ಬ್ರೇಕಿಂಗ್ ನ್ಯೂಸ್
24-05-22 09:06 pm Mangalore Correspondent ಕರಾವಳಿ
ಮಂಗಳೂರು, ಮೇ 24: ಗುರುಪುರ ಬಳಿಯ ಮಳಲಿ ಪೇಟೆಯ ಜುಮ್ಮಾ ಮಸೀದಿಯಲ್ಲಿ ದೇವಸ್ಥಾನದ ಮಾದರಿ ರಚನೆ ಕಂಡುಬಂದ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟಿರುವುದರಿಂದ ಪರಿಸರದಲ್ಲಿ ಶಾಂತಿ ಕದಡಬಾರದು ಎನ್ನುವ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಮಳಲಿ ದರ್ಗಾದ ಸುತ್ತಲಿನ 500 ಮೀಟರ್ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ತೆಂಕುಳಿಪಾಡಿ ಗ್ರಾಮದ ಜೋಡುತಡಮೆ ಎಂಬಲ್ಲಿನ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದು ಸಂಘಟನೆಗಳ ವತಿಯಿಂದ ತಾಂಬೂಲ ಪ್ರಶ್ನೆ ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮ ಮೇ 25ರ ಬೆಳಗ್ಗೆ 8ರಿಂದ ಸಂಜೆಯ ವರೆಗೆ ನಡೆಯುವುದರಿಂದ ಈ ಸಂದರ್ಭದಲ್ಲಿ ಮಸೀದಿ ಕುರಿತು ಚರ್ಚೆಗಳು ಏರ್ಪಡುವುದರಿಂದ ಶಾಂತಿ ಸೌಹಾರ್ದ ಕೆಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಮಳಲಿ ಪೇಟೆಯ ಜುಮ್ಮಾ ಮಸೀದಿಯ ಸುತ್ತ ಮುತ್ತಲಿನ 500 ಮೀಟರ್ ಪ್ರದೇಶದಲ್ಲಿ (ಕಾಚಿಲಕೋಡಿಯಿಂದ ಮಳಲಿ ಕಡೆಗೆ ಬರುವ ರಸ್ತೆ, ಗಂಜಿಮಠದಿಂದ ಮಳಲಿ ಮಸೀದಿ ಕಡೆಗೆ ಬರುವ ರಸ್ತೆ, ಹಾಗೂ ಕೈಕಂಬ ಕಡೆಯಿಂದ ಜೋಡುತಡಮೆ ವರೆಗಿನ ರಸ್ತೆ) ಮೇ 24ರ ಸಂಜೆ 8 ಗಂಟೆಯಿಂದ ಮೇ 26ರ ಬೆಳಗ್ಗೆ 8 ಗಂಟೆ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.
ಸೆಕ್ಷನ್ ಇರುವುದರಿಂದ ಈ ಭಾಗದಲ್ಲಿ ಯಾವುದೇ ರೀತಿಯಲ್ಲೂ ಘೋಷಣೆ ಕೂಗುವುದು, ಗುಂಪು ಸೇರುವುದು, ಪಟಾಕಿ ಸಿಡಿಸುವುದು, ಶಸ್ತ್ರ, ದೊಣ್ಣೆಗಳನ್ನು ಒಯ್ಯುವುದು, ಸ್ಫೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ಧರಣಿ, ಭಿತ್ತಿಪತ್ರ ಪ್ರದರ್ಶಿಸುವುದು ಕಾನೂನು ರೀತ್ಯ ಅಪರಾಧವಾಗಿರುತ್ತದೆ ಎಂದು ಪೊಲೀಸ್ ಕಮಿಷನರ್ ಈ ಕುರಿತ ಆದೇಶದಲ್ಲಿ ತಿಳಿಸಿದ್ದಾರೆ. ಮಸೀದಿ ನವೀಕರಣ ಸಂದರ್ಭ ಒಳಭಾಗದಲ್ಲಿ ದೇವಸ್ಥಾನದ ಚಿತ್ರಣ ಕಂಡುಬಂದಿದ್ದರಿಂದ ಸುದ್ದಿ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಮಂಗಳೂರಿನಲ್ಲಿಯೂ ಮಸೀದಿಯೊಳಗೆ ದೇವಸ್ಥಾನ, ಮತ್ತೊಂದು ಗ್ಯಾನವಾಪಿ ಎನ್ನುವ ರೀತಿ ಬಿಂಬಿತವಾಗಿದೆ. ಹೀಗಾಗಿ ಮಂಗಳೂರು ಕೋಮು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಪೊಲೀಸರು ಸೆಕ್ಷನ್ ಜಾರಿಗೊಳಿಸಿ ಶಾಂತಿ ಕಾಪಾಡಲು ಮುಂದಾಗಿದ್ದಾರೆ.
Malali Mosque Temple row, 144 section ordered in Mangalore Bajpe Police Station limits on may 25th as VHP holds "Thamboola Prashe".
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm