ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm