ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm