ಬ್ರೇಕಿಂಗ್ ನ್ಯೂಸ್
30-09-20 02:11 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆ. 30: ರಾಜ್ಯದ ಬಿಜೆಪಿ ಸರಕಾರ ತನ್ನ ಮೇಲಿನ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪವರ್ ಟಿವಿ ವಿರುದ್ಧ ಕೈಗೊಂಡಿರುವ ದಬ್ಬಾಳಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು ಹಾಗೂ ನೇರ ಚುನಾವಣೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಕಾರವೊಂದು ತನ್ನ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಯಾಗಿ ದ್ವೇಷ ರಾಜಕಾರಣ ನಡೆಸಿದೆ ಎಂದು ಆರೋಪಿಸಿದರು.

ಬಿಡಿಎ ಪ್ರಕರಣವೊಂದರಲ್ಲಿ 24 ಕೋಟಿ ರೂ.ಗಳ ಹಗರಣ ನಡೆದಿರುವ ಬಗ್ಗೆ ಸಾಕ್ಷ ಸಹಿತ ದಾಖಲೆಗಳಿವೆ. ಈ ಪ್ರಕರಣದಲ್ಲಿ 7.44 ಕೋಟಿ ರೂ. ಶೇಷಾದ್ರಿಪುರಂ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿಯ ಸಂಬಂಧಿಕರು ಪಡೆದಿದ್ದಾರೆ. ಇದಲ್ಲದೆ, ಉಳಿದ ಹಣ ಕೊಲ್ಕತ್ತಾದ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಸಂಬಂಧಿಕರ ಕಂಪನಿಗೆ ವರ್ಗಾವಣೆಯಾಗಿದೆ. ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿರುವ ಬಗ್ಗೆ ದಾಖಲೆ ಇರುವಾಗ ತನಿಖೆ ಆಗಬೇಡವೇ ? ಈ ಬಗ್ಗೆ ಸುದ್ದಿ ಮಾಡಿದ ಚಾನೆಲ್ ಮೇಲೆ ಬಲಪ್ರಯೋಗಿಸುವ ಮೂಲಕ ಜನರ ಬಾಯಿಯನ್ನು ಮುಚ್ಚಿಸಲಾಗದು. 2008ರಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಆಡಳಿತವಿದ್ದಾಗ ಪ್ರೇರಣಾ ಟ್ರಸ್ಟ್ ಪ್ರಕರಣದ ಮೂಲಕ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಮತ್ತೆ ಭ್ರಷ್ಟಾಚಾರ ನಡೆದಿದೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಮೂಲೆ ಮೂಲೆಗೂ ಜನರಿಗೆ ತಲುಪಿಸಲಾಗುವುದು ಎಂದು ಐವನ್ ಡಿಸೋಜಾ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಇಬ್ರಾಹೀಂ ಕೋಡಿಜಾಲ್ ಮತಿತ್ತರು ಉಪಸ್ಥಿತಿ ಇದ್ದರು.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm