ಬ್ರೇಕಿಂಗ್ ನ್ಯೂಸ್
30-05-22 10:52 pm Mangalore Correspondent ಕರಾವಳಿ
ಬಂಟ್ವಾಳ, ಮೇ 30 : ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ನಪುಂಸಕರು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಕ್ಕೆ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ದೇಶವನ್ನು ಪೂಜೆ ಮಾಡುವವರು ನಪುಂಸಕರಾ ಎಂದು ಪ್ರಶ್ನಿಸಿದ್ದಾರೆ.
ಕಲ್ಕಡ್ಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಯ- ದ್ರಾವಿಡ ಎನ್ನುವುದು ಇಂಗ್ಲಿಷರು ಮಾಡಿದ ಸಂಸ್ಕೃತಿ. ಹೇಳಿ ಕೇಳಿ ಇವರು ಇಟಲಿಯಲ್ಲಿದ್ದ ಮಹಿಳೆಯ ಪಾದಪೂಜೆ ಮಾಡುತ್ತಾರಲ್ವಾ, ಅವರನ್ನು ಪೂಜೆ ಮಾಡುವವರು ನಪುಂಸಕರಾ? ದೇಶವನ್ನು ಪೂಜೆ ಮಾಡುವವರು ನಪುಂಸಕರಾ? ಎಂದು ಪ್ರಶ್ನಿಸಿದರು.
ಹಿಂದೊಮ್ಮೆ ಮುಸ್ಲಿಮರೇ ಇದ್ದ ವಿಮಾನ ದುರಂತ ಸಂಭವಿಸಿದ ಸಂದರ್ಭ ರಕ್ಷಣಾ ಕಾರ್ಯಕ್ಕೆ ತಕ್ಷಣ ಧಾವಿಸಿದ ಆರ್ಎಸ್ಎಸ್ ಕಾರ್ಯಕರ್ತರನ್ನು ಆಗಿನ ವಿಮಾನಯಾನ ಸಚಿವ ಸಿ.ಎಂ ಇಬ್ರಾಹಿಂ ಅವರೇ ಪ್ರಶಂಸಿಸಿದ್ದರು. ದಿನನಿತ್ಯ ಭಾರತ ಮಾತಾ ಕಿ ಜೈ ಎನ್ನುವವರು ಆರ್ಎಸ್ಎಸ್ನವರು. ಇಟಲಿಯಿಂದ ಬಂದವರಿಗೆ ಜೈಕಾರ ಹಾಕುವವರು ಅವರು. ದೇಶದ ವಿಭಜನೆ ಮಾಡಿದ್ದು ಯಾರು ಹೇಳಿ? ಆರ್ಎಸ್ಎಸ್ಸಾ?. ವಿಶ್ವ ಹಿಂದೂ ಪರಿಷತ್ತಾ? ಇದೇ ನೆಹರೂ, ಗಾಂಧಿ, ಮುಸ್ಲಿಂ ಲೀಗ್ ಮಾಡಿದ್ದಲ್ವಾ? ಎಂದು ಪ್ರಶ್ನಿಸಿದ ಡಾ. ಭಟ್, ಹೊರಗಿನಿಂದಷ್ಟೇ ಅಲ್ಲ, ಒಳಗಿನಿಂದಲೂ ಪಾಕಿಸ್ತಾನ ಜಿಂದಾಬಾದ್ ಎನ್ನುವುದಕ್ಕೆ ಕಾರಣ ಕಾಂಗ್ರೆಸ್ ಅಲ್ವಾ ಎಂದು ಪ್ರಶ್ನಿಸಿದರು.

ಪಠ್ಯಪುಸ್ತಕ ಬರಲಿ, ಆವಾಗ ಅದರಲ್ಲೇನಿದೆ ಅನ್ನೋದು ಗೊತ್ತಾಗುತ್ತದೆ. ಅದಕ್ಕೂ ಮೊದಲೇ ಪೂರ್ವಗ್ರಹ ಪೀಡಿತವಾಗಿ ಪಠ್ಯಪುಸ್ತಕ ಕುರಿತು ವಿವಾದ ಮಾಡುವುದು ಸರಿಯಲ್ಲ ಎಂದರು.
ತಲೆತಲಾಂತರದಿಂದ ಹಿಂದೂಗಳು ನಾವು. ಹಿಂದೂ ಧರ್ಮ ಎಲ್ಲರನ್ನೂ ಒಟ್ಟು ಸೇರಿಸಿ, ಎಲ್ಲರೊಂದಿಗೆ ಜೊತೆಯಲ್ಲಿ ಸಾಗುವ ಧರ್ಮ. ಈ ಧರ್ಮದ ಬಗ್ಗೆ ಹೇಳಿದರೂ ತಪ್ಪು ಎನ್ನಲಾಗುತ್ತಿದೆ. ಕ್ರಿಶ್ಚಿಯನ್ನರ ಬಗ್ಗೆ, ಔರಂಗಜೇಬರ ಬಗ್ಗೆ ಹೇಳಿದರೆ ತಪ್ಪಲ್ಲ. ಹೆಡಗೇವಾರ್ ಬರೆದದ್ದನ್ನು ಹೇಳಿದರೆ ತಪ್ಪು ಹೇಗಾಗುತ್ತದೆ ಎಂದು ಕೇಳಿದ ಡಾ. ಭಟ್ ಅವರು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಉತ್ತಮ ಕಾರ್ಯ ಮಾಡುತ್ತಿದೆ ಎಂದರು.
Mangalore Dr Kalladka Prabhakar Bhat lashes out at Siddaramaiah for his tweets.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm