ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm