ಬ್ರೇಕಿಂಗ್ ನ್ಯೂಸ್
24-05-22 08:42 pm HK News Desk ಕರಾವಳಿ
ಕುಂದಾಪುರ, ಮೇ 24 : ಕುಂದಾಪುರ ಮತ್ತು ಬೀಜಾಡಿಯ ಸಮುದ್ರ ತೀರದಲ್ಲಿ ಪೆಟ್ರೋಲಿಯಂ ತ್ಯಾಜ್ಯ ಕಂಡುಬಂದಿದ್ದು ಸಮುದ್ರ ನೀರಿನಲ್ಲಿ ಕಪ್ಪುದ್ರವ ತೀರದುದ್ದಕ್ಕೂ ಹರಡಿಕೊಂಡಿದೆ. ನೀರಿನಲ್ಲಿ ಹೆಪ್ಪುಗಟ್ಟಿದ ರೀತಿ ದೊಡ್ಡ ಮಟ್ಟದಲ್ಲಿ ಟಾರ್ಬಾಲ್ಗಳು ಗೋಚರಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಮುದ್ರಕ್ಕೆ ಬಿಡಲಾಗುವ ಪೆಟ್ರೋಲಿಯಂ ತ್ಯಾಜ್ಯ ಉಂಡೆ ಕಟ್ಟಿರುವ (ಟಾರ್ ಬಾಲ್) ಮಾದರಿಯಲ್ಲಿ ಈ ಭಾಗದ ಸಮುದ್ರ ದಡದಲ್ಲಿ ಕಂಡುಬಂದಿದೆ. ಇದರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು ಗೋಚರಿಸಿದ್ದು ಸಮುದ್ರ ತೀರದ ಸ್ವಚ್ಛತೆಗೆ ತೆರಳಿದ್ದ ಕೆಲವರಿಗೆ ಎಣ್ಣೆ ಅಂಶದ ಟಾರ್ ಚಪ್ಪಲಿಗೆಲ್ಲಾ ಮೆತ್ತಿಕೊಂಡಿದೆ.

ಮೈಕ್ರೋಪ್ಲಾಸ್ಟಿಕ್, ಟಾರ್ ಬಾಲ್ ಜಲಚರಗಳು ಮತ್ತು ಮಾನವನಿಗೆ ಹಾನಿಕರವಾಗಿದ್ದು ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸುರತ್ಕಲ್ ಬಳಿಯ ಎಂಆರ್ ಪಿಎಲ್ ನಿಂದ ಸಮುದ್ರಕ್ಕೆ ಬಿಡಲಾಗುವ ತ್ಯಾಜ್ಯವೇ ? ಐಎಸ್ ಪಿಆರ್ ಎಲ್ ಭೂತಗ ಕೊಳವೆಯಿಂದಾದ ಸೋರಿಕೆಯೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಂಆರ್ ಪಿಎಲ್ ಕೈಗಾರಿಕೆಯ ತ್ಯಾಜ್ಯವನ್ನು ಸಮುದ್ರಕ್ಕೆ ಪೈಪ್ ಹಾಕಿ ಬಿಡಲಾಗುತ್ತಿದೆ.
![]()
ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ಕಿಲೋಮೀಟರ್ ಉದ್ದಕ್ಕೂ ಹರಡಿರುವುದು ಹೇಗೆ? ಸಮುದ್ರದ ಮೀನುಗಳನ್ನು ತಿನ್ನುವ ಮಾನವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಇದರ ಬಗ್ಗೆ ಕೂಡಲೇ ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕು ಎಂದು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ತಂಡದ ಸದಸ್ಯರು ಒತ್ತಾಯಿಸಿದ್ದಾರೆ. ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೊಡಗಿದ್ದಾಗ ನೀರಿನಲ್ಲಿ ತೇಲುವ ಟಾರನ್ನು ಪತ್ತೆ ಮಾಡಿದ್ದಾರೆ.
Conservationists working towards turtle conservation were distraught, after they noticed tar balls and oil spills on the beaches of Kundapur.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm