ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm