ಬ್ರೇಕಿಂಗ್ ನ್ಯೂಸ್
10-09-20 05:45 pm Mysore Correspondent ಲೀಡರ್ಸ್ ರಿಪೋರ್ಟ್
ಮೈಸೂರು, ಸೆಪ್ಟೆಂಬರ್ 10: ಮೈಸೂರು ರಾಜಕಾರಣಿಗಳೇ ಡಗ್ಸ್ ಮಾಫಿಯಾದ ರೂವಾರಿಗಳಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಡ್ರಗ್ಸ್ ದೊರೆಯುತ್ತದೆ ಎಂದು ಆರೋಪ ಮಾಡಿದರು.
ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಅವರ ಮಕ್ಕಳೇ ಇದರಲ್ಲಿ ಶಾಮೀಲು ಆಗಿದ್ದಾರೆ. ಸಾವಿರಾರು ಕೋಟಿ ದಂಧೆ ಮಾಡುತ್ತಿದ್ದು, ಪ್ರಕರಣ ಹೊರ ಬಂದಾಗ ಜಾಮೀನು ಪಡೆದು ಹೊರಗೆ ಬರುತ್ತಾರೆ. ಬಳಿಕ ಇದೇ ರೀತಿ ಮತ್ತೇ ಡ್ರಗ್ಸ್ ದಂಧೆ ಮಾಡುತ್ತಾರೆ. ಈ ಡ್ರಗ್ಸ್ ಮಾಫಿಯಾ ಬಗ್ಗೆ ಪೊಲೀಸರಿಗೆ ಎಲ್ಲಾ ತಿಳಿದಿದ್ದರೂ, ರಾಜಕಾರಣಿಗಳೇ ಪೊಲೀಸರ ಕೈಕಟ್ಟಿ ಹಾಕಿದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಲವ್ ಜಿಹಾದ್ ಮಾದರಿಯಲ್ಲಿ ಡ್ರಗ್ಸ್ ಜಿಹಾದ್ ನಡೆಯುತ್ತಿದ್ದು, ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ ಆಗಿದ್ದು, ಪಂಜಾಬ್, ಗುಜರಾತ್, ಗೋವಾ ಮೂಲಕ ಭಾರತಕ್ಕೆ ಡ್ರಗ್ಸ್ ಪ್ರವೇಶಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೇ, ಇಂದು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm