ಬ್ರೇಕಿಂಗ್ ನ್ಯೂಸ್
24-05-22 09:06 pm Mangalore Correspondent ಕರಾವಳಿ
ಮಂಗಳೂರು, ಮೇ 24: ಗುರುಪುರ ಬಳಿಯ ಮಳಲಿ ಪೇಟೆಯ ಜುಮ್ಮಾ ಮಸೀದಿಯಲ್ಲಿ ದೇವಸ್ಥಾನದ ಮಾದರಿ ರಚನೆ ಕಂಡುಬಂದ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟಿರುವುದರಿಂದ ಪರಿಸರದಲ್ಲಿ ಶಾಂತಿ ಕದಡಬಾರದು ಎನ್ನುವ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಮಳಲಿ ದರ್ಗಾದ ಸುತ್ತಲಿನ 500 ಮೀಟರ್ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ತೆಂಕುಳಿಪಾಡಿ ಗ್ರಾಮದ ಜೋಡುತಡಮೆ ಎಂಬಲ್ಲಿನ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದು ಸಂಘಟನೆಗಳ ವತಿಯಿಂದ ತಾಂಬೂಲ ಪ್ರಶ್ನೆ ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮ ಮೇ 25ರ ಬೆಳಗ್ಗೆ 8ರಿಂದ ಸಂಜೆಯ ವರೆಗೆ ನಡೆಯುವುದರಿಂದ ಈ ಸಂದರ್ಭದಲ್ಲಿ ಮಸೀದಿ ಕುರಿತು ಚರ್ಚೆಗಳು ಏರ್ಪಡುವುದರಿಂದ ಶಾಂತಿ ಸೌಹಾರ್ದ ಕೆಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಮಳಲಿ ಪೇಟೆಯ ಜುಮ್ಮಾ ಮಸೀದಿಯ ಸುತ್ತ ಮುತ್ತಲಿನ 500 ಮೀಟರ್ ಪ್ರದೇಶದಲ್ಲಿ (ಕಾಚಿಲಕೋಡಿಯಿಂದ ಮಳಲಿ ಕಡೆಗೆ ಬರುವ ರಸ್ತೆ, ಗಂಜಿಮಠದಿಂದ ಮಳಲಿ ಮಸೀದಿ ಕಡೆಗೆ ಬರುವ ರಸ್ತೆ, ಹಾಗೂ ಕೈಕಂಬ ಕಡೆಯಿಂದ ಜೋಡುತಡಮೆ ವರೆಗಿನ ರಸ್ತೆ) ಮೇ 24ರ ಸಂಜೆ 8 ಗಂಟೆಯಿಂದ ಮೇ 26ರ ಬೆಳಗ್ಗೆ 8 ಗಂಟೆ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.




ಸೆಕ್ಷನ್ ಇರುವುದರಿಂದ ಈ ಭಾಗದಲ್ಲಿ ಯಾವುದೇ ರೀತಿಯಲ್ಲೂ ಘೋಷಣೆ ಕೂಗುವುದು, ಗುಂಪು ಸೇರುವುದು, ಪಟಾಕಿ ಸಿಡಿಸುವುದು, ಶಸ್ತ್ರ, ದೊಣ್ಣೆಗಳನ್ನು ಒಯ್ಯುವುದು, ಸ್ಫೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ಧರಣಿ, ಭಿತ್ತಿಪತ್ರ ಪ್ರದರ್ಶಿಸುವುದು ಕಾನೂನು ರೀತ್ಯ ಅಪರಾಧವಾಗಿರುತ್ತದೆ ಎಂದು ಪೊಲೀಸ್ ಕಮಿಷನರ್ ಈ ಕುರಿತ ಆದೇಶದಲ್ಲಿ ತಿಳಿಸಿದ್ದಾರೆ. ಮಸೀದಿ ನವೀಕರಣ ಸಂದರ್ಭ ಒಳಭಾಗದಲ್ಲಿ ದೇವಸ್ಥಾನದ ಚಿತ್ರಣ ಕಂಡುಬಂದಿದ್ದರಿಂದ ಸುದ್ದಿ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಮಂಗಳೂರಿನಲ್ಲಿಯೂ ಮಸೀದಿಯೊಳಗೆ ದೇವಸ್ಥಾನ, ಮತ್ತೊಂದು ಗ್ಯಾನವಾಪಿ ಎನ್ನುವ ರೀತಿ ಬಿಂಬಿತವಾಗಿದೆ. ಹೀಗಾಗಿ ಮಂಗಳೂರು ಕೋಮು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಪೊಲೀಸರು ಸೆಕ್ಷನ್ ಜಾರಿಗೊಳಿಸಿ ಶಾಂತಿ ಕಾಪಾಡಲು ಮುಂದಾಗಿದ್ದಾರೆ.
Malali Mosque Temple row, 144 section ordered in Mangalore Bajpe Police Station limits on may 25th as VHP holds "Thamboola Prashe".
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm