ಬ್ರೇಕಿಂಗ್ ನ್ಯೂಸ್
06-09-20 05:52 pm Udupi Reporter ಲೀಡರ್ಸ್ ರಿಪೋರ್ಟ್
ಉಡುಪಿ, ಸೆಪ್ಟೆಂಬರ್ 6: ದೇಶದಲ್ಲಿ ಕಡಲ ಮೀನುಗಾರಿಕೆಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಒಳನಾಡು ಮೀನು ಉತ್ಪಾದನೆಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನು ಮೂರು ವರ್ಷದಲ್ಲಿ ದೇಶದಲ್ಲಿ ಕರ್ನಾಟಕ ರಾಜ್ಯ ಮೀನು ಉತ್ಪಾದನೆಯಲ್ಲಿ ಪ್ರಥಮ ಸ್ಥಾನ ತಲುಪುವ ಅವಕಾಶ ನಿಚ್ಚಳವಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಗಂಗೊಳ್ಳಿ, ಮರವಂತೆ, ಕೊಡೇರಿ ಮೀನುಗಾರಿಕಾ ಜಟ್ಟಿ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೀನುಗಾರಿಕೆಗೆ ನೀಡುತ್ತಿರುವ ಸಹಕಾರ ಹಾಗೂ ಉತ್ತೇಜನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗಂಗೊಳ್ಳಿ ಮೀನುಗಾರಿಕಾ ಜಟ್ಟಿ ಕಾಮಗಾರಿ ವೀಕ್ಷಿಸಿದ ಸಚಿವರು 12 ಕೋಟಿ ರುಪಾಯಿ ಮೊತ್ತದಲ್ಲಿ ಹೊಸದಾಗಿ ಜಟ್ಟಿ ನಿರ್ಮಾಣವಾಗಲಿದ್ದು, ಇದರಿಂದ ಗಂಗೊಳ್ಳಿ ಪ್ರದೇಶದ ಮೀನುಗಾರಿಕೆಗೆ ಹೊಸ ಕಾಯಕಲ್ಪ ಸಿಗಲಿದೆ ಎಂದು ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಜಟ್ಟಿ ಪ್ರದೇಶದಲ್ಲಿ ಹೈಮಾಸ್ಟ್ ದೀಪದ ಅಳವಡಿಕೆ, ತುರ್ತಾಗಿ ಹೂಳೆತ್ತುವುದು ಸೇರಿದಂತೆ ಹಲವಾರು ಬೇಡಿಕೆಗೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿ, ತಕ್ಷಣ ಸಮಸ್ಯೆ ಬಗೆಹರಿಸಲು ತಿಳಿಸಿದರು.
ಮರವಂತೆ ಬ್ರೇಕ್ ವಾಟರ್ ನಿರ್ಮಾಣವಾಗುತ್ತಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು, ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ. ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮೀನುಗಾರರ ಪರವಾಗಿ ಕೃತಜ್ಞತೆ ತಿಳಿಸಿದರು. ಎರಡನೇ ಹಂತದ ಕಾಮಗಾರಿಯ ಯೋಜನಾ ವರದಿ ಸಿದ್ಧವಾಗಿ, ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆಗಳು ಮುಗಿದು, ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮೀನುಗಾರರಿಗೆ ಭರವಸೆ ನೀಡಿದರು.

ಕೊಡೇರಿ ಮೀನುಗಾರಿಕಾ ಜೆಟ್ಟಿ ಮತ್ತು ಉಪ್ಪುಂದ ನಾಡದೋಣಿ ತಂಗುದಾಣದ ಕಿರು ಜಟ್ಟಿಗಳ ವಿಸ್ತರಣೆ ಮಾಡಿ ಮೂಲಭೂತ ಸೌಕರ್ಯ, ವಿದ್ಯುತ್ ದೀಪ, ಕೊಂಡಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು. ಇದಕ್ಕೆ ಪೂರಕವಾಗಿ 4.5 ಕೋಟಿ ರುಪಾಯಿ ಪ್ರಸ್ತಾವನೆ ಹಣಕಾಸು ಇಲಾಖೆಯಲ್ಲಿ ಇದ್ದು, ವಾರಾಂತ್ಯದಲ್ಲಿ ಮಂಜೂರಾತಿ ಪಡೆದು ಮೀನುಗಾರರಿಗೆ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.
ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಭೇಟಿ ನೀಡಿದ ಸಚಿವರಿಗೆ, ಮೀನು ವ್ಯಾಪಾರಿ ಮಹಿಳೆಯರು ವೃತ್ತಿ ಮಾಡಲು ಜಾಗದ ಸಮಸ್ಯೆಗಳಿದ್ದು, ಪರಿಹಾರ ಕೊಡಿಸಬೇಕೆಂದು ವಿನಂತಿಸಿದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm