ಬ್ರೇಕಿಂಗ್ ನ್ಯೂಸ್
28-05-22 09:04 pm Mangalore Correspondent ಕರಾವಳಿ
ಮಂಗಳೂರು, ಮೇ 28: ಮದುವೆ ಮಂಟಪದಲ್ಲಿ ಇನ್ನೇನು ವರ ತಾಳಿ ಕಟ್ಟಲು ರೆಡಿಯಾಗುತ್ತಿದ್ದಾಗಲೇ ವಧು ವರನ ಬಗ್ಗೆಯೇ ಸಂಶಯ ಪಟ್ಟಿದ್ದಲ್ಲದೆ, ವಿನಾಕಾರಣ ರಂಪಾಟ ಮಾಡಿ ಮದುವೆ ಮಂಟಪದಿಂದಲೇ ಎದ್ದು ಹೋದ ಘಟನೆ ನಾರಾವಿಯಲ್ಲಿ ನಡೆದಿದೆ.
ಮೂಡುಕೊಣಾಜೆಯ ಯುವತಿ ಹಾಗೂ ನಾರಾವಿಯ ಯುವಕನ ಜೊತೆ ಮೇ 25ರಂದು ನಾರಾವಿಯಲ್ಲಿ ಮದುವೆ ಕಾರ್ಯಕ್ಕೆ ಸಿದ್ಧತೆ ನಡೆದಿತ್ತು. 500 ಮಂದಿಗೆ ಊಟಕ್ಕೂ ರೆಡಿ ಮಾಡಲಾಗಿತ್ತು. ಇನ್ನೇನು ಮದುವೆ ಕಾರ್ಯ ಮುಗಿದೇ ಹೋಯ್ತು ಎನ್ನುವಷ್ಟರಲ್ಲಿ ಯುವತಿ ರಂಪ ಶುರು ಮಾಡಿದ್ದಾಳೆ. ತಾಳಿ ಕಟ್ಟಲು ರೆಡಿಯಾಗುತ್ತಿದ್ದ ಯುವಕ, ತನಗೆ ಕೈ ತಾಗಿಸಿದ ಎಂದು ಹೇಳಿ ರಂಪ ಎತ್ತಿದ್ದ ಯುವತಿ ಬಳಿಕ ಮದುವೆ ಮಂಟಪದಿಂದಲೇ ಎದ್ದಿದ್ದಾಳೆ. ಅಲ್ಲದೆ, ನಿಶ್ಚಯ ಸಂದರ್ಭದಲ್ಲಿ ಬಂದಿದ್ದ ಹುಡುಗನೇ ಬೇರೆ. ಈಗ ಬಂದಿರುವ ಹುಡುಗನೇ ಬೇರೆ ಎಂಬುದಾಗಿ ಸಿಟ್ಟಿಗೆದ್ದು ರಂಪಾಟ ಮಾಡಿದ್ದಾಳೆ.
ಮದುವೆ ಕಾರ್ಯ ಅರ್ಧದಲ್ಲೇ ನಿಂತಿದ್ದಲ್ಲದೆ, ವಿಷಯ ವೇಣೂರು ಪೊಲೀಸರ ಬಳಿಗೆ ಹೋಗಿದೆ. ಮದುವೆಯೇನೋ ನಿಂತಿದೆ, ಮದುವೆಯ ಖರ್ಚು ಯಾರು ಕೊಡಬೇಕೆಂದು ವರನ ಕಡೆಯವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಪೊಲೀಸರು ಮಾತುಕತೆ ನಡೆಸಿ, ಎರಡೂ ಕಡೆಯವರು ಸಮಾನ ಖರ್ಚು ಭರಿಸುವಂತೆ ತಿಳಿಸಿದ್ದರು. 500 ಜನರಿಗೆ ಮಾಡಿದ್ದ ಊಟವನ್ನು ಬಳಿಕ ಪೊಲೀಸರ ಸಲಹೆಯಂತೆ ಅಲ್ಲಿಯೇ ಪಕ್ಕದ ಸರಕಾರಿ ಶಾಲೆಯ ಮಕ್ಕಳಿಗೆ ಕೊಡಿಸಿದ್ದಾರೆ. ಮದುವೆಗೆ ಬಂದಿದ್ದ ಒಂದಷ್ಟು ಜನ ಊಟ ಮಾಡಿಕೊಂಡು ಹಿಂತಿರುಗಿದ್ದಾರೆ.
ಪೊಲೀಸರ ಪ್ರಕಾರ, ವಧು ಸ್ವಲ್ಪ ಮಾನಸಿಕ ಅಸ್ವಸ್ಥಳಂತೆ ಮಾಡುತ್ತಿದ್ದಳಂತೆ. ತಾಳಿ ಕಟ್ಟುವಾಗ, ಕೈ ದೇಹಕ್ಕೆ ತಾಗುವುದು ಕಾಮನ್. ಆದರೆ, ಅದೇ ವಿಷಯ ಹಿಡಿದು ವಧು ರಂಪ ಮಾಡಿದ್ದಾಳೆ. ಯಾರು ಹೇಳಿದ್ದನ್ನೂ ಕೇಳುತ್ತಿರಲಿಲ್ಲ. ಹೀಗಾಗಿ ಸ್ವಲ್ಪ ಮಾನಸಿಕ ಸ್ಥಿಮಿತ ಕಳಕೊಂಡ ರೀತಿ ವರ್ತಿಸುತ್ತಿದ್ದಳು. ಹೀಗಾಗಿ ವರನ ಕಡೆಯವರು ಕೂಡ ಇದನ್ನು ಮದುವೆಯಾದರೆ ನಮಗೆ ಉಳಿಗಾಲ ಇಲ್ಲ ಎಂದು ಸಂಬಂಧ ಕಡಿದುಕೊಳ್ಳಲು ಒಪ್ಪಿದ್ದರಂತೆ. ವರನ ಕಡೆಯವರ ಪ್ರಕಾರ, ನಿಶ್ಚಯ ಆದಂದಿನಿಂದಲೂ ಯುವತಿ ಅದೇ ರೀತಿ ವರ್ತಿಸುತ್ತಿದ್ದಳಂತೆ. ಹೀಗಾಗಿ ಎರಡೂ ಕಡೆಯವರನ್ನು ಠಾಣೆಗೆ ಕರೆಸಿ, ಮದುವೆಯ ಖರ್ಚನ್ನು ಸಮಾನವಾಗಿ ಭರಿಸಲು ಹೇಳಿದ್ದು, ಪ್ರಕರಣ ದಾಖಲಿಸದೆ ಬಿಟ್ಟು ಕಳುಹಿಸಿದ್ದಾರೆ.
In a bizarre incident reported from Naravi in the taluk on May 25, a bride threw the garland and refused to get married to the groom just because the groom’s hand brushed her neck during the traditional garland exchange.The wedding of the girl from Moodukonaje and boy from Naravi was fixed and was to be held on May 25 at a marriage hall in Naravi.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm