ಕೊರೊನಾ ಗೆದ್ದ ಈಶ್ವರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

10-09-20 11:56 am       Headline Karnataka News Network   ಲೀಡರ್ಸ್ ರಿಪೋರ್ಟ್

ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಈಶ್ವರಪ್ಪ ಗುಣಮುಖರಾಗಿದ್ದಾರೆ.

ಶಿವಮೊಗ್ಗ, ಸೆಪ್ಟೆಂಬರ್ 10: ಕೊರೊನಾ ಸೋಂಕು ದೃಢ ಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ  ಸಚಿವ ಕೆ.ಎಸ್.ಈಶ್ವರಪ್ಪ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಕೊರೊನಾ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಪತ್ನಿ ಜಯಲಕ್ಷ್ಮಿ ಅವರ ಜತೆ ಈಶ್ವರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿತ್ತು. ಹಾಗಾಗಿ  ಮತ್ತೊಮ್ಮೆ ತಪಾಸಣೆ ನಡೆಸಿದ ನಂತರ ಬೆಳಿಗ್ಗೆ 11ಕ್ಕೆ ಅವರನ್ನು ಮನೆಗೆ ಕಳುಹಿಸಲಾಯಿತು. ಅವರು ಒಂದು ವಾರ ಬೆಂಗಳೂರಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದು ಸೆ.15ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Join our WhatsApp group for latest news updates