ಬ್ರೇಕಿಂಗ್ ನ್ಯೂಸ್
29-05-22 03:11 pm Mangalore Correspondent ಕರಾವಳಿ
ಮಂಗಳೂರು, ಮೇ 29: ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಕಾರ್ಯಕರ್ತರು ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿರುವ ಪ್ರಕರಣದ ಬಗ್ಗೆ ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೈಕ್, ಸ್ಕೂಟರ್ ಮತ್ತು ಕಾರಿನಲ್ಲಿ ತೆರಳುತ್ತಿದ್ದ ಯುವಕರು ಪೊಲೀಸರ ವಿರುದ್ಧ ಅವಾಚ್ಯವಾಗಿ ನಿಂದಿಸುತ್ತಾ ಘೋಷಣೆ ಹಾಕಿದ್ದಲ್ಲದೆ, ಅದರ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಈ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಎಎಸ್ಐ ಚಂದ್ರಶೇಖರ ಬಿ. ದೂರು ನೀಡಿದ್ದು, ಆರು ಮಂದಿಯ ವಿರುದ್ಧ ಸೆಕ್ಷನ್ 143, 353, 504 ಮತ್ತು 149 ಅಡಿ ಪ್ರಕರಣ ದಾಖಲಿಸಲಾಗಿದೆ.
ಎಸ್ಡಿಪಿಐ ವತಿಯಿಂದ ಆಯೋಜಿಸಿದ್ದ ಜನಾಧಿಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೊಡಕ್ಕಲ್ ಕಣ್ಣೂರು ಚೆಕ್ ಪೋಸ್ಟ್ ನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಡ್ ಕಾನ್ಸ್ ಟೇಬಲ್ ಗಳಾದ ಪುಟ್ಟರಾಮ, ರವಿಕುಮಾರ್, ಪೊಲೀಸ್ ಪೇದೆಗಳಾದ ಜಗದೀಶ್ ಮೆಟ್ಟಗುಡ್ಡ ಮತ್ತು ಸಂಗನ ಗೌಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ, ಪಡೀಲ್ ಕಡೆಯಿಂದ ಕೆಟಿಎಂ ಬೈಕ್, ಸ್ಕೂಟರ್ ಹಾಗೂ ಕಾರಿನಲ್ಲಿ ಯುವಕರು ಆಗಮಿಸಿದ್ದು ರಸ್ತೆಯಲ್ಲಿ ಅಡ್ಡಲಾಗಿ ನಿಂತು ಕರ್ತವ್ಯದಲ್ಲಿದ್ದ ಸಿಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಬ್ಯಾರಿ ಭಾಷೆಯಲ್ಲಿ ಪೋಡೆ ಪುಲ್ಲೆ ಪೋಲೀಸೆ, ನಾಯಿಂಡೆ ಮೋನೆ ಪೊಲೀಸೆ ಎಂದು ಘೋಷಣೆ ಕೂಗುತ್ತಾ ತಿ ವೇಗವಾಗಿ ವಾಹನಗಳನ್ನು ಚಲಾಯಿಸಿ ಕರ್ತವ್ಯದಲ್ಲಿದ್ದ ಪೇದೆ ಸಂಗನಗೌಡ ಮೈಮೇಲೆ ಹಾಯಿಸುವಂತೆ ಬಂದಿದ್ದು ಈ ವೇಳೆ ಸಂಗನಗೌಡ ತಪ್ಪಿಸಿಕೊಂಡಿದ್ದಾರೆ. ಕರ್ತವ್ಯ ನಿರತ ಪೊಲೀಸರಿಗೆ ಅಡ್ಡಿಪಡಿಸಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದ ಬಗ್ಗೆ ದೂರು ದಾಖಲಿಸಲಾಗಿದೆ. ಆರು ಮಂದಿಯನ್ನು ಅಪರಿಚಿತರು ಎಂದು ತೋರಿಸಲಾಗಿದ್ದು, ವಿಡಿಯೋ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mangalore Sdpi members abusing police video during a SDPI program at Kannur goes viral, Police have booked six members of SDPI under section 143, 353 and 504.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm