ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm