ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm