ಬ್ರೇಕಿಂಗ್ ನ್ಯೂಸ್
29-05-22 03:11 pm Mangalore Correspondent ಕರಾವಳಿ
ಮಂಗಳೂರು, ಮೇ 29: ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಕಾರ್ಯಕರ್ತರು ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿರುವ ಪ್ರಕರಣದ ಬಗ್ಗೆ ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೈಕ್, ಸ್ಕೂಟರ್ ಮತ್ತು ಕಾರಿನಲ್ಲಿ ತೆರಳುತ್ತಿದ್ದ ಯುವಕರು ಪೊಲೀಸರ ವಿರುದ್ಧ ಅವಾಚ್ಯವಾಗಿ ನಿಂದಿಸುತ್ತಾ ಘೋಷಣೆ ಹಾಕಿದ್ದಲ್ಲದೆ, ಅದರ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಈ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಎಎಸ್ಐ ಚಂದ್ರಶೇಖರ ಬಿ. ದೂರು ನೀಡಿದ್ದು, ಆರು ಮಂದಿಯ ವಿರುದ್ಧ ಸೆಕ್ಷನ್ 143, 353, 504 ಮತ್ತು 149 ಅಡಿ ಪ್ರಕರಣ ದಾಖಲಿಸಲಾಗಿದೆ.
ಎಸ್ಡಿಪಿಐ ವತಿಯಿಂದ ಆಯೋಜಿಸಿದ್ದ ಜನಾಧಿಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೊಡಕ್ಕಲ್ ಕಣ್ಣೂರು ಚೆಕ್ ಪೋಸ್ಟ್ ನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಡ್ ಕಾನ್ಸ್ ಟೇಬಲ್ ಗಳಾದ ಪುಟ್ಟರಾಮ, ರವಿಕುಮಾರ್, ಪೊಲೀಸ್ ಪೇದೆಗಳಾದ ಜಗದೀಶ್ ಮೆಟ್ಟಗುಡ್ಡ ಮತ್ತು ಸಂಗನ ಗೌಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ, ಪಡೀಲ್ ಕಡೆಯಿಂದ ಕೆಟಿಎಂ ಬೈಕ್, ಸ್ಕೂಟರ್ ಹಾಗೂ ಕಾರಿನಲ್ಲಿ ಯುವಕರು ಆಗಮಿಸಿದ್ದು ರಸ್ತೆಯಲ್ಲಿ ಅಡ್ಡಲಾಗಿ ನಿಂತು ಕರ್ತವ್ಯದಲ್ಲಿದ್ದ ಸಿಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಬ್ಯಾರಿ ಭಾಷೆಯಲ್ಲಿ ಪೋಡೆ ಪುಲ್ಲೆ ಪೋಲೀಸೆ, ನಾಯಿಂಡೆ ಮೋನೆ ಪೊಲೀಸೆ ಎಂದು ಘೋಷಣೆ ಕೂಗುತ್ತಾ ತಿ ವೇಗವಾಗಿ ವಾಹನಗಳನ್ನು ಚಲಾಯಿಸಿ ಕರ್ತವ್ಯದಲ್ಲಿದ್ದ ಪೇದೆ ಸಂಗನಗೌಡ ಮೈಮೇಲೆ ಹಾಯಿಸುವಂತೆ ಬಂದಿದ್ದು ಈ ವೇಳೆ ಸಂಗನಗೌಡ ತಪ್ಪಿಸಿಕೊಂಡಿದ್ದಾರೆ. ಕರ್ತವ್ಯ ನಿರತ ಪೊಲೀಸರಿಗೆ ಅಡ್ಡಿಪಡಿಸಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದ ಬಗ್ಗೆ ದೂರು ದಾಖಲಿಸಲಾಗಿದೆ. ಆರು ಮಂದಿಯನ್ನು ಅಪರಿಚಿತರು ಎಂದು ತೋರಿಸಲಾಗಿದ್ದು, ವಿಡಿಯೋ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mangalore Sdpi members abusing police video during a SDPI program at Kannur goes viral, Police have booked six members of SDPI under section 143, 353 and 504.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm