ಬ್ರೇಕಿಂಗ್ ನ್ಯೂಸ್
24-05-22 09:06 pm Mangalore Correspondent ಕರಾವಳಿ
ಮಂಗಳೂರು, ಮೇ 24: ಗುರುಪುರ ಬಳಿಯ ಮಳಲಿ ಪೇಟೆಯ ಜುಮ್ಮಾ ಮಸೀದಿಯಲ್ಲಿ ದೇವಸ್ಥಾನದ ಮಾದರಿ ರಚನೆ ಕಂಡುಬಂದ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟಿರುವುದರಿಂದ ಪರಿಸರದಲ್ಲಿ ಶಾಂತಿ ಕದಡಬಾರದು ಎನ್ನುವ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಮಳಲಿ ದರ್ಗಾದ ಸುತ್ತಲಿನ 500 ಮೀಟರ್ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ತೆಂಕುಳಿಪಾಡಿ ಗ್ರಾಮದ ಜೋಡುತಡಮೆ ಎಂಬಲ್ಲಿನ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದು ಸಂಘಟನೆಗಳ ವತಿಯಿಂದ ತಾಂಬೂಲ ಪ್ರಶ್ನೆ ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮ ಮೇ 25ರ ಬೆಳಗ್ಗೆ 8ರಿಂದ ಸಂಜೆಯ ವರೆಗೆ ನಡೆಯುವುದರಿಂದ ಈ ಸಂದರ್ಭದಲ್ಲಿ ಮಸೀದಿ ಕುರಿತು ಚರ್ಚೆಗಳು ಏರ್ಪಡುವುದರಿಂದ ಶಾಂತಿ ಸೌಹಾರ್ದ ಕೆಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಮಳಲಿ ಪೇಟೆಯ ಜುಮ್ಮಾ ಮಸೀದಿಯ ಸುತ್ತ ಮುತ್ತಲಿನ 500 ಮೀಟರ್ ಪ್ರದೇಶದಲ್ಲಿ (ಕಾಚಿಲಕೋಡಿಯಿಂದ ಮಳಲಿ ಕಡೆಗೆ ಬರುವ ರಸ್ತೆ, ಗಂಜಿಮಠದಿಂದ ಮಳಲಿ ಮಸೀದಿ ಕಡೆಗೆ ಬರುವ ರಸ್ತೆ, ಹಾಗೂ ಕೈಕಂಬ ಕಡೆಯಿಂದ ಜೋಡುತಡಮೆ ವರೆಗಿನ ರಸ್ತೆ) ಮೇ 24ರ ಸಂಜೆ 8 ಗಂಟೆಯಿಂದ ಮೇ 26ರ ಬೆಳಗ್ಗೆ 8 ಗಂಟೆ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.




ಸೆಕ್ಷನ್ ಇರುವುದರಿಂದ ಈ ಭಾಗದಲ್ಲಿ ಯಾವುದೇ ರೀತಿಯಲ್ಲೂ ಘೋಷಣೆ ಕೂಗುವುದು, ಗುಂಪು ಸೇರುವುದು, ಪಟಾಕಿ ಸಿಡಿಸುವುದು, ಶಸ್ತ್ರ, ದೊಣ್ಣೆಗಳನ್ನು ಒಯ್ಯುವುದು, ಸ್ಫೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ಧರಣಿ, ಭಿತ್ತಿಪತ್ರ ಪ್ರದರ್ಶಿಸುವುದು ಕಾನೂನು ರೀತ್ಯ ಅಪರಾಧವಾಗಿರುತ್ತದೆ ಎಂದು ಪೊಲೀಸ್ ಕಮಿಷನರ್ ಈ ಕುರಿತ ಆದೇಶದಲ್ಲಿ ತಿಳಿಸಿದ್ದಾರೆ. ಮಸೀದಿ ನವೀಕರಣ ಸಂದರ್ಭ ಒಳಭಾಗದಲ್ಲಿ ದೇವಸ್ಥಾನದ ಚಿತ್ರಣ ಕಂಡುಬಂದಿದ್ದರಿಂದ ಸುದ್ದಿ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಮಂಗಳೂರಿನಲ್ಲಿಯೂ ಮಸೀದಿಯೊಳಗೆ ದೇವಸ್ಥಾನ, ಮತ್ತೊಂದು ಗ್ಯಾನವಾಪಿ ಎನ್ನುವ ರೀತಿ ಬಿಂಬಿತವಾಗಿದೆ. ಹೀಗಾಗಿ ಮಂಗಳೂರು ಕೋಮು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಪೊಲೀಸರು ಸೆಕ್ಷನ್ ಜಾರಿಗೊಳಿಸಿ ಶಾಂತಿ ಕಾಪಾಡಲು ಮುಂದಾಗಿದ್ದಾರೆ.
Malali Mosque Temple row, 144 section ordered in Mangalore Bajpe Police Station limits on may 25th as VHP holds "Thamboola Prashe".
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm