ಬ್ರೇಕಿಂಗ್ ನ್ಯೂಸ್
01-06-22 10:40 pm Mangalore Correspondent ಕರಾವಳಿ
ಕಾರ್ಕಳ, ಜೂನ್ 1 : ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಗ್ರೀನ್ ಪವರ್ ಆಧರಿತ ಕೈಗಾರಿಕಾ ಹಬ್ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
108 ಕೋಟಿ ರೂ. ವೆಚ್ಚದಲ್ಲಿ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಏತ ನೀರಾವರಿ ಯೋಜನೆಯನ್ನು ಬುಧವಾರ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು.
ಮಂಗಳೂರಿನಲ್ಲಿ ವಿದೇಶಕ್ಕೆ ರಫ್ತು ಮಾಡುವ ಗುಣಮಟ್ಟದ ಪೀಠೋಪಕರಣಗಳ ನಿರ್ಮಾಣಕ್ಕೆ ಫರ್ನಿಚರ್ ಕ್ಲಸ್ಟರ್ ಮಾಡಲಾಗುವುದು. ಕಾರ್ಕಳದಲ್ಲಿ ಶಿಲ್ಪ ಕಲೆ, ಮರದ ಕೆತ್ತನೆ ಕ್ಲಸ್ಟರಿಗೆ ಜಾಗ ನೀಡಿದರೆ ತೆರಿಗೆ ವಿನಾಯಿತಿ ನೀಡಲಾಗುವುದು. ಮಂಗಳೂರು, ಕಾರವಾರ ಬಂದರು ವಿಸ್ತರಣೆ ಜತೆಗೆ ಎಂಟು ಹೊಸ ಬಂದರು ನಿರ್ಮಾಣ ಕಾರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಬೀಚ್ ಟೂರಿಸಂ, ಧಾರ್ಮಿಕ ಟೂರಿಸಂಗೆ ಒತ್ತು ನೀಡಲಿದ್ದು, ಕಾರ್ಕಳದಲ್ಲಿ ಜವಳಿ ಪಾರ್ಕ್ ಶೀಘ್ರ ಆರಂಭವಾಗಲಿದೆ. ರೈತ ವಿದ್ಯಾ ನಿಧಿಯಡಿ 8 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗಿದೆ. ಎಣ್ಣೆಹೊಳೆ ಏತ ನೀರಾವರಿ ಹೆಚ್ಚುವರಿ ಯೋಜನೆಗೆ 43 ಕೋಟಿ ರೂ. ಮಂಜೂರು ಮಾಡಲಾಗುವುದು ಎಂದರು.

ಸುನಿಲ್ ಎಂದರೆ ಶಕ್ತಿ, ಇಂಧನ
ರಾಜ್ಯದಲ್ಲಿ ಈಗ ಎಲ್ಲೆಲ್ಲೂ ಸುನಿಲ್ ಹೆಸರು ಕೇಳುತ್ತಿದ್ದು, ಸುನಿಲ್ ಎಂದರೆ ಸ್ಛೂರ್ತಿ, ಶಕ್ತಿ, ಇಂಧನ. ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ಮೂಲಕ ಕಟ್ಟಕಡೆಯ ಬಡವರಿಗೂ ಮೂಲಭೂತ ಸೌಲಭ್ಯ ಒದಗಿಸಿದ ಹೆಮ್ಮೆ ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ 9,500 ಬಡವರ ಮನೆಗಳಿಗೆ 12 ಕೋಟಿ ರೂ. ವೆಚ್ಚದಲ್ಲಿ ಸಚಿವ ಸುನಿಲ್ ಬೆಳಕು ಒದಗಿಸಿದ್ದಾರೆ ಎಂದು ರಾಜ್ಯ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶ್ಲಾಘಿಸಿದರು.

ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಎಣ್ಣೆಹೊಳೆ ಏತ ನೀರಾವರಿ ಯೋಜನೆಯಡಿ 9 ಹಳ್ಳಿಗಳ 4,500 ಎಕರೆಗೆ ನೀರಾವರಿ, 2 ಕೆರೆ, 48 ಚೆಕ್ ಡ್ಯಾಂ ತುಂಬಲಿದೆ ಎಂದು ಹೇಳಿದರು.
ರಾಜ್ಯ ಸರಕಾರ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಇದೇ ಸಂದರ್ಭದಲ್ಲಿ 10 ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಕ್ಕುಪತ್ರ ವಿತರಿಸಿದರು.
An international level furniture cluster that would provide ample employment opportunities for the youth will come up in Mangaluru. Work on the project will start this year itself,” said the Chief Minister of Karnataka, Basavaraj Bommai.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm