ಬ್ರೇಕಿಂಗ್ ನ್ಯೂಸ್
10-09-20 05:45 pm Mysore Correspondent ಲೀಡರ್ಸ್ ರಿಪೋರ್ಟ್
ಮೈಸೂರು, ಸೆಪ್ಟೆಂಬರ್ 10: ಮೈಸೂರು ರಾಜಕಾರಣಿಗಳೇ ಡಗ್ಸ್ ಮಾಫಿಯಾದ ರೂವಾರಿಗಳಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಡ್ರಗ್ಸ್ ದೊರೆಯುತ್ತದೆ ಎಂದು ಆರೋಪ ಮಾಡಿದರು.
ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಅವರ ಮಕ್ಕಳೇ ಇದರಲ್ಲಿ ಶಾಮೀಲು ಆಗಿದ್ದಾರೆ. ಸಾವಿರಾರು ಕೋಟಿ ದಂಧೆ ಮಾಡುತ್ತಿದ್ದು, ಪ್ರಕರಣ ಹೊರ ಬಂದಾಗ ಜಾಮೀನು ಪಡೆದು ಹೊರಗೆ ಬರುತ್ತಾರೆ. ಬಳಿಕ ಇದೇ ರೀತಿ ಮತ್ತೇ ಡ್ರಗ್ಸ್ ದಂಧೆ ಮಾಡುತ್ತಾರೆ. ಈ ಡ್ರಗ್ಸ್ ಮಾಫಿಯಾ ಬಗ್ಗೆ ಪೊಲೀಸರಿಗೆ ಎಲ್ಲಾ ತಿಳಿದಿದ್ದರೂ, ರಾಜಕಾರಣಿಗಳೇ ಪೊಲೀಸರ ಕೈಕಟ್ಟಿ ಹಾಕಿದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಲವ್ ಜಿಹಾದ್ ಮಾದರಿಯಲ್ಲಿ ಡ್ರಗ್ಸ್ ಜಿಹಾದ್ ನಡೆಯುತ್ತಿದ್ದು, ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ ಆಗಿದ್ದು, ಪಂಜಾಬ್, ಗುಜರಾತ್, ಗೋವಾ ಮೂಲಕ ಭಾರತಕ್ಕೆ ಡ್ರಗ್ಸ್ ಪ್ರವೇಶಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೇ, ಇಂದು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದರು.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm