗುತ್ತವೆ. ಒಂದು ವೇಳೆ ಇಲ್ಲಿ ಏನಾದರೂ ಏರು ಪೇರು ಉಂಟಾದರೆ ಅಂದರೆ, ದೇಹದ ಆಂತರಿಕ ಅಂಗಗಳಲ್ಲಿ ಕೊಂಚ ದೊಡ್ಡ ಸಮಸ್ಯೆಯನ್ನೇ ಎದುರಿಸಬೇಕಾಗುತ್ತದೆ. ಹೀಗಾಗಿ ಯಾವುದನ್ನು ಸಹ ಕಡೆಗಣಿಸುವ ಹಾಗಿಲ್ಲ.
ಇನ್ನು ಮುಖ್ಯವಾಗಿ ದೇಹದ ಪ್ರತಿಯೊಂದು ಅಂಗಾಗಗಳು ಅಚ್ಚುಕಟ್ಟಾಗಿ ಕೆಲಸ ಮಾಡ ಬೇಕೆಂದರೆ, ದೇಹದಲ್ಲಿ ಹರಿಯುವ ರಕ್ತ ಸಂಚಾರ ಪ್ರಮುಖ ಪಾತ್ರವಹಿಸುತ್ತದೆ. ಇಲ್ಲಿ ಕೆಂಪು ರಕ್ತ ಕಣಗಳು ಮನುಷ್ಯನ ಜೀವನಾಡಿ ಆಗಿ ಕೆಲಸ ಮಾಡಿದರೆ, ಬಿಳಿ ರಕ್ತ ಕಣಗಳು, ಮನುಷ್ಯನ ಆರೋಗ್ಯಕ್ಕೆ ಸಮಸ್ಯೆ ಉಂಟು ಮಾಡುವ ಸೊಂಕುಗಳ ವಿರುದ್ಧ ಹೋರಾಡುವಲ್ಲಿ, ಒಂದುವೇಳೆ ಗಾಯಗಳಾಗಿದ್ದರೆ, ಅದನ್ನು ಕಡಿಮೆ ಮಾಡುವಲ್ಲಿ ಹಾಗೂ ಪರೋಕ್ಷವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿಯೂ ಕೂಡ ನೆರವು ನೀಡುತ್ತದೆ.
ಒಂದು ವೇಳೆ ಮಾರಕ ಡೆಂಗ್ಯೂ ಜ್ವರ ಕಾಡಿದರೆ, ಬಿಳಿ ರಕ್ತಕಣಗಳು, ಮನುಷ್ಯನ ಪ್ರಾಣ ಉಳಿಸು ವಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಎನ್ನುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ವೈದ್ಯರೂ ಕೂಡ ಡೆಂಗ್ಯೂ ಜ್ವರ ಇರುವ ರೋಗಿಗಳಿಗೆ ಬಿಳಿ ರಕ್ತಕಣಗಳನ್ನು ಹೆಚ್ಚಿಸುವ ಆಹಾರ ಪದಾರ್ಥ ಗಳನ್ನು ಹೆಚ್ಚಾಗಿ ಸೇವಿಸಬೇಕೆಂದು ಹೇಳುವುದು. ಯಾಕೆಂದರೆ ಒಂದು ವೇಳೆ ಬಿಳಿ ರಕ್ತಕಣಗಳು ರೋಗಿ ಯಲ್ಲಿ ಕಡಿಮೆ ಆಗುತ್ತಾ ಹೋದರೆ, ಡೆಂಗ್ಯೂ ಜ್ವರದ ಸೋಂಕು ಹೆಚ್ಚಾಗುವ ಸಾಧ್ಯತೆ ಕೂಡ ಹೆಚ್ಚಿರುತ್ತದೆಯಂತೆ...
ಬಿಳಿ ರಕ್ತಕಣಗಳ ಮಹತ್ವದ ಬಗ್ಗೆ ನಿಮಗೆ ಗೊತ್ತಿರಲಿ...

ನಿಮಗೆ ಗೊತ್ತಿರಲಿ, ದೇಹದ ಸೋಂಕುಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಈ ಬಿಳಿ ರಕ್ತಕಣಗಳು ಒಳಗೊಂಡಿರುತ್ತದೆ. ಒಂದು ವೇಳೆ ರೋಗನಿರೋಧಕ ಶಕ್ತಿ ಕಡಿಮೆಯಾಗಿ ವ್ಯಕ್ತಿ ಸೊಂಕಿಗೆ ಒಳಗಾದರೆ, ಆತನನ್ನು ಮೊದಲಿನಂತೆ ಹುಷಾರು ಮಾಡುವಲ್ಲಿ ಬಿಳಿ ರಕ್ತಕಣಗಳು ಮುಂಚೂಣಿಯಲ್ಲಿ ನಿಲ್ಲುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ, ಆರೋಗ್ಯದಲ್ಲಿ ಬಿಳಿ ರಕ್ತಕಣಗಳ ಸಂತತಿ ಕಡಿಮೆ ಆಗದಂತೆ ನೋಡಿಕೊಳ್ಳಬೇಕು.
ಪಪ್ಪಾಯಿ ಗಿಡದ ಎಲೆಗಳು

ಪಪ್ಪಾಯಿ ಎಲೆಗಳನ್ನು ಅರೆದು, ಇದರಿಂದ ಸಂಗ್ರಹಿಸಿದ ರಸವನ್ನು ಕುಡಿಯುವ ಮೂಲಕ ರಕ್ತದಲ್ಲಿರುವ ಪ್ಲೇಟ್ಲೆಟ್ ಸಂಖ್ಯೆ ವೃದ್ದಿಸುತ್ತದೆ, ಇದರಿಂದ ಡಂಗ್ಯೂ ಜ್ವರವನ್ನು ನಿಯಂತ್ರಿಸ ಬಹುದು, ಎನ್ನುವುದು ನಮಗೆಲ್ಲಾ ಗೊತ್ತೇ ಇದೆ. ಅಂತೆಯೇ, ಬಿಳಿ ರಕ್ತಕಣಗಳ ಸಂಖ್ಯೆಯನ್ನು ಕೂಡ ಹೆಚ್ಚು ಮಾಡುವಲ್ಲಿ ನೆರವಾಗುತ್ತದೆ.
ಹೀಗೆ ಮಾಡಿ:
ಮೊದಲಿಗೆ ಸ್ವಲ್ಪ ಪಪ್ಪಾಯ ಎಲೆಗಳನ್ನು ಚೆನ್ನಾಗಿ ನೀರಿನಲ್ಲಿ ತೊಳೆಯಬೇಕು.
ನಂತರ ಇದರ ಎಲೆಗಳಿಗೆ, ಸ್ವಲ್ಪ ನೀರನ್ನು ಹಾಕಿ ಚೆನ್ನಾಗಿ ರುಬ್ಬಿಕೊಂಡು, ಇನ್ನೊಂದು ಪಾತ್ರೆಗೆ ಸೋಸಿ ಕೊಳ್ಳಿ.
ಆಮೇಲೆ ಈ ಸೋಸಿಕೊಂಡ ಮಿಶ್ರಣಕ್ಕೆ, ಒಂದು ಟೇಬಲ್ ಚಮಚ ನಿಂಬೆ ಹಣ್ಣಿನ ರಸ ಮಿಶ್ರಣ ಮಾಡಿ, ಚೆನ್ನಾಗಿ ಕದಡಿಕೊಳ್ಳಿ.
ಪಪ್ಪಾಯ ಎಲೆಗಳ, ಈ ರಸ ತುಂಬಾನೇ ಕಹಿ ಇರುವ ಕಾರಣ, ಇದಕ್ಕೆ ಒಂದು ಟೇಬಲ್ ಚಮಚ ಆಗು ವಷ್ಟು ಜೇನು ತುಪ್ಪವನ್ನು ಸೇರಿಸಿ ಕುಡಿಯಬಹುದು.
ಇನ್ನು ಇದರ ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಎ, ಸಿ. ಇ, ಕೆ ಮತ್ತು ಬಿ ಕಂಡು ಬರುವು ದರಿಂದ, ಇವು ಸೊಂಕುಗಳ ವಿರುದ್ಧ ಹೋರಾಡುವಲ್ಲಿ ಹಾಗೂ ದೇಹದ ರೋಗ ನಿರೋಧಕ ವ್ಯವಸ್ಥೆ ಯನ್ನು ಬಲ ಪಡಿಸುವುದರಲ್ಲಿ, ಪ್ರಮುಖ ಪಾತ್ರವಹಿಸುತ್ತದೆ.
ಒಂದೆರಡು ಲವಂಗಗಳನ್ನ ಜಗಿಯಿರಿ!

ನೆಲ್ಲಿಕಾಯಿ
ಸಿಟ್ರಸ್ ಹಣ್ಣುಗಳು

Ways To Improve White Blood Cell Count.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am