ಬ್ರೇಕಿಂಗ್ ನ್ಯೂಸ್
11-09-20 03:46 pm Bangalore Correspondent ಲೀಡರ್ಸ್ ರಿಪೋರ್ಟ್
ಬೆಂಗಳೂರು, ಸಪ್ಟೆಂಬರ್ 11: ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ದಾಸರಹಳ್ಳಿಯಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಮೈತ್ರಿ ಸರ್ಕಾರ ಪತನವಾದ ಬಳಿಕ ಇದೇ ಮೊದಲ ಬಾರಿಗೆ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಭೇಟಿ ಆಗಿದ್ದಾರೆ. ಇಬ್ಬರೂ ನಾಯಕರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
ಇದಕ್ಕೆ ಕೆಲವರು ರಾಜಕೀಯ ಬಣ್ಣ ನೀಡಿದರೂ, ರಾಜಕೀಯದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ತಕ್ಷಣವೇ ಆಗಬೇಕಾಗಿರುವ ಕೆಲಸಗಳು ಮತ್ತು ರಾಮನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆಗೆ ಬಂದಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಜುನಾಥ್ ಅವರೂ ಕುಮಾರಸ್ವಾಮಿ ಜತೆಗಿದ್ದರು. ನಗರದಲ್ಲಿ ಮಂಜುನಾಥ್ ಜೆಡಿಎಸ್ನಿಂದ ಗೆದ್ದಿರುವ ಏಕೈಕ ಶಾಸಕ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am