ಬ್ರೇಕಿಂಗ್ ನ್ಯೂಸ್
31-05-22 10:27 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಉಳ್ಳಾಲದ ಹೆಬ್ಬಾಗಿಲು ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ನಲ್ಲಿ 110 ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣವಾಗಲಿದ್ದು, ಉಳ್ಳಾಲವನ್ನ ಪಾಕಿಸ್ತಾನ ಎಂದು ಮೂದಲಿಸಿದವರಿಗೆ ಉಳ್ಳಾಲದವರು ದೇಶಭಕ್ತರೆಂಬ ಸ್ಪಷ್ಟ ಸಂದೇಶ ರವಾನಿಸಲಾಗುವುದು ಎಂದು ವಿದಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಟಾಂಗ್ ನೀಡಿದ್ದಾರೆ.
ರಾಜ್ಯ ಸರಕಾರದ ವಿಶೇಷ ಅನುದಾನದಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ನಲ್ಲಿ ನಿರ್ಮಾಣಗೊಳ್ಳಲಿರುವ 110 ಅಡಿ ಎತ್ತರದ ಧ್ವಜ ಸ್ತಂಭಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ತಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಳಗಾವಿ ಸಹಿತ ಇತರ ಜಿಲ್ಲೆಗಳಿಗೆ ಸಂಚರಿಸುವಾಗ ಅಲ್ಲಿನ ಎತ್ತರದ ಧ್ವಜ ಸ್ತಂಭಗಳನ್ನ ಕಂಡು ಮಂಗಳೂರು ಕ್ಷೇತ್ರದಲ್ಲೂ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಯೋಜನೆ ಹಾಕಿದ್ದೆ. ಇದೀಗ ಸರಕಾರದಿಂದ ಧ್ವಜ ಸ್ತಂಭ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಓವರ್ ಬ್ರಿಡ್ಜ್ ಜಂಕ್ಷನಲ್ಲಿ ಶೀಘ್ರವೇ 110 ಅಡಿ ಎತ್ತರದ ಸ್ತಂಭವು ತಲೆ ಎತ್ತಲಿದೆ ಎಂದರು.


ಇದಲ್ಲದೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಕೊಣಾಜೆ ತೆರಳುವ ರಸ್ತೆಯ ಅಂಚಿನ ಶಾಸಕರ ಕಚೇರಿ ಬಳಿಯೂ ರಸ್ತೆ ಅಗಲೀಕರಣ ಕಾಮಗಾರಿಯ ನಂತರ 110 ಅಡಿ ಎತ್ತರದ ಧ್ವಜ ಸ್ತಂಭ ನಿರ್ಮಾಣವಾಗಲಿದೆ ಎಂದರು.

ಓವರ್ ಬ್ರಿಡ್ಜ್ ಜಂಕ್ಷನಲ್ಲಿ ಧ್ವಜ ಸ್ತಂಭ ನಿರ್ಮಿಸಲು ಮೊದಲಿಗೆ ರಸ್ತೆ ಇಕ್ಕಟ್ಟಿನ ಸಮಸ್ಯೆ ಎದುರಾಗಿತ್ತು. ಇದೀಗ ಪಿಡಬ್ಲ್ಯೂಡಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಒಪ್ಪಿಗೆ ಪಡೆದು ಕಾಮಗಾರಿಯನ್ನ ಕೈಗೆತ್ತಿರುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಬಿಟ್ಟರೆ ಉಳ್ಳಾಲದಲ್ಲಿ ಅತೀ ಎತ್ತರದ ಧ್ವಜ ಸ್ತಂಭ ನಿರ್ಮಾಣಗೊಂಡು ಪ್ರವಾಸಿಗರ ಆಕರ್ಷಣೆ ಕೇಂದ್ರವಾಗುವುದು. ಇದಲ್ಲದೆ ಉಳ್ಳಾಲವನ್ನ ಹಾಗೆ, ಹೀಗೆ ಎಂದವರಿಗೂ ಉಳ್ಳಾಲದವರು ಅಪ್ರತಿಮ ದೇಶ ಭಕ್ತರೆಂಬ ಸ್ಪಷ್ಟ ಸಂದೇಶ ರವಾನೆಯಾಗುತ್ತದೆ ಎಂದು ಖಾದರ್ ಹೇಳಿದರು.
Mangalore 110 feet flag pole to get ready at Ullal, Khader slams those who called ullal Mini Pakisthan during the event.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm