ಬ್ರೇಕಿಂಗ್ ನ್ಯೂಸ್
30-09-20 02:11 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆ. 30: ರಾಜ್ಯದ ಬಿಜೆಪಿ ಸರಕಾರ ತನ್ನ ಮೇಲಿನ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪವರ್ ಟಿವಿ ವಿರುದ್ಧ ಕೈಗೊಂಡಿರುವ ದಬ್ಬಾಳಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು ಹಾಗೂ ನೇರ ಚುನಾವಣೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಕಾರವೊಂದು ತನ್ನ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಯಾಗಿ ದ್ವೇಷ ರಾಜಕಾರಣ ನಡೆಸಿದೆ ಎಂದು ಆರೋಪಿಸಿದರು.

ಬಿಡಿಎ ಪ್ರಕರಣವೊಂದರಲ್ಲಿ 24 ಕೋಟಿ ರೂ.ಗಳ ಹಗರಣ ನಡೆದಿರುವ ಬಗ್ಗೆ ಸಾಕ್ಷ ಸಹಿತ ದಾಖಲೆಗಳಿವೆ. ಈ ಪ್ರಕರಣದಲ್ಲಿ 7.44 ಕೋಟಿ ರೂ. ಶೇಷಾದ್ರಿಪುರಂ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿಯ ಸಂಬಂಧಿಕರು ಪಡೆದಿದ್ದಾರೆ. ಇದಲ್ಲದೆ, ಉಳಿದ ಹಣ ಕೊಲ್ಕತ್ತಾದ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಸಂಬಂಧಿಕರ ಕಂಪನಿಗೆ ವರ್ಗಾವಣೆಯಾಗಿದೆ. ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿರುವ ಬಗ್ಗೆ ದಾಖಲೆ ಇರುವಾಗ ತನಿಖೆ ಆಗಬೇಡವೇ ? ಈ ಬಗ್ಗೆ ಸುದ್ದಿ ಮಾಡಿದ ಚಾನೆಲ್ ಮೇಲೆ ಬಲಪ್ರಯೋಗಿಸುವ ಮೂಲಕ ಜನರ ಬಾಯಿಯನ್ನು ಮುಚ್ಚಿಸಲಾಗದು. 2008ರಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಆಡಳಿತವಿದ್ದಾಗ ಪ್ರೇರಣಾ ಟ್ರಸ್ಟ್ ಪ್ರಕರಣದ ಮೂಲಕ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಮತ್ತೆ ಭ್ರಷ್ಟಾಚಾರ ನಡೆದಿದೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಮೂಲೆ ಮೂಲೆಗೂ ಜನರಿಗೆ ತಲುಪಿಸಲಾಗುವುದು ಎಂದು ಐವನ್ ಡಿಸೋಜಾ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಇಬ್ರಾಹೀಂ ಕೋಡಿಜಾಲ್ ಮತಿತ್ತರು ಉಪಸ್ಥಿತಿ ಇದ್ದರು.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm