ಬ್ರೇಕಿಂಗ್ ನ್ಯೂಸ್
30-05-22 10:52 pm Mangalore Correspondent ಕರಾವಳಿ
ಬಂಟ್ವಾಳ, ಮೇ 30 : ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ನಪುಂಸಕರು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಕ್ಕೆ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ದೇಶವನ್ನು ಪೂಜೆ ಮಾಡುವವರು ನಪುಂಸಕರಾ ಎಂದು ಪ್ರಶ್ನಿಸಿದ್ದಾರೆ.
ಕಲ್ಕಡ್ಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಯ- ದ್ರಾವಿಡ ಎನ್ನುವುದು ಇಂಗ್ಲಿಷರು ಮಾಡಿದ ಸಂಸ್ಕೃತಿ. ಹೇಳಿ ಕೇಳಿ ಇವರು ಇಟಲಿಯಲ್ಲಿದ್ದ ಮಹಿಳೆಯ ಪಾದಪೂಜೆ ಮಾಡುತ್ತಾರಲ್ವಾ, ಅವರನ್ನು ಪೂಜೆ ಮಾಡುವವರು ನಪುಂಸಕರಾ? ದೇಶವನ್ನು ಪೂಜೆ ಮಾಡುವವರು ನಪುಂಸಕರಾ? ಎಂದು ಪ್ರಶ್ನಿಸಿದರು.
ಹಿಂದೊಮ್ಮೆ ಮುಸ್ಲಿಮರೇ ಇದ್ದ ವಿಮಾನ ದುರಂತ ಸಂಭವಿಸಿದ ಸಂದರ್ಭ ರಕ್ಷಣಾ ಕಾರ್ಯಕ್ಕೆ ತಕ್ಷಣ ಧಾವಿಸಿದ ಆರ್ಎಸ್ಎಸ್ ಕಾರ್ಯಕರ್ತರನ್ನು ಆಗಿನ ವಿಮಾನಯಾನ ಸಚಿವ ಸಿ.ಎಂ ಇಬ್ರಾಹಿಂ ಅವರೇ ಪ್ರಶಂಸಿಸಿದ್ದರು. ದಿನನಿತ್ಯ ಭಾರತ ಮಾತಾ ಕಿ ಜೈ ಎನ್ನುವವರು ಆರ್ಎಸ್ಎಸ್ನವರು. ಇಟಲಿಯಿಂದ ಬಂದವರಿಗೆ ಜೈಕಾರ ಹಾಕುವವರು ಅವರು. ದೇಶದ ವಿಭಜನೆ ಮಾಡಿದ್ದು ಯಾರು ಹೇಳಿ? ಆರ್ಎಸ್ಎಸ್ಸಾ?. ವಿಶ್ವ ಹಿಂದೂ ಪರಿಷತ್ತಾ? ಇದೇ ನೆಹರೂ, ಗಾಂಧಿ, ಮುಸ್ಲಿಂ ಲೀಗ್ ಮಾಡಿದ್ದಲ್ವಾ? ಎಂದು ಪ್ರಶ್ನಿಸಿದ ಡಾ. ಭಟ್, ಹೊರಗಿನಿಂದಷ್ಟೇ ಅಲ್ಲ, ಒಳಗಿನಿಂದಲೂ ಪಾಕಿಸ್ತಾನ ಜಿಂದಾಬಾದ್ ಎನ್ನುವುದಕ್ಕೆ ಕಾರಣ ಕಾಂಗ್ರೆಸ್ ಅಲ್ವಾ ಎಂದು ಪ್ರಶ್ನಿಸಿದರು.

ಪಠ್ಯಪುಸ್ತಕ ಬರಲಿ, ಆವಾಗ ಅದರಲ್ಲೇನಿದೆ ಅನ್ನೋದು ಗೊತ್ತಾಗುತ್ತದೆ. ಅದಕ್ಕೂ ಮೊದಲೇ ಪೂರ್ವಗ್ರಹ ಪೀಡಿತವಾಗಿ ಪಠ್ಯಪುಸ್ತಕ ಕುರಿತು ವಿವಾದ ಮಾಡುವುದು ಸರಿಯಲ್ಲ ಎಂದರು.
ತಲೆತಲಾಂತರದಿಂದ ಹಿಂದೂಗಳು ನಾವು. ಹಿಂದೂ ಧರ್ಮ ಎಲ್ಲರನ್ನೂ ಒಟ್ಟು ಸೇರಿಸಿ, ಎಲ್ಲರೊಂದಿಗೆ ಜೊತೆಯಲ್ಲಿ ಸಾಗುವ ಧರ್ಮ. ಈ ಧರ್ಮದ ಬಗ್ಗೆ ಹೇಳಿದರೂ ತಪ್ಪು ಎನ್ನಲಾಗುತ್ತಿದೆ. ಕ್ರಿಶ್ಚಿಯನ್ನರ ಬಗ್ಗೆ, ಔರಂಗಜೇಬರ ಬಗ್ಗೆ ಹೇಳಿದರೆ ತಪ್ಪಲ್ಲ. ಹೆಡಗೇವಾರ್ ಬರೆದದ್ದನ್ನು ಹೇಳಿದರೆ ತಪ್ಪು ಹೇಗಾಗುತ್ತದೆ ಎಂದು ಕೇಳಿದ ಡಾ. ಭಟ್ ಅವರು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಉತ್ತಮ ಕಾರ್ಯ ಮಾಡುತ್ತಿದೆ ಎಂದರು.
Mangalore Dr Kalladka Prabhakar Bhat lashes out at Siddaramaiah for his tweets.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm