ಬ್ರೇಕಿಂಗ್ ನ್ಯೂಸ್
07-10-20 03:07 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಅಕ್ಟೋಬರ್ 07: ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿರುವ ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟದಿಂದ ಅಶಾಂತಿ ಸೃಷ್ಟಿಯಾಗುತ್ತಿದೆ. ಗೋವಿಗೆ ಹಿಂದು ಧರ್ಮದಲ್ಲಿ ಅತ್ಯಂತ ಶ್ರದ್ಧೆ ಹಾಗೂ ನಮ್ಮ ಜಿಲ್ಲೆಯಲ್ಲಿ ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುವ ಅನೇಕ ಕುಟುಂಬಗಳಿವೆ. ಕುಟುಂಬಕ್ಕೆ ಆಧಾರ ಸ್ತಂಭವಾಗಿರುವ ಗೋವುಗಳ ಕಳ್ಳತನದಿಂದ ಇಡೀ ಕುಟುಂಬವೇ ಬೀದಿ ಪಾಲಾಗುವುದನ್ನು ಕಂಡಿದ್ದೇವೆ. ಇದರಿಂದ ಕರಾವಳಿಯಲ್ಲಿ ಮತ್ತೆ ಅಶಾಂತಿ ಸೃಷ್ಟಿಯಾಗಬಾರದು. ಕರಾವಳಿಯ ಜನರ ನೆಮ್ಮದಿ ಹಾಳಾಗಬಾರದು. ಹಾಗಾಗಿ ತಕ್ಷಣವೇ ಪೊಲೀಸ್ ಇಲಾಖೆ ಗೋಕಳ್ಳರನ್ನು, ಅಕ್ರಮ ಗೋ ಸಾಗಾಟಗಾರರನ್ನು ಹಾಗೂ ಅಕ್ರಮ ಕಸಾಯಿಖಾನೆಗಳನ್ನು ಮಟ್ಟ ಹಾಕಲು ತಂಡ ರಚಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ದೇವಸ್ಥಾನದ ವಠಾರದಿಂದ, ಹಟ್ಟಿಯೊಳಗೆ ನುಗ್ಗಿ ಜನರನ್ನು ಬೆದರಿಸಿ ಗೋವು ಕದಿಯುವ ಜಾಲ ಜಿಲ್ಲೆಯಲ್ಲಿ ಸಕ್ರಿಯವಾಗಿದೆ. ಹಾಗಾಗಿ ಪೊಲೀಸ್ ಇಲಾಖೆ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೋಕಳ್ಳರನ್ನು ಮಟ್ಟ ಹಾಕಬೇಕೆಂದು ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm