ಬ್ರೇಕಿಂಗ್ ನ್ಯೂಸ್
30-05-22 10:52 pm Mangalore Correspondent ಕರಾವಳಿ
ಬಂಟ್ವಾಳ, ಮೇ 30 : ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ನಪುಂಸಕರು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಕ್ಕೆ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ದೇಶವನ್ನು ಪೂಜೆ ಮಾಡುವವರು ನಪುಂಸಕರಾ ಎಂದು ಪ್ರಶ್ನಿಸಿದ್ದಾರೆ.
ಕಲ್ಕಡ್ಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಯ- ದ್ರಾವಿಡ ಎನ್ನುವುದು ಇಂಗ್ಲಿಷರು ಮಾಡಿದ ಸಂಸ್ಕೃತಿ. ಹೇಳಿ ಕೇಳಿ ಇವರು ಇಟಲಿಯಲ್ಲಿದ್ದ ಮಹಿಳೆಯ ಪಾದಪೂಜೆ ಮಾಡುತ್ತಾರಲ್ವಾ, ಅವರನ್ನು ಪೂಜೆ ಮಾಡುವವರು ನಪುಂಸಕರಾ? ದೇಶವನ್ನು ಪೂಜೆ ಮಾಡುವವರು ನಪುಂಸಕರಾ? ಎಂದು ಪ್ರಶ್ನಿಸಿದರು.
ಹಿಂದೊಮ್ಮೆ ಮುಸ್ಲಿಮರೇ ಇದ್ದ ವಿಮಾನ ದುರಂತ ಸಂಭವಿಸಿದ ಸಂದರ್ಭ ರಕ್ಷಣಾ ಕಾರ್ಯಕ್ಕೆ ತಕ್ಷಣ ಧಾವಿಸಿದ ಆರ್ಎಸ್ಎಸ್ ಕಾರ್ಯಕರ್ತರನ್ನು ಆಗಿನ ವಿಮಾನಯಾನ ಸಚಿವ ಸಿ.ಎಂ ಇಬ್ರಾಹಿಂ ಅವರೇ ಪ್ರಶಂಸಿಸಿದ್ದರು. ದಿನನಿತ್ಯ ಭಾರತ ಮಾತಾ ಕಿ ಜೈ ಎನ್ನುವವರು ಆರ್ಎಸ್ಎಸ್ನವರು. ಇಟಲಿಯಿಂದ ಬಂದವರಿಗೆ ಜೈಕಾರ ಹಾಕುವವರು ಅವರು. ದೇಶದ ವಿಭಜನೆ ಮಾಡಿದ್ದು ಯಾರು ಹೇಳಿ? ಆರ್ಎಸ್ಎಸ್ಸಾ?. ವಿಶ್ವ ಹಿಂದೂ ಪರಿಷತ್ತಾ? ಇದೇ ನೆಹರೂ, ಗಾಂಧಿ, ಮುಸ್ಲಿಂ ಲೀಗ್ ಮಾಡಿದ್ದಲ್ವಾ? ಎಂದು ಪ್ರಶ್ನಿಸಿದ ಡಾ. ಭಟ್, ಹೊರಗಿನಿಂದಷ್ಟೇ ಅಲ್ಲ, ಒಳಗಿನಿಂದಲೂ ಪಾಕಿಸ್ತಾನ ಜಿಂದಾಬಾದ್ ಎನ್ನುವುದಕ್ಕೆ ಕಾರಣ ಕಾಂಗ್ರೆಸ್ ಅಲ್ವಾ ಎಂದು ಪ್ರಶ್ನಿಸಿದರು.

ಪಠ್ಯಪುಸ್ತಕ ಬರಲಿ, ಆವಾಗ ಅದರಲ್ಲೇನಿದೆ ಅನ್ನೋದು ಗೊತ್ತಾಗುತ್ತದೆ. ಅದಕ್ಕೂ ಮೊದಲೇ ಪೂರ್ವಗ್ರಹ ಪೀಡಿತವಾಗಿ ಪಠ್ಯಪುಸ್ತಕ ಕುರಿತು ವಿವಾದ ಮಾಡುವುದು ಸರಿಯಲ್ಲ ಎಂದರು.
ತಲೆತಲಾಂತರದಿಂದ ಹಿಂದೂಗಳು ನಾವು. ಹಿಂದೂ ಧರ್ಮ ಎಲ್ಲರನ್ನೂ ಒಟ್ಟು ಸೇರಿಸಿ, ಎಲ್ಲರೊಂದಿಗೆ ಜೊತೆಯಲ್ಲಿ ಸಾಗುವ ಧರ್ಮ. ಈ ಧರ್ಮದ ಬಗ್ಗೆ ಹೇಳಿದರೂ ತಪ್ಪು ಎನ್ನಲಾಗುತ್ತಿದೆ. ಕ್ರಿಶ್ಚಿಯನ್ನರ ಬಗ್ಗೆ, ಔರಂಗಜೇಬರ ಬಗ್ಗೆ ಹೇಳಿದರೆ ತಪ್ಪಲ್ಲ. ಹೆಡಗೇವಾರ್ ಬರೆದದ್ದನ್ನು ಹೇಳಿದರೆ ತಪ್ಪು ಹೇಗಾಗುತ್ತದೆ ಎಂದು ಕೇಳಿದ ಡಾ. ಭಟ್ ಅವರು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಉತ್ತಮ ಕಾರ್ಯ ಮಾಡುತ್ತಿದೆ ಎಂದರು.
Mangalore Dr Kalladka Prabhakar Bhat lashes out at Siddaramaiah for his tweets.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm