ಬ್ರೇಕಿಂಗ್ ನ್ಯೂಸ್
24-05-22 08:42 pm HK News Desk ಕರಾವಳಿ
ಕುಂದಾಪುರ, ಮೇ 24 : ಕುಂದಾಪುರ ಮತ್ತು ಬೀಜಾಡಿಯ ಸಮುದ್ರ ತೀರದಲ್ಲಿ ಪೆಟ್ರೋಲಿಯಂ ತ್ಯಾಜ್ಯ ಕಂಡುಬಂದಿದ್ದು ಸಮುದ್ರ ನೀರಿನಲ್ಲಿ ಕಪ್ಪುದ್ರವ ತೀರದುದ್ದಕ್ಕೂ ಹರಡಿಕೊಂಡಿದೆ. ನೀರಿನಲ್ಲಿ ಹೆಪ್ಪುಗಟ್ಟಿದ ರೀತಿ ದೊಡ್ಡ ಮಟ್ಟದಲ್ಲಿ ಟಾರ್ಬಾಲ್ಗಳು ಗೋಚರಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಮುದ್ರಕ್ಕೆ ಬಿಡಲಾಗುವ ಪೆಟ್ರೋಲಿಯಂ ತ್ಯಾಜ್ಯ ಉಂಡೆ ಕಟ್ಟಿರುವ (ಟಾರ್ ಬಾಲ್) ಮಾದರಿಯಲ್ಲಿ ಈ ಭಾಗದ ಸಮುದ್ರ ದಡದಲ್ಲಿ ಕಂಡುಬಂದಿದೆ. ಇದರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು ಗೋಚರಿಸಿದ್ದು ಸಮುದ್ರ ತೀರದ ಸ್ವಚ್ಛತೆಗೆ ತೆರಳಿದ್ದ ಕೆಲವರಿಗೆ ಎಣ್ಣೆ ಅಂಶದ ಟಾರ್ ಚಪ್ಪಲಿಗೆಲ್ಲಾ ಮೆತ್ತಿಕೊಂಡಿದೆ.

ಮೈಕ್ರೋಪ್ಲಾಸ್ಟಿಕ್, ಟಾರ್ ಬಾಲ್ ಜಲಚರಗಳು ಮತ್ತು ಮಾನವನಿಗೆ ಹಾನಿಕರವಾಗಿದ್ದು ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸುರತ್ಕಲ್ ಬಳಿಯ ಎಂಆರ್ ಪಿಎಲ್ ನಿಂದ ಸಮುದ್ರಕ್ಕೆ ಬಿಡಲಾಗುವ ತ್ಯಾಜ್ಯವೇ ? ಐಎಸ್ ಪಿಆರ್ ಎಲ್ ಭೂತಗ ಕೊಳವೆಯಿಂದಾದ ಸೋರಿಕೆಯೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಂಆರ್ ಪಿಎಲ್ ಕೈಗಾರಿಕೆಯ ತ್ಯಾಜ್ಯವನ್ನು ಸಮುದ್ರಕ್ಕೆ ಪೈಪ್ ಹಾಕಿ ಬಿಡಲಾಗುತ್ತಿದೆ.
![]()
ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ಕಿಲೋಮೀಟರ್ ಉದ್ದಕ್ಕೂ ಹರಡಿರುವುದು ಹೇಗೆ? ಸಮುದ್ರದ ಮೀನುಗಳನ್ನು ತಿನ್ನುವ ಮಾನವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಇದರ ಬಗ್ಗೆ ಕೂಡಲೇ ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕು ಎಂದು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ತಂಡದ ಸದಸ್ಯರು ಒತ್ತಾಯಿಸಿದ್ದಾರೆ. ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೊಡಗಿದ್ದಾಗ ನೀರಿನಲ್ಲಿ ತೇಲುವ ಟಾರನ್ನು ಪತ್ತೆ ಮಾಡಿದ್ದಾರೆ.
Conservationists working towards turtle conservation were distraught, after they noticed tar balls and oil spills on the beaches of Kundapur.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm