ಬ್ರೇಕಿಂಗ್ ನ್ಯೂಸ್
16-08-20 05:05 pm Headline Karnataka News Network ಲೀಡರ್ಸ್ ರಿಪೋರ್ಟ್
ಮಂಗಳೂರು, ಆಗಸ್ಟ್ 16: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಹಲವಾರು ಭರವಸೆಗಳನ್ನು ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಮಂಗಳೂರಿನ ಅಭಿವೃದ್ಧಿಗೆ ಪೂರಕವಾಗಿ ಟಿ.ಡಿ.ಆರ್ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯುವ ಕುರಿತು ಭರವಸೆ ನೀಡಿದ್ದೆವು. ಆ ಪ್ರಕಾರ ಅಭಿವೃದ್ಧಿ ಕಾಮಗಾರಿ ಸಂಬಂಧಿಸಿ ಖಾಸಗಿ ಜಮೀನಿನ ಅಗತ್ಯ ಇರುವುದರಿಂದ, ಭೂಸ್ವಾಧೀನಕ್ಕೆ ವೇಗ ನೀಡಲು ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಉಪ ಕರವನ್ನು ಹಾಗೂ ಉದ್ದಿಮೆಗಳ ಮೇಲೆ ವಿಧಿಸಿರುವ ಘನತ್ಯಾಜ್ಯ ವಿಲೇವಾರಿ ಸೇವಾಶುಲ್ಕವನ್ನು ಪರಿಷ್ಕರಿಸುವ ಮೂಲಕ ಜನರಿಗೆ ಚುನಾವಣೆಯ ವೇಳೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳಲಾಗಿದೆ. ಆಡಳಿತ ವ್ಯವಸ್ಥೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ಎಲ್ಲ ವಾರ್ಡುಗಳಲ್ಲಿಯೂ ವಾರ್ಡ್ ಸಮಿತಿ ರಚಿಸಲು ನಿರ್ಣಯ ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿ ಕಣ್ಣೂರು ಗ್ರಾಮದಲ್ಲಿ ಜಿ+3 ಮಾದರಿಯ 500 ಮನೆಗಳ ನಿರ್ಮಾಣ ಯೋಜನೆಗೆ ಪಾಲಿಕೆಯಿಂದ ಶೇ.10 ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. 6 ಗುಂಪುಗಳ ಜಿ+3 ಮಾದರಿಯ 21 ಬ್ಲಾಕ್ ಗಳನ್ನೊಳಗೊಂಡ ಲೇಔಟ್ ಯೋಜನೆ ಮಾಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಯಂತೆ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ದರ ಕಡಿಮೆಗೊಳಿಸಲಾಗಿದೆ. ಗೃಹೇತರ, ವಾಣಿಜ್ಯ, ಕಟ್ಟಡ ರಚನೆ, ಸಗಟು ಪೂರೈಕೆ, ಬೃಹತ್ ಕೈಗಾರಿಕೆ ಹಾಗೂ ಗೃಹ ಬಳಕೆ ನೀರಿನ ದರವನ್ನು ಪರಿಷ್ಕರಿಸಲಾಗಿದೆ. ಆ ಮೂಲಕ ಮಂಗಳೂರಿನ ಜನತೆಗೆ ನಾವು ನೀಡಿದ್ದ ಭರವಸೆಯನ್ನು ನಮ್ಮ ಆಡಳಿತದ ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಪದವು ಗ್ರಾಮದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಹಾಗೂ ರಾಜ್ಯ ಸರ್ಕಾರದ ಅನುದಾನದಡಿ ಮಂಜೂರಾತಿ ಪಡೆದಿರುವ ಜಿ+3 ಮಾದರಿಯ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಉಂಟಾಗಿದ್ದ ಸಂರಕ್ಷಿತ ಅರಣ್ಯದ ತೊಡಕನ್ನು ನಿವಾರಿಸಲಾಗಿದೆ. ಅರಣ್ಯ ಇಲಾಖೆಗೆ ಪ್ರತ್ಯೇಕ ಜಮೀನು ನೀಡಲಾಗಿದ್ದು, ಈ ಹಿಂದೆ ಗುರುತಿಸಿದ ಸ್ಥಳದಲ್ಲೇ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm