ಬ್ರೇಕಿಂಗ್ ನ್ಯೂಸ್
29-05-22 03:11 pm Mangalore Correspondent ಕರಾವಳಿ
ಮಂಗಳೂರು, ಮೇ 29: ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಕಾರ್ಯಕರ್ತರು ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿರುವ ಪ್ರಕರಣದ ಬಗ್ಗೆ ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೈಕ್, ಸ್ಕೂಟರ್ ಮತ್ತು ಕಾರಿನಲ್ಲಿ ತೆರಳುತ್ತಿದ್ದ ಯುವಕರು ಪೊಲೀಸರ ವಿರುದ್ಧ ಅವಾಚ್ಯವಾಗಿ ನಿಂದಿಸುತ್ತಾ ಘೋಷಣೆ ಹಾಕಿದ್ದಲ್ಲದೆ, ಅದರ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಈ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಎಎಸ್ಐ ಚಂದ್ರಶೇಖರ ಬಿ. ದೂರು ನೀಡಿದ್ದು, ಆರು ಮಂದಿಯ ವಿರುದ್ಧ ಸೆಕ್ಷನ್ 143, 353, 504 ಮತ್ತು 149 ಅಡಿ ಪ್ರಕರಣ ದಾಖಲಿಸಲಾಗಿದೆ.
ಎಸ್ಡಿಪಿಐ ವತಿಯಿಂದ ಆಯೋಜಿಸಿದ್ದ ಜನಾಧಿಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೊಡಕ್ಕಲ್ ಕಣ್ಣೂರು ಚೆಕ್ ಪೋಸ್ಟ್ ನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಡ್ ಕಾನ್ಸ್ ಟೇಬಲ್ ಗಳಾದ ಪುಟ್ಟರಾಮ, ರವಿಕುಮಾರ್, ಪೊಲೀಸ್ ಪೇದೆಗಳಾದ ಜಗದೀಶ್ ಮೆಟ್ಟಗುಡ್ಡ ಮತ್ತು ಸಂಗನ ಗೌಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ, ಪಡೀಲ್ ಕಡೆಯಿಂದ ಕೆಟಿಎಂ ಬೈಕ್, ಸ್ಕೂಟರ್ ಹಾಗೂ ಕಾರಿನಲ್ಲಿ ಯುವಕರು ಆಗಮಿಸಿದ್ದು ರಸ್ತೆಯಲ್ಲಿ ಅಡ್ಡಲಾಗಿ ನಿಂತು ಕರ್ತವ್ಯದಲ್ಲಿದ್ದ ಸಿಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಬ್ಯಾರಿ ಭಾಷೆಯಲ್ಲಿ ಪೋಡೆ ಪುಲ್ಲೆ ಪೋಲೀಸೆ, ನಾಯಿಂಡೆ ಮೋನೆ ಪೊಲೀಸೆ ಎಂದು ಘೋಷಣೆ ಕೂಗುತ್ತಾ ತಿ ವೇಗವಾಗಿ ವಾಹನಗಳನ್ನು ಚಲಾಯಿಸಿ ಕರ್ತವ್ಯದಲ್ಲಿದ್ದ ಪೇದೆ ಸಂಗನಗೌಡ ಮೈಮೇಲೆ ಹಾಯಿಸುವಂತೆ ಬಂದಿದ್ದು ಈ ವೇಳೆ ಸಂಗನಗೌಡ ತಪ್ಪಿಸಿಕೊಂಡಿದ್ದಾರೆ. ಕರ್ತವ್ಯ ನಿರತ ಪೊಲೀಸರಿಗೆ ಅಡ್ಡಿಪಡಿಸಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದ ಬಗ್ಗೆ ದೂರು ದಾಖಲಿಸಲಾಗಿದೆ. ಆರು ಮಂದಿಯನ್ನು ಅಪರಿಚಿತರು ಎಂದು ತೋರಿಸಲಾಗಿದ್ದು, ವಿಡಿಯೋ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mangalore Sdpi members abusing police video during a SDPI program at Kannur goes viral, Police have booked six members of SDPI under section 143, 353 and 504.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm