ಬ್ರೇಕಿಂಗ್ ನ್ಯೂಸ್
21-05-22 07:55 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಮನುಷ್ಯನ ದೇಹದ ಪ್ರತಿಯೊಂದು ಅಂಗವೂ ಪ್ರಮುಖ ವಾಗಿದೆ. ಇದು ಒಂದು ರೀತಿಯ ಯಂತ್ರಗಳು ಇದ್ದ ಹಾಗೆ, ಇವು ತಮ್ಮ ಪಾಡಿಗೆ ಕೆಲಸಕಾರ್ಯ ಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾ ಹೋಗುತ್ತವೆ. ಒಂದು ವೇಳೆ ಇಲ್ಲಿ ಏನಾದರೂ ಏರು ಪೇರು ಉಂಟಾದರೆ ಅಂದರೆ, ದೇಹದ ಆಂತರಿಕ ಅಂಗಗಳಲ್ಲಿ ಕೊಂಚ ದೊಡ್ಡ ಸಮಸ್ಯೆಯನ್ನೇ ಎದುರಿಸಬೇಕಾಗುತ್ತದೆ. ಹೀಗಾಗಿ ಯಾವುದನ್ನು ಸಹ ಕಡೆಗಣಿಸುವ ಹಾಗಿಲ್ಲ.
ಇನ್ನು ಮುಖ್ಯವಾಗಿ ದೇಹದ ಪ್ರತಿಯೊಂದು ಅಂಗಾಗಗಳು ಅಚ್ಚುಕಟ್ಟಾಗಿ ಕೆಲಸ ಮಾಡ ಬೇಕೆಂದರೆ, ದೇಹದಲ್ಲಿ ಹರಿಯುವ ರಕ್ತ ಸಂಚಾರ ಪ್ರಮುಖ ಪಾತ್ರವಹಿಸುತ್ತದೆ. ಇಲ್ಲಿ ಕೆಂಪು ರಕ್ತ ಕಣಗಳು ಮನುಷ್ಯನ ಜೀವನಾಡಿ ಆಗಿ ಕೆಲಸ ಮಾಡಿದರೆ, ಬಿಳಿ ರಕ್ತ ಕಣಗಳು, ಮನುಷ್ಯನ ಆರೋಗ್ಯಕ್ಕೆ ಸಮಸ್ಯೆ ಉಂಟು ಮಾಡುವ ಸೊಂಕುಗಳ ವಿರುದ್ಧ ಹೋರಾಡುವಲ್ಲಿ, ಒಂದುವೇಳೆ ಗಾಯಗಳಾಗಿದ್ದರೆ, ಅದನ್ನು ಕಡಿಮೆ ಮಾಡುವಲ್ಲಿ ಹಾಗೂ ಪರೋಕ್ಷವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿಯೂ ಕೂಡ ನೆರವು ನೀಡುತ್ತದೆ.
ಒಂದು ವೇಳೆ ಮಾರಕ ಡೆಂಗ್ಯೂ ಜ್ವರ ಕಾಡಿದರೆ, ಬಿಳಿ ರಕ್ತಕಣಗಳು, ಮನುಷ್ಯನ ಪ್ರಾಣ ಉಳಿಸು ವಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಎನ್ನುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ವೈದ್ಯರೂ ಕೂಡ ಡೆಂಗ್ಯೂ ಜ್ವರ ಇರುವ ರೋಗಿಗಳಿಗೆ ಬಿಳಿ ರಕ್ತಕಣಗಳನ್ನು ಹೆಚ್ಚಿಸುವ ಆಹಾರ ಪದಾರ್ಥ ಗಳನ್ನು ಹೆಚ್ಚಾಗಿ ಸೇವಿಸಬೇಕೆಂದು ಹೇಳುವುದು. ಯಾಕೆಂದರೆ ಒಂದು ವೇಳೆ ಬಿಳಿ ರಕ್ತಕಣಗಳು ರೋಗಿ ಯಲ್ಲಿ ಕಡಿಮೆ ಆಗುತ್ತಾ ಹೋದರೆ, ಡೆಂಗ್ಯೂ ಜ್ವರದ ಸೋಂಕು ಹೆಚ್ಚಾಗುವ ಸಾಧ್ಯತೆ ಕೂಡ ಹೆಚ್ಚಿರುತ್ತದೆಯಂತೆ...
ಬಿಳಿ ರಕ್ತಕಣಗಳ ಮಹತ್ವದ ಬಗ್ಗೆ ನಿಮಗೆ ಗೊತ್ತಿರಲಿ...

ನಿಮಗೆ ಗೊತ್ತಿರಲಿ, ದೇಹದ ಸೋಂಕುಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಈ ಬಿಳಿ ರಕ್ತಕಣಗಳು ಒಳಗೊಂಡಿರುತ್ತದೆ. ಒಂದು ವೇಳೆ ರೋಗನಿರೋಧಕ ಶಕ್ತಿ ಕಡಿಮೆಯಾಗಿ ವ್ಯಕ್ತಿ ಸೊಂಕಿಗೆ ಒಳಗಾದರೆ, ಆತನನ್ನು ಮೊದಲಿನಂತೆ ಹುಷಾರು ಮಾಡುವಲ್ಲಿ ಬಿಳಿ ರಕ್ತಕಣಗಳು ಮುಂಚೂಣಿಯಲ್ಲಿ ನಿಲ್ಲುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ, ಆರೋಗ್ಯದಲ್ಲಿ ಬಿಳಿ ರಕ್ತಕಣಗಳ ಸಂತತಿ ಕಡಿಮೆ ಆಗದಂತೆ ನೋಡಿಕೊಳ್ಳಬೇಕು.
ಪಪ್ಪಾಯಿ ಗಿಡದ ಎಲೆಗಳು

ಪಪ್ಪಾಯಿ ಎಲೆಗಳನ್ನು ಅರೆದು, ಇದರಿಂದ ಸಂಗ್ರಹಿಸಿದ ರಸವನ್ನು ಕುಡಿಯುವ ಮೂಲಕ ರಕ್ತದಲ್ಲಿರುವ ಪ್ಲೇಟ್ಲೆಟ್ ಸಂಖ್ಯೆ ವೃದ್ದಿಸುತ್ತದೆ, ಇದರಿಂದ ಡಂಗ್ಯೂ ಜ್ವರವನ್ನು ನಿಯಂತ್ರಿಸ ಬಹುದು, ಎನ್ನುವುದು ನಮಗೆಲ್ಲಾ ಗೊತ್ತೇ ಇದೆ. ಅಂತೆಯೇ, ಬಿಳಿ ರಕ್ತಕಣಗಳ ಸಂಖ್ಯೆಯನ್ನು ಕೂಡ ಹೆಚ್ಚು ಮಾಡುವಲ್ಲಿ ನೆರವಾಗುತ್ತದೆ.
ಹೀಗೆ ಮಾಡಿ:
ಮೊದಲಿಗೆ ಸ್ವಲ್ಪ ಪಪ್ಪಾಯ ಎಲೆಗಳನ್ನು ಚೆನ್ನಾಗಿ ನೀರಿನಲ್ಲಿ ತೊಳೆಯಬೇಕು.
ನಂತರ ಇದರ ಎಲೆಗಳಿಗೆ, ಸ್ವಲ್ಪ ನೀರನ್ನು ಹಾಕಿ ಚೆನ್ನಾಗಿ ರುಬ್ಬಿಕೊಂಡು, ಇನ್ನೊಂದು ಪಾತ್ರೆಗೆ ಸೋಸಿ ಕೊಳ್ಳಿ.
ಆಮೇಲೆ ಈ ಸೋಸಿಕೊಂಡ ಮಿಶ್ರಣಕ್ಕೆ, ಒಂದು ಟೇಬಲ್ ಚಮಚ ನಿಂಬೆ ಹಣ್ಣಿನ ರಸ ಮಿಶ್ರಣ ಮಾಡಿ, ಚೆನ್ನಾಗಿ ಕದಡಿಕೊಳ್ಳಿ.
ಪಪ್ಪಾಯ ಎಲೆಗಳ, ಈ ರಸ ತುಂಬಾನೇ ಕಹಿ ಇರುವ ಕಾರಣ, ಇದಕ್ಕೆ ಒಂದು ಟೇಬಲ್ ಚಮಚ ಆಗು ವಷ್ಟು ಜೇನು ತುಪ್ಪವನ್ನು ಸೇರಿಸಿ ಕುಡಿಯಬಹುದು.
ಇನ್ನು ಇದರ ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಎ, ಸಿ. ಇ, ಕೆ ಮತ್ತು ಬಿ ಕಂಡು ಬರುವು ದರಿಂದ, ಇವು ಸೊಂಕುಗಳ ವಿರುದ್ಧ ಹೋರಾಡುವಲ್ಲಿ ಹಾಗೂ ದೇಹದ ರೋಗ ನಿರೋಧಕ ವ್ಯವಸ್ಥೆ ಯನ್ನು ಬಲ ಪಡಿಸುವುದರಲ್ಲಿ, ಪ್ರಮುಖ ಪಾತ್ರವಹಿಸುತ್ತದೆ.
ಒಂದೆರಡು ಲವಂಗಗಳನ್ನ ಜಗಿಯಿರಿ!

ನೆಲ್ಲಿಕಾಯಿ
ಸಿಟ್ರಸ್ ಹಣ್ಣುಗಳು

Ways To Improve White Blood Cell Count.
18-06-26 07:15 pm
HK News Staffer
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm