ಬ್ರೇಕಿಂಗ್ ನ್ಯೂಸ್
30-05-22 12:29 pm Mangalore Correspondent ಕರಾವಳಿ
ಮಂಗಳೂರು, ಮೇ 30: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಇಂದು ಕೂಡ ಹೈಡ್ರಾಮಾ ನಡೆದಿದ್ದು ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದ 16 ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದಾರೆ.
ವಿವಿ ಪದವಿ ಕಾಲೇಜಿನಲ್ಲಿ ಸೋಮವಾರದಿಂದ ಹಿಜಾಬ್ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಿಡಿಸಿ ಸಭೆಯಲ್ಲಿ ನಿರ್ಣಯ ಆಗಿರುವುದರಿಂದ ಪ್ರಾಂಶುಪಾಲೆ ಅನಸೂಯಾ ರೈ ಇಂದು ಖಡಕ್ಕಾಗಿ ನಿಲುವು ತೆಗೆದುಕೊಂಡಿದ್ದಾರೆ. ಬುರ್ಖಾ, ಹಿಜಾಬ್ ಹಾಕ್ಕೊಂಡು ಬಂದ ವಿದ್ಯಾರ್ಥಿನಿಯರು ಕಾಲೇಜು ಆವರಣಕ್ಕೆ ಬಂದು ಅಲ್ಲಿಂದ ಹಿಜಾಬ್ ತೆಗೆದಿಟ್ಟು ತರಗತಿಗೆ ತೆರಳಬೇಕೆಂದು ಸೂಚನೆ ನೀಡಿದ್ದರು. ಅದರಂತೆ, ಇಂದು ಬೆಳಗ್ಗೆ ಕಾಲೇಜು ಗೇಟ್ ನಲ್ಲಿಯೇ ನಿಂತಿದ್ದ ಸೆಕ್ಯುರಿಟಿ ಗಾರ್ಡ್ ವಿದ್ಯಾರ್ಥಿಗಳನ್ನು ಪಾಸ್ ಪರಿಶೀಲಿಸಿ ಒಳಬಿಡುತ್ತಿದ್ದರು. ಆದರೆ ಮೊನ್ನೆ ತರಗತಿ ಬಹಿಷ್ಕರಿಸಿ ಹೊರನಡೆದಿದ್ದ 12 ಮಂದಿ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತರಗತಿಗೆ ಹೋಗದೆ ಹೊರಗಡೆ ನಿಂತಿದ್ದಾರೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಬರುತ್ತಾರೆಂಬ ನಿರೀಕ್ಷೆ ಹುಸಿಯಾಗುತ್ತಲೇ ಅಲ್ಲಿಂದ ನಡೆದುಕೊಂಡು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದಾರೆ.



ಆದರೆ ಇಂದು ಮತ್ತಿಬ್ಬರು ಈ ತಂಡಕ್ಕೆ ಸೇರಿಕೊಂಡಿದ್ದು ಮಾಧ್ಯಮಗಳ ಕ್ಯಾಮರಾ ಎದುರಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ನಡೆದು ತೆರಳಿದ್ದಾರೆ. ಕಚೇರಿಯಲ್ಲಿ ಡೀಸಿ ಇರದ ಕಾರಣ ಅಲ್ಲಿಯೇ ಹೊರಗಡೆ ಕಾದು ಕುಳಿತಿದ್ದಾರೆ. ಜಿಲ್ಲಾಧಿಕಾರಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಪ್ರತ್ಯೇಕ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರಣ 12 ಗಂಟೆ ಸುಮಾರಿಗೆ ಡೀಸಿ ಕಚೇರಿಗೆ ಆಗಮಿಸಿದ್ದಾರೆ. ಸೇರಿದ್ದ 16 ವಿದ್ಯಾರ್ಥಿನಿಯರ ಜೊತೆಗೆ ಜಿಲ್ಲಾಧಿಕಾರಿ ಮಾತುಕತೆ ನಡೆಸಿದ್ದು ಮನವೊಲಿಕೆಗೆ ಪ್ರಯತ್ನ ಪಟ್ಟಿದ್ದಾರೆ. ವಿದ್ಯಾರ್ಥಿನಿಯರು ಯಾವುದೇ ಮೀಡಿಯಾಕ್ಕೂ ಪ್ರತಿಕ್ರಿಯೆ ಕೊಡಲು ನಿರಾಕರಿಸಿದ್ದಾರೆ. ಅಲ್ಲದೆ, ಟಿವಿ ಕ್ಯಾಮರಾಗಳು ಜೊತೆಗೆ ಬಂದಿದ್ದಕ್ಕೆ ನಿಮಗ್ಯಾರೂ ಅಕ್ಕ ತಂಗಿಯರಿಲ್ಲವೇ ಎಂದು ಟೀಕೆಯನ್ನೂ ಮಾಡಿದ್ದಾರೆ.




ಹೈಕೋರ್ಟ್ ಹಿಜಾಬ್ ಕುರಿತ ತೀರ್ಪಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ತರಗತಿಗಳಿಗೆ ಮಾತ್ರ ಸಮವಸ್ತ್ರ ಕಡ್ಡಾಯ ಎಂದು ಸೂಚಿಸಿದೆ. ಪದವಿ ಕಾಲೇಜಿನ ಬಗ್ಗೆ ಉಲ್ಲೇಖ ಇಲ್ಲ ಎನ್ನುವುದು ವಿದ್ಯಾರ್ಥಿನಿಯರ ವಾದ. ಹೀಗಾಗಿ ಸರಕಾರಿ ಪದವಿ ಕಾಲೇಜಿನಲ್ಲಿ ತಮಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ಆದರೆ ಯಾವುದೇ ಶಿಕ್ಷಣ ಸಂಸ್ಥೆಯಲ್ಲೂ ಕಾಲೇಜಿನ ಆಡಳಿತ ಸಮವಸ್ತ್ರ ಕಡ್ಡಾಯಗೊಳಿಸಿದ್ದರೆ ಅಲ್ಲಿಗೆ ಹಿಜಾಬ್ ತೀರ್ಪು ಅನ್ವಯ ಆಗುತ್ತದೆ ಎನ್ನುವುದು ಕಾಲೇಜು ಆಡಳಿತದ ನಿಲುವು. ಹೀಗಾಗಿ ಹಂಪನಕಟ್ಟೆ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಮೊದಲಿನಿಂದಲೂ ಇದೆ, ಹಿಜಾಬ್ ತೀರ್ಪು ಪಾಲನೆಯಾಗಬೇಕೆಂದು ಶಾಸಕರ ನೇತೃತ್ವದ ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯಿಸಿದೆ.
Hijab row, students with hijab on Monday we're again sent back from Mangalore university as they denied to remove Hijab to enter the classrooms, 16 students with Hijab have approached DC Dr Rajendra Kumar for help. A meeting is going on with the students now.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm