ಬ್ರೇಕಿಂಗ್ ನ್ಯೂಸ್
01-06-22 10:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ಪೊಲೀಸರಿಗೆ ನಿಂದನೆ ವಿಡಿಯೋ ಪ್ರಕರಣದಲ್ಲಿ ಕೆಲವೇ ಜನರು ಮಾಡಿದ ತಪ್ಪಿಗೆ ಹಲವು ಅಮಾಯಕರನ್ನು ಬಂಧಿಸಲಾಗುತ್ತಿದೆ. ಸಮಾವೇಶದಲ್ಲಿ ಭಾಗವಹಿಸದೇ ಇರುವವರ ಬಂಧನವೂ ಆಗಿದೆ. ಇದರಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರೂ ಸೇರಿದ್ದಾರೆ. ಬೆಂಗಳೂರಿನಲ್ಲಿ ರೂಂ ಮಾಡಿದ್ದ ಜೊತೆಗಿದ್ದವರನ್ನೂ ಬಂಧಿಸಲಾಗಿದೆ. ಆಶ್ರಯ ನೀಡಿದ ಆರೋಪದಲ್ಲಿ ರೂಂಮೇಟ್ ಗಳ ಬಂಧಿಸಿದ್ದು ತಪ್ಪು ಎಂದು ಎಸ್ಡಿಪಿಐ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ದ.ಕ. ಜಿಲ್ಲಾ ಎಸ್ಡಿಪಿಐ ಕಾರ್ಯದರ್ಶಿ ಅನ್ವರ್ ಬಜತ್ತೂರು, ಸಮಾವೇಶದ ಮುನ್ನವೇ ಆ ಘೋಷಣೆ ಕೂಗಲಾಗಿತ್ತು. ವೀಡಿಯೋ ರಾತ್ರಿ ವೇಳೆ ವೈರಲ್ ಆಗಿತ್ತು. ಆದರೆ ಪೊಲೀಸರು ತಮ್ಮ ಮೇಲೂ ವಾಹನ ಹಾಯಿಸಲು ಯತ್ನಿಸಿದ್ದಾಗಿ ಆರೋಪಿಸಿದ್ದಾರೆ. SDPI ಬೆಳವಣಿಗೆ ಸಹಿಸದೇ ಸಂಘ ಪರಿವಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆ. ಜಗದೀಶ್ ಕಾರಂತ ಈ ಹಿಂದೆ ಹಲವು ಬಾರಿ ಪೊಲೀಸರಿಗೆ, ಡಿಸಿ ಗೆ ಬಹಿರಂಗ ಧಮ್ಕಿ ಹಾಕಿದ್ದರು. ಆಗ ಕಾರಂತ ಬಂಧಿಸಲು ಇಲ್ಲಿನ ಪೊಲೀಸರಿಗೆ ಸಾಧ್ಯವಾಗಿಲ್ಲ. ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಮೋದ್ ಮುತಾಲಿಕ್ ಗೆ ಪೊಲೀಸ್ ಆಯುಕ್ತರು ರಾಜಾತಿಥ್ಯ ನೀಡಿದ್ದನ್ನು ಖಂಡಿಸಿ SDPI ನಾಯಕರು ಪೋಸ್ಟ್ ಮಾಡಿದ್ದರು. ಅಂದಿನಿಂದ SDPI ಹತ್ತಿಕ್ಕಲು ಪೊಲೀಸ್ ಇಲಾಖೆ ಮುಂದಾಗಿದೆ. ಇದು ಪೊಲೀಸ್ ಆಯುಕ್ತರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.
ಪೊಲೀಸರ ಈ ರೀತಿಯ ವರ್ತನೆ ವಿರುದ್ಧ SDPI ಕಾನೂನು ಹೋರಾಟ ಮಾಡಲಿದೆ. ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಿದೆ. ಘೋಷಣೆ ಕೂಗಿದವರನ್ನು ಆರೋಪಿಗಳೆಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಘಟನೆ ಸಂಬಂಧಪಡದವರನ್ನು ಬಂಧಿಸಿದ್ದು ಎಷ್ಟು ಸರಿ. ಸಂಘ ಪರಿವಾರವರನ್ನು ತೃಪ್ತಿ ಪಡಿಸಲು ಈ ರೀತಿ ಮಾಡಲಾಗಿದೆ ಎನ್ನುವ ಅನುಮಾನ ಇದೆ. ಇದರ ಹಿಂದೆ ಇಲ್ಲಿನ ಶಾಸಕ, ಸಂಸದರ ಕೈವಾಡವೂ ಇದೆ ಎಂದು ಆರೋಪಿಸಿದರು.
Mangalore Police have targeted SDPI, unknown youths are arrested in Abusing case slams SDPI today at a press meet held at their office.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm