ಬ್ರೇಕಿಂಗ್ ನ್ಯೂಸ್
16-08-20 05:05 pm Headline Karnataka News Network ಲೀಡರ್ಸ್ ರಿಪೋರ್ಟ್
ಮಂಗಳೂರು, ಆಗಸ್ಟ್ 16: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಹಲವಾರು ಭರವಸೆಗಳನ್ನು ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಮಂಗಳೂರಿನ ಅಭಿವೃದ್ಧಿಗೆ ಪೂರಕವಾಗಿ ಟಿ.ಡಿ.ಆರ್ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯುವ ಕುರಿತು ಭರವಸೆ ನೀಡಿದ್ದೆವು. ಆ ಪ್ರಕಾರ ಅಭಿವೃದ್ಧಿ ಕಾಮಗಾರಿ ಸಂಬಂಧಿಸಿ ಖಾಸಗಿ ಜಮೀನಿನ ಅಗತ್ಯ ಇರುವುದರಿಂದ, ಭೂಸ್ವಾಧೀನಕ್ಕೆ ವೇಗ ನೀಡಲು ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಉಪ ಕರವನ್ನು ಹಾಗೂ ಉದ್ದಿಮೆಗಳ ಮೇಲೆ ವಿಧಿಸಿರುವ ಘನತ್ಯಾಜ್ಯ ವಿಲೇವಾರಿ ಸೇವಾಶುಲ್ಕವನ್ನು ಪರಿಷ್ಕರಿಸುವ ಮೂಲಕ ಜನರಿಗೆ ಚುನಾವಣೆಯ ವೇಳೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳಲಾಗಿದೆ. ಆಡಳಿತ ವ್ಯವಸ್ಥೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ಎಲ್ಲ ವಾರ್ಡುಗಳಲ್ಲಿಯೂ ವಾರ್ಡ್ ಸಮಿತಿ ರಚಿಸಲು ನಿರ್ಣಯ ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿ ಕಣ್ಣೂರು ಗ್ರಾಮದಲ್ಲಿ ಜಿ+3 ಮಾದರಿಯ 500 ಮನೆಗಳ ನಿರ್ಮಾಣ ಯೋಜನೆಗೆ ಪಾಲಿಕೆಯಿಂದ ಶೇ.10 ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. 6 ಗುಂಪುಗಳ ಜಿ+3 ಮಾದರಿಯ 21 ಬ್ಲಾಕ್ ಗಳನ್ನೊಳಗೊಂಡ ಲೇಔಟ್ ಯೋಜನೆ ಮಾಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಯಂತೆ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ದರ ಕಡಿಮೆಗೊಳಿಸಲಾಗಿದೆ. ಗೃಹೇತರ, ವಾಣಿಜ್ಯ, ಕಟ್ಟಡ ರಚನೆ, ಸಗಟು ಪೂರೈಕೆ, ಬೃಹತ್ ಕೈಗಾರಿಕೆ ಹಾಗೂ ಗೃಹ ಬಳಕೆ ನೀರಿನ ದರವನ್ನು ಪರಿಷ್ಕರಿಸಲಾಗಿದೆ. ಆ ಮೂಲಕ ಮಂಗಳೂರಿನ ಜನತೆಗೆ ನಾವು ನೀಡಿದ್ದ ಭರವಸೆಯನ್ನು ನಮ್ಮ ಆಡಳಿತದ ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಪದವು ಗ್ರಾಮದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಹಾಗೂ ರಾಜ್ಯ ಸರ್ಕಾರದ ಅನುದಾನದಡಿ ಮಂಜೂರಾತಿ ಪಡೆದಿರುವ ಜಿ+3 ಮಾದರಿಯ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಉಂಟಾಗಿದ್ದ ಸಂರಕ್ಷಿತ ಅರಣ್ಯದ ತೊಡಕನ್ನು ನಿವಾರಿಸಲಾಗಿದೆ. ಅರಣ್ಯ ಇಲಾಖೆಗೆ ಪ್ರತ್ಯೇಕ ಜಮೀನು ನೀಡಲಾಗಿದ್ದು, ಈ ಹಿಂದೆ ಗುರುತಿಸಿದ ಸ್ಥಳದಲ್ಲೇ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am