ಬ್ರೇಕಿಂಗ್ ನ್ಯೂಸ್
30-09-20 02:11 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆ. 30: ರಾಜ್ಯದ ಬಿಜೆಪಿ ಸರಕಾರ ತನ್ನ ಮೇಲಿನ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪವರ್ ಟಿವಿ ವಿರುದ್ಧ ಕೈಗೊಂಡಿರುವ ದಬ್ಬಾಳಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು ಹಾಗೂ ನೇರ ಚುನಾವಣೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಕಾರವೊಂದು ತನ್ನ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಯಾಗಿ ದ್ವೇಷ ರಾಜಕಾರಣ ನಡೆಸಿದೆ ಎಂದು ಆರೋಪಿಸಿದರು.

ಬಿಡಿಎ ಪ್ರಕರಣವೊಂದರಲ್ಲಿ 24 ಕೋಟಿ ರೂ.ಗಳ ಹಗರಣ ನಡೆದಿರುವ ಬಗ್ಗೆ ಸಾಕ್ಷ ಸಹಿತ ದಾಖಲೆಗಳಿವೆ. ಈ ಪ್ರಕರಣದಲ್ಲಿ 7.44 ಕೋಟಿ ರೂ. ಶೇಷಾದ್ರಿಪುರಂ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿಯ ಸಂಬಂಧಿಕರು ಪಡೆದಿದ್ದಾರೆ. ಇದಲ್ಲದೆ, ಉಳಿದ ಹಣ ಕೊಲ್ಕತ್ತಾದ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಸಂಬಂಧಿಕರ ಕಂಪನಿಗೆ ವರ್ಗಾವಣೆಯಾಗಿದೆ. ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿರುವ ಬಗ್ಗೆ ದಾಖಲೆ ಇರುವಾಗ ತನಿಖೆ ಆಗಬೇಡವೇ ? ಈ ಬಗ್ಗೆ ಸುದ್ದಿ ಮಾಡಿದ ಚಾನೆಲ್ ಮೇಲೆ ಬಲಪ್ರಯೋಗಿಸುವ ಮೂಲಕ ಜನರ ಬಾಯಿಯನ್ನು ಮುಚ್ಚಿಸಲಾಗದು. 2008ರಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಆಡಳಿತವಿದ್ದಾಗ ಪ್ರೇರಣಾ ಟ್ರಸ್ಟ್ ಪ್ರಕರಣದ ಮೂಲಕ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಮತ್ತೆ ಭ್ರಷ್ಟಾಚಾರ ನಡೆದಿದೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಮೂಲೆ ಮೂಲೆಗೂ ಜನರಿಗೆ ತಲುಪಿಸಲಾಗುವುದು ಎಂದು ಐವನ್ ಡಿಸೋಜಾ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಇಬ್ರಾಹೀಂ ಕೋಡಿಜಾಲ್ ಮತಿತ್ತರು ಉಪಸ್ಥಿತಿ ಇದ್ದರು.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm