ಬ್ರೇಕಿಂಗ್ ನ್ಯೂಸ್
30-09-20 02:11 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆ. 30: ರಾಜ್ಯದ ಬಿಜೆಪಿ ಸರಕಾರ ತನ್ನ ಮೇಲಿನ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪವರ್ ಟಿವಿ ವಿರುದ್ಧ ಕೈಗೊಂಡಿರುವ ದಬ್ಬಾಳಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು ಹಾಗೂ ನೇರ ಚುನಾವಣೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಕಾರವೊಂದು ತನ್ನ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಯಾಗಿ ದ್ವೇಷ ರಾಜಕಾರಣ ನಡೆಸಿದೆ ಎಂದು ಆರೋಪಿಸಿದರು.

ಬಿಡಿಎ ಪ್ರಕರಣವೊಂದರಲ್ಲಿ 24 ಕೋಟಿ ರೂ.ಗಳ ಹಗರಣ ನಡೆದಿರುವ ಬಗ್ಗೆ ಸಾಕ್ಷ ಸಹಿತ ದಾಖಲೆಗಳಿವೆ. ಈ ಪ್ರಕರಣದಲ್ಲಿ 7.44 ಕೋಟಿ ರೂ. ಶೇಷಾದ್ರಿಪುರಂ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿಯ ಸಂಬಂಧಿಕರು ಪಡೆದಿದ್ದಾರೆ. ಇದಲ್ಲದೆ, ಉಳಿದ ಹಣ ಕೊಲ್ಕತ್ತಾದ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಸಂಬಂಧಿಕರ ಕಂಪನಿಗೆ ವರ್ಗಾವಣೆಯಾಗಿದೆ. ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿರುವ ಬಗ್ಗೆ ದಾಖಲೆ ಇರುವಾಗ ತನಿಖೆ ಆಗಬೇಡವೇ ? ಈ ಬಗ್ಗೆ ಸುದ್ದಿ ಮಾಡಿದ ಚಾನೆಲ್ ಮೇಲೆ ಬಲಪ್ರಯೋಗಿಸುವ ಮೂಲಕ ಜನರ ಬಾಯಿಯನ್ನು ಮುಚ್ಚಿಸಲಾಗದು. 2008ರಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಆಡಳಿತವಿದ್ದಾಗ ಪ್ರೇರಣಾ ಟ್ರಸ್ಟ್ ಪ್ರಕರಣದ ಮೂಲಕ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಮತ್ತೆ ಭ್ರಷ್ಟಾಚಾರ ನಡೆದಿದೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಮೂಲೆ ಮೂಲೆಗೂ ಜನರಿಗೆ ತಲುಪಿಸಲಾಗುವುದು ಎಂದು ಐವನ್ ಡಿಸೋಜಾ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಇಬ್ರಾಹೀಂ ಕೋಡಿಜಾಲ್ ಮತಿತ್ತರು ಉಪಸ್ಥಿತಿ ಇದ್ದರು.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm