ಬ್ರೇಕಿಂಗ್ ನ್ಯೂಸ್
16-08-20 05:05 pm Headline Karnataka News Network ಲೀಡರ್ಸ್ ರಿಪೋರ್ಟ್
ಮಂಗಳೂರು, ಆಗಸ್ಟ್ 16: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಹಲವಾರು ಭರವಸೆಗಳನ್ನು ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಮಂಗಳೂರಿನ ಅಭಿವೃದ್ಧಿಗೆ ಪೂರಕವಾಗಿ ಟಿ.ಡಿ.ಆರ್ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯುವ ಕುರಿತು ಭರವಸೆ ನೀಡಿದ್ದೆವು. ಆ ಪ್ರಕಾರ ಅಭಿವೃದ್ಧಿ ಕಾಮಗಾರಿ ಸಂಬಂಧಿಸಿ ಖಾಸಗಿ ಜಮೀನಿನ ಅಗತ್ಯ ಇರುವುದರಿಂದ, ಭೂಸ್ವಾಧೀನಕ್ಕೆ ವೇಗ ನೀಡಲು ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಉಪ ಕರವನ್ನು ಹಾಗೂ ಉದ್ದಿಮೆಗಳ ಮೇಲೆ ವಿಧಿಸಿರುವ ಘನತ್ಯಾಜ್ಯ ವಿಲೇವಾರಿ ಸೇವಾಶುಲ್ಕವನ್ನು ಪರಿಷ್ಕರಿಸುವ ಮೂಲಕ ಜನರಿಗೆ ಚುನಾವಣೆಯ ವೇಳೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳಲಾಗಿದೆ. ಆಡಳಿತ ವ್ಯವಸ್ಥೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ಎಲ್ಲ ವಾರ್ಡುಗಳಲ್ಲಿಯೂ ವಾರ್ಡ್ ಸಮಿತಿ ರಚಿಸಲು ನಿರ್ಣಯ ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿ ಕಣ್ಣೂರು ಗ್ರಾಮದಲ್ಲಿ ಜಿ+3 ಮಾದರಿಯ 500 ಮನೆಗಳ ನಿರ್ಮಾಣ ಯೋಜನೆಗೆ ಪಾಲಿಕೆಯಿಂದ ಶೇ.10 ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. 6 ಗುಂಪುಗಳ ಜಿ+3 ಮಾದರಿಯ 21 ಬ್ಲಾಕ್ ಗಳನ್ನೊಳಗೊಂಡ ಲೇಔಟ್ ಯೋಜನೆ ಮಾಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಯಂತೆ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ದರ ಕಡಿಮೆಗೊಳಿಸಲಾಗಿದೆ. ಗೃಹೇತರ, ವಾಣಿಜ್ಯ, ಕಟ್ಟಡ ರಚನೆ, ಸಗಟು ಪೂರೈಕೆ, ಬೃಹತ್ ಕೈಗಾರಿಕೆ ಹಾಗೂ ಗೃಹ ಬಳಕೆ ನೀರಿನ ದರವನ್ನು ಪರಿಷ್ಕರಿಸಲಾಗಿದೆ. ಆ ಮೂಲಕ ಮಂಗಳೂರಿನ ಜನತೆಗೆ ನಾವು ನೀಡಿದ್ದ ಭರವಸೆಯನ್ನು ನಮ್ಮ ಆಡಳಿತದ ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಪದವು ಗ್ರಾಮದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಹಾಗೂ ರಾಜ್ಯ ಸರ್ಕಾರದ ಅನುದಾನದಡಿ ಮಂಜೂರಾತಿ ಪಡೆದಿರುವ ಜಿ+3 ಮಾದರಿಯ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಉಂಟಾಗಿದ್ದ ಸಂರಕ್ಷಿತ ಅರಣ್ಯದ ತೊಡಕನ್ನು ನಿವಾರಿಸಲಾಗಿದೆ. ಅರಣ್ಯ ಇಲಾಖೆಗೆ ಪ್ರತ್ಯೇಕ ಜಮೀನು ನೀಡಲಾಗಿದ್ದು, ಈ ಹಿಂದೆ ಗುರುತಿಸಿದ ಸ್ಥಳದಲ್ಲೇ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm