ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am