ಬ್ರೇಕಿಂಗ್ ನ್ಯೂಸ್
26-05-22 04:49 pm Udupi Correspondent ಕರಾವಳಿ
ಉಡುಪಿ, ಮೇ 26 : ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣದಲ್ಲಿ ಭಾರೀ ಟ್ವಿಸ್ಟ್ ಸಿಕ್ಕಿದ್ದು ಯುವತಿ ಸಾವಿಗೆ ಲವ್ ಜಿಹಾದ್ ಕಾರಣ ಎನ್ನುವ ಆರೋಪ ಕೇಳಿಬಂದಿದೆ.
ಕುಂದಾಪುರ ತಾಲೂಕಿನ ಉಪ್ಪಿನಕುದ್ರು ನಿವಾಸಿ ಶಿಲ್ಪಾ (25) ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾಗೆ ಅಜೀಜ್ (32) ಎಂಬಾತನನ್ನು ಪ್ರೀತಿಸುತ್ತಿದ್ದು ಆತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಜೀಜ್ ಗೆ ಈ ಮೊದಲೇ ಒಂದು ಮದುವೆಯಾಗಿದ್ದು ಮಕ್ಕಳನ್ನು ಹೊಂದಿದ್ದಾನೆ. ಈ ಹಿಂದೆ ಶಿಲ್ಪಾ ಟ್ಯುಟೋರಿಯಲ್ ಹೋಗುತ್ತಿದ್ದ ವೇಳೆ ಅಜೀಜ್ ಪರಿಚಯ ಆಗಿತ್ತು.

ಆನಂತರ, ಅಜೀಜ್ ಪ್ರೀತಿಯ ಹೆಸರಿನಲ್ಲಿ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಆಗಾಗ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಪತಿಯ ಕೃತ್ಯಕ್ಕೆ ಪತ್ನಿ ಸಲ್ಮಾ ಬೆಂಬಲಿಸುತ್ತಿದ್ದಳು ಎನ್ನಲಾಗಿದೆ.

ಇತ್ತೀಚೆಗೆ ಮದುವೆ ಬಗ್ಗೆ ಕೇಳಿದ್ದಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದ ಎನ್ನಲಾಗುತ್ತಿದೆ. ಅಲ್ಲದೆ, ಸಲ್ಮಾ ಮತ್ತು ಶಿಲ್ಪಾ ನಡುವೆ ಇದೇ ವಿಚಾರದಲ್ಲಿ ಜಗಳವಾಗಿದ್ದು ಬಟ್ಟೆ ಅಂಗಡಿಗೆ ಬಂದಿದ್ದ ಅಜೀಜ್ ಶಿಲ್ಪಾಗೆ ಅವಾಚ್ಯವಾಗಿ ನಿಂದಿಸಿ ನೀನು ಸತ್ತು ಹೋಗು ಎಂದು ಹೇಳಿದ್ದ. ಇದರಿಂದ ಮನನೊಂದು ಮೇ 23ರಂದು ರಾತ್ರಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಮನೆಯವರು ನೋಡಿ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದರು. 25 ರಂದು ಯುವತಿ ಸಾವು ಕಂಡಿದ್ದು ಆಕೆಯ ಸೋದರ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ಸಾವಿಗೆ ಅಜೀಜ್ ಕಾರಣ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಹಿಂದು ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಆರೋಪ ಮಾಡಿವೆ.
Udupi Love sex dhoka Kundapura Muslim boy booked for Love Jihad, girl commits suicide. The deceased has been identified as Shilpa (25). A case been registered against Aziz (32). It is said Aziz was already married and has a child but he cheated the Hindu girl of marrying her.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm